SHIVAMOGGA LIVE NEWS | 20 MAY 2023
SHIMOGA : ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ಕುಡಿಯುವ ನೀರಿಗೆ ತತ್ವಾರ ಉಂಟಾಗಿದೆ. ಹಾಗಾಗಿ ಟ್ಯಾಂಕರ್ಗಳ (Tanker) ಮೂಲಕ ನೀರು ಪೂರೈಕೆ ಮಾಡಲಾಗುತ್ತಿದೆ. ಕೆಲವು ಕಡೆ ಕೊಳವೆ ಬಾವಿಗಳನ್ನು ಕೊರೆಸಲಾಗಿದೆ. ಇನ್ನು, ಕುಡಿಯುವ ನೀರು ಪೂರೈಕೆ ಸಂಬಂಧ ಟಾಸ್ಕ್ ಫೋರ್ಸ್ ರಚಿಸಲಾಗಿದೆ.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:

ಶಿವಮೊಗ್ಗ ಜಿಲ್ಲೆಯ 109 ಗ್ರಾಮಗಳಿಗೆ ಟ್ಯಾಂಕರ್ (Tanker) ಮೂಲಕ ನೀರು ಪೂರೈಕೆ ಮಾಡಲಾಗುತ್ತಿದೆ ಎಂದು ಜಿಲ್ಲಾಡಳಿತ ಬಿಡುಗಡೆ ಮಾಡಿರುವ ಅಂಕಿ ಅಂಶಗಳಲ್ಲಿ ತಿಳಿಸಲಾಗಿದೆ.
ಟಾಸ್ಕ್ ಫೋರ್ಸ್ ರಚನೆ
ಕುಡಿಯುವ ನೀರು ಪೂರೈಕೆ ಗ್ರಾಮ ಪಂಚಾಯಿತಿಯ ಮೊದಲ ಆದ್ಯತೆಯಾಗಿರಬೇಕು ಎಂದು ಜಿಲ್ಲಾಧಿಕಾರಿ ಅವರು ಸೂಚಿಸಿದ್ದಾರೆ. ಅದರಂತೆ ಜಿಲ್ಲಾ ಪಂಚಾಯಿತಿ ಸಿಇಓ ಅವರು ಸೂಚನೆ ಅನ್ವಯ ಟಾಸ್ಕ್ ಫೊರ್ಸ್ ರಚಿಸಲಾಗಿದೆ. ತಾಲ್ಲೂಕು ಪಂಚಾಯ್ತಿ ಕಾರ್ಯ ನಿರ್ವಾಹಕ ಅಧಿಕಾರಿಗಳು, ತಹಶೀಲ್ದಾರ್ ಹಾಗೂ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರ ಅವರು ಇದರಲ್ಲಿದ್ದಾರೆ. ಈಗಾಗಲೆ ಕುಡಿಯುವ ನೀರಿನ ಅಭಾವ ಉಂಟಾಗಿರುವ ಗ್ರಾಮಗಳನ್ನು ಪರಿಶೀಲಿಸಲಾಗಿದೆ.
ಕೊಳವೆ ಬಾವಿ, ಟ್ಯಾಂಕರ್ ನೀರು
ನೀರಿನ ಅಭಾವ ಇರುವ ಕಡೆಯಲ್ಲಿ ಕೊಳವೆ ಬಾವಿಗಳನ್ನು ಕೊರೆಯಿಸಬೇಕು. ಈಗಾಗಲೆ ಕೊಳವೆ ಬಾವಿಗಳಿದ್ದು ನೀರು ಕಡಿಮೆಯಾಗಿದ್ದರೆ ಇನ್ನಷ್ಟು ಆಳ ಕೊರೆಸಬೇಕು. ಅಗತ್ಯವಿದ್ದಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಬೇಕು ಎಂದು ಸೂಚಿಸಲಾಗಿದೆ. ಅಂತೆಯೇ ಗ್ರಾಮ ಪಂಚಾಯಿತಿಯ 14 ಮತ್ತು 15 ನೇ ಹಣಕಾಸು ಯೋಜನೆಯ ಅನುದಾನದಲ್ಲಿ ಜಿಲ್ಲೆಯಲ್ಲಿ 92 ಬೋರ್ ಕೊರೆಸಲಾಗಿದ್ದು 63 ಯಶಸ್ವಿಯಾಗಿದೆ. 109 ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ.
WATCH VIDEO
ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ
ಯಾವ್ಯಾವ ತಾಲೂಕಿನಲ್ಲಿ ಎಷ್ಟು ಕಡೆ ನೀರು ಪೂರೈಕೆ?
ಶಿವಮೊಗ್ಗ ತಾಲ್ಲೂಕಿನಲ್ಲಿ 8 ಕೊಳವೆ ಬಾವಿ ಕೊರೆಸಲಾಗಿದ್ದು 5 ಯಶಸ್ವಿಯಾಗಿವೆ. ತಾಲ್ಲೂಕಿನ 4 ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ.
ಭದ್ರಾವತಿ ತಾಲ್ಲೂಕಿನಲ್ಲಿ 2 ಬೋರ್ ತೆಗೆಸಲಾಗಿದ್ದು 1 ಯಶಸ್ವಿಯಾಗಿದೆ. 8 ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ನೀಡಲಾಗುತ್ತಿದೆ.
ಸೊರಬ ತಾಲ್ಲೂಕಿನಲ್ಲಿ 10 ಬೋರ್ ಕೊರೆಸಲಾಗಿದ್ದು 8 ಯಶಸ್ವಿಯಾಗಿವೆ. 5 ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ನೀಡಲಾಗುತ್ತಿದೆ.
ಇದನ್ನೂ ಓದಿ – ಶಿವಮೊಗ್ಗಕ್ಕೆ ಸಿಗಲಿಲ್ಲ ಮೊದಲ ಪ್ರಾಶಸ್ತ್ಯ, ಮುನಿಸಿಕೊಂಡರಾ ಶಾಸಕ ಮಧು ಬಂಗಾರಪ್ಪ?
ತೀರ್ಥಹಳ್ಳಿ ತಾಲ್ಲೂಕು ವ್ಯಾಪ್ತಿಯಲ್ಲಿ 30 ಬೋರ್ ಕೊರೆಸಿದ್ದು 22 ಯಶಸ್ವಿಗಾಗಿದೆ. 12 ಗಾಮಗಳಿಗೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗಿದೆ.
ಹೊಸನಗರ ತಾಲ್ಲೂಕಿನ 5 ಬೋರ್ ಕೊರೆಸಲಾಗಿದ್ದು 3 ಯಶಸ್ವಿಯಾಗಿದೆ. 40 ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ನೀಡಲಾಗುತ್ತಿದೆ.
ಸಾಗರ ತಾಲ್ಲೂಕಿನಲ್ಲಿ 7 ರಲ್ಲಿ 3 ಬೋರ್ ಯಶಸ್ವಿಯಾಗಿದ್ದು 35 ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ನೀಡಲಾಗುತ್ತಿದೆ.
ಶಿಕಾರಿಪುರ ತಾಲ್ಲೂಕಿನಲ್ಲಿ 30 ಬೋರ್ ಕೊರೆಸಿದ್ದು 21 ಯಶಸ್ವಿಯಾಗಿದೆ. 5 ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ನೀಡಲಾಗುತ್ತಿದೆ.

LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು





