| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
SHIMOGA, 27 JULY 2024 : ಭಾರಿ ಗಾಳಿ, ಮಳೆಗೆ ಹಳಿ (Track) ಮೇಲೆ ಮರ ಬಿದ್ದ ಪರಿಣಾಮ ಶಿವಮೊಗ್ಗದ ಪ್ರಮುಖ ರೈಲುಗಳು ಸಂಚಾರದಲ್ಲಿ ವ್ಯತ್ಯಯವಾಯಿತು. ಶಿವಮೊಗ್ಗ ತಾಲೂಕು ಸೂಡೂರು ಬಳಿ ರೈಲ್ವೆ ಹಳಿ ಮೇಲೆ ಮರ ಬಿದ್ದಿತ್ತು. ರೈಲ್ವೆ ವಿದ್ಯುತ್ ಲೈನ್ ಕೂಡ ತುಂಡಾಗಿತ್ತು. ಸಿಬ್ಬಂದಿ ತಡರಾತ್ರಿವರೆಗು ಕಾರ್ಯಾಚರಣೆ ನಡೆಸಿ, ಮರ ತೆರವು ಮಾಡಿ, ವಿದ್ಯುತ್ ಲೈನ್ ಸರಿಪಡಿಸಿದರು.
ಇನ್ನೂ ಬೆಂಗಳೂರು ತಲುಪದ ರೈಲು
ಮರ ಬಿದ್ದ ಹಿನ್ನೆಲೆ ರೈಲುಗಳು ತಡವಾಗಿ ಸಂಚರಿಸಿದರು. ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿನಿಂದ ಹೊರಟಿದ್ದ ಇಂಟರ್ಸಿಟಿ ರೈಲು ಸೂಡೂರು ಬಳಿ ಮರ ಬಿದ್ದ ಸ್ಥಳದಲ್ಲಿ ನಿಲ್ಲಿಸಲಾಗಿತ್ತು. ರಾತ್ರಿ 10 ಗಂಟೆಗೆ ತಾಳಗುಪ್ಪ ತಲುಪಬೇಕಿದ್ದ ರೈಲು ಮಧ್ಯರಾತ್ರಿ 1.10ಕ್ಕೆ ತಲುಪಿದೆ.
![]()
ಇನ್ನು, ತಾಳಗುಪ್ಪದಿಂದ ರಾತ್ರಿ ಹೊರಡುವ ಬೆಂಗಳೂರು – ಮೈಸೂರು ಎಕ್ಸ್ಪ್ರೆಸ್ ರೈಲು ರಾತ್ರಿ 9.50ಕ್ಕೆ ಆನಂದಪುರ ನಿಲ್ದಾಣಕ್ಕೆ ತಲುಪಿತ್ತು. ಮರ ತೆರವು ಕಾರ್ಯಾಚರಣೆ ಮುಗಿದ ಮೇಲೆ ರಾತ್ರಿ 2.19ಕ್ಕೆ ಆನಂದಪುರದಿಂದ ಹೊರಟಿದೆ. ರಾತ್ರಿ 11 ಗಂಟೆಗೆ ಶಿವಮೊಗ್ಗಿದಂದ ಹೊರಡಬೇಕಿದ್ದ ರೈಲು ರಾತ್ರಿ 3.45ಕ್ಕೆ ಹೊರಟಿದೆ. ಈ ರೈಲು ಬೆಳಗ್ಗೆ 9 ಗಂಟೆ ಹೊತ್ತಿಗೆ ಬೆಂಗಳೂರು ತಲುಪುವ ಸಾಧ್ಯತೆ ಇದೆ.
![]()
ರೈಲು ಸಂಚಾರ ವ್ಯತ್ಯಯದಿಂದಾಗಿ ಪ್ರಯಾಣಿಕರು ಪರದಾಡಿದರು. ಜೋರು ಮಳೆ, ಚಳಿ, ಬಸ್ಸುಗಳು ಸಿಗದ ಸಮಯ. ಊರು ತಲುಪಲಾಗದೆ ರೈಲಿನಲ್ಲೇ ಕಾಯುತ್ತ ಕೂರಲಾಗದೆ ಸಂಕಷ್ಟಕ್ಕೀಡಾಗಿದ್ದರು.
ಇದನ್ನೂ ಓದಿ ⇓
ಸೂಡೂರು ಬಳಿ ಹಳಿ ಮೇಲೆ ಬಿದ್ದ ಮರ, ನಡು ಹಾದಿಯಲ್ಲೇ ನಿಂತ ಇಂಟರ್ಸಿಟಿ
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಸಿಗಂದೂರು ಸೇತುವೆ ಮೇಲೆ ಆತ್ಮಹತ್ಯೆಗೆ ಯತ್ನಿಸಿದ ಮೈಸೂರಿನ ವ್ಯಕ್ತಿ
- ಯಡೇಹಳ್ಳಿ ಕ್ರಾಸ್ ಬಳಿ ಅರಣ್ಯ ಸಂಚಾರಿ ದಳದ ದಾಳಿ, ಕಾರಾವಾರದ ವ್ಯಕ್ತಿ ಅರೆಸ್ಟ್
- ಅಡಿಕೆ ಎಲೆಚುಕ್ಕಿ ರೋಗ, ಬಾಕಿ ಹಣ ಬಿಡುಗಡೆಗೆ ಸಿಎಂ ಸೂಚನೆ
- ಕಿತ್ತೂರು ರಾಣಿ ಚನ್ನಮ್ಮ, ವೀರ ಮಹಿಳೆ ಪ್ರಶಸ್ತಿಗೆ ಅರ್ಜಿ
- ಸಾಗರ ನಗರಸಭೆ ಎಚ್ಚರಿಕೆ, ಬೀದಿ ನಾಯಿಗಳ ನಿಯಂತ್ರಣ ಕುರಿತು ಪ್ರಮುಖ ಪ್ರಕಟಣೆ
- ‘ಶಿವಮೊಗ್ಗ ಮಹಾನಗರ ಪಾಲಿಕೆಗೆ ಜನವರಿ 2ರವರೆಗೆ ಗಡುವುʼ
- ತೀರ್ಥಹಳ್ಳಿ ಎಳ್ಳಮಾವಾಸ್ಯೆ ಜಾತ್ರೆಗೆ ಸಿದ್ಧತೆ ಜೋರು, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?
- ಬಾವಿಗೆ ಬಿದ್ದ ಗೂಳಿ, ಹರಸಾಹಸ ಮಾಡಿ ಮೇಲೆತ್ತಿದ ಅಗ್ನಿಶಾಮಕ ಸಿಬ್ಬಂದಿ, ಆಗಿದ್ದೆಲ್ಲಿ?
![]()