ಭದ್ರಾವತಿಯಲ್ಲಿ ಚಿನ್ನಾಭರಣ ಕಳ್ಳತನ, ಬೆಂಗಳೂರು ಕೆಂಗೇರಿಯ ಮಹಿಳೆ ಸೇರಿ ಇಬ್ಬರ ಬಂಧನ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಭದ್ರಾವತಿ: ಮನೆಯ ಬೀರುವಿನಲ್ಲಿದ್ದ 95 ಗ್ರಾಂ ಬಂಗಾರದ ಆಭರಣ ಕಳವು ಮಾಡಿದ್ದ ಇಬ್ಬರನ್ನು ಪೇಪರ್‌ ಟೌನ್‌ ಪೊಲೀಸರು ಬಂಧಿಸಿದ್ದಾರೆ (Arrest). ಇವರಿಂದ ₹7.82 ಲಕ್ಷ ಮೌಲ್ಯದ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.

ಬೆಂಗಳೂರಿನ ಕೆಂಗೇರಿ ನಿವಾಸಿ ಆರ್.ಮಂಜುಳಾ(21) ಮತ್ತು ಸುಜೈನ್ ಖಾನ್ (24 ) ಬಂಧಿತರು. ಕಳೆದ ಆ.18ರಂದು ಭದ್ರಾವತಿಯ ಐದನೇ ವಾರ್ಡ್‌ನ ಚಂದ್ರಮ್ಮ ಎಂಬುವರ ಮನೆಗೆ ಬಂದಿದ್ದ ಇವರು ಬೀರುವಿನಲ್ಲಿದ್ದ ಚಿನ್ನಾಭರಣ ಕಳವು ಮಾಡಿದ್ದರು.

ಈ ಬಗ್ಗೆ ಚಂದ್ರಮ್ಮ ಅವರು ಪೇಪರ್ ಟೌನ್‌ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ಭದ್ರಾವತಿ ಡಿವೈಎಸ್ಪಿ ಕೆ.ಆರ್.ನಾಗರಾಜ ಅವರ ಮೇಲ್ವಿಚಾರಣೆಯಲ್ಲಿ ಪೇಪರ್‌ಟೌನ್ ಠಾಣೆ ಇನ್ಸ್‌ಪೆಕ್ಟರ್ ಕೆ.ನಾಗಮ್ಮ ನೇತೃತ್ವದಲ್ಲಿ ಸಿಬ್ಬಂದಿ ರತ್ನಾಕ‌ರ್, ಪ್ರಕಾಶ, ಅರುಣ್, ನಾಗರಾಜ, ಹನುಮಂತ, ಅನುರೂಪಾ ಕಾರ್ಯಾಚರಣೆ ನಡೆಸಿ ಕಳ್ಳರನ್ನು ಬಂಧಿಸಿದ್ದಾರೆ.

New-town-police-nab-two-from-kengeri - Arrest

ಇದನ್ನೂ ಓದಿ » ಶಿವಮೊಗ್ಗದಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ 9ನೇ ತರಗತಿ ವಿದ್ಯಾರ್ಥಿನಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment