SHIVAMOGGA LIVE NEWS | 19 FEBRUARY 2024
SHIMOGA : ಲೋಕಾಯುಕ್ತ ಪೊಲೀಸ್ ವಿಭಾಗದ ಜಿಲ್ಲಾ ಅಧಿಕಾರಿಗಳು ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಫೆಬ್ರವರಿ ತಿಂಗಳಲ್ಲಿ ಸಾರ್ವಜನಿಕರ ಕುಂದು ಕೊರತೆ, ಅರ್ಜಿ ಸ್ವೀಕಾರ ಸಭೆ ಆಯೋಜಿಸಿದ್ದಾರೆ. ನಿಗದಿತ ದಿನಾಂಕಗಳನ್ನು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 12.30ರವರೆಗೆ ಸಭೆ ನಡೆಸಲಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಎಲ್ಲೆಲ್ಲಿ ಯಾವಾಗ ಸಭೆ ನಡೆಯಲಿದೆ?
ಫೆ. 26 ರಂದು ಭದ್ರಾವತಿ ತಾಲೂಕು ಪಂಚಾಯತ್ ಸಭಾಂಗಣ ಮತ್ತು ತೀರ್ಥಹಳ್ಳಿ ತಾಲೂಕು ಕಚೇರಿ ಸಭಾಂಗಣ. ಫೆ. 27 ರಂದು ಸಾಗರ ತಾಲೂಕು ಪಂಚಾಯಿತಿ ಸಭಾಂಗಣ ಮತ್ತು ಹೊಸನಗರ ತಾಲೂಕು ಕಚೇರಿ ಸಭಾಂಗಣ. ಫೆ.28 ರಂದು ಸೊರಬ ತಾಲೂಕು ಕಚೇರಿ ಸಭಾಂಗಣ ಮತ್ತು ಶಿಕಾರಿಪುರ ತಾಲೂಕು ಕಚೇರಿ ಸಭಾಂಗಣ. ಫೆ.29 ರಂದು ಶಿವಮೊಗ್ಗ ತಾಲೂಕು ಪಂಚಾಯತ್ ಸಭಾಂಗಣಗಳಲ್ಲಿ ಸಭೆ ನಡೆಯಲಿದೆ.
ಏನೇನೆಲ್ಲ ದೂರು ಸಲ್ಲಿಸಬಹುದು?
ಸರ್ಕಾರಿ ಕರ್ತವ್ಯ ನಿರ್ವಹಿಸಲು ಬೇಜವಾಬ್ದಾರಿತನ, ನಿರ್ಲಕ್ಷ್ಯ. ಅನಗತ್ಯ ವಿಳಂಬ ಮತ್ತು ಅಧಿಕೃತ ಕೆಲಸಕ್ಕಾಗಿ ಲಂಚಕ್ಕೆ ಬೇಡಿಕೆ ಇಟ್ಟಂತಹ ಅಧಿಕಾರಿ ಹಾಗೂ ಸಿಬ್ಬಂದಿ ವಿರುದ್ಧ ಸಾರ್ವಜನಿಕರು ಲಿಖಿತ ಅಹವಾಲು ಸಲ್ಲಿಸುವಂತೆ ಶಿವಮೊಗ್ಗದ ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.
ಇದನ್ನೂ ಓದಿ – ಸರ್ಕಾರಿ ನೌಕರರ ಸಮ್ಮೇಳನಕ್ಕೆ ಶಿವಮೊಗ್ಗದಿಂದ 100 ಬಸ್, 3 ಬೇಡಿಕೆ ಸಲ್ಲಿಸಲು ಪ್ಲಾನ್, ಏನೇನು ಬೇಡಿಕೆ?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200