SHIMOGA , 28 AUGUST 2024 : ಉಂಬ್ಳೆಬೈಲಿನಿಂದ ನಾಟ ಸಾಗಿಸುತ್ತಿದ್ದ ವೇಳೆ ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ (Raid) ನಡೆಸಿದ್ದಾರೆ. ನಾಲ್ವರು ಆರೋಪಿಗಳು, ಎರಡು ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ.
ಉಂಬ್ಳೆಬೈಲು ವಲಯದ ವ್ಯಾಪ್ತಿಯಲ್ಲಿ ದಾಳಿ ನಡೆಸಲಾಯಿತು. ಸಾರಿಗೆರೆ ಗ್ರಾಮದ ಮಧುಸೂದನ್, ಉಂಬ್ಳೆಬೈಲು ಗ್ರಾಮದ ಕುಮಾರ್, ಕೃಷ್ಣ, ಗಾಜನೂರಿನ ಮೈಲಾರಿ ಎಂಬುವವರನ್ನು ಬಂಧಿಸಲಾಗಿದೆ.
ನಾಟ, ಎರಡು ವಾಹನಗಳು ಸೀಜ್
ಉಂಬ್ಳೆಬೈಲಿನಿಂದ ಗಾಜನೂರಿಗೆ ಸಾಗಿಸಲಾಗುತ್ತಿದ್ದ 6 ಸಾಗುವಾನಿ ನಾಟ ವಶಕ್ಕೆ ಪಡೆಯಲಾಗಿದೆ. ಕೃತ್ಯಕ್ಕೆ ಬಳಸಿದ್ದ ಒಂದು ಗೂಡ್ಸ್ ವಾಹನ, ಒಂದು ಬೈಕ್ ವಶಪಡಿಸಿಕೊಳ್ಳಲಾಗಿದೆ. ಉಂಬ್ಳೆಬೈಲು ವಲಯದ ಆರ್ಎಫ್ಒ ಗಿಡ್ಡಸ್ವಾಮಿ, ಡಿಆರ್ಎಫ್ಒ ಪವನ್ ಮಹೇಂದ್ರಕರ್, ಡಿಆರ್ಎಫ್ಒ ನಾಗರಾಜ, ಶ್ರೀಕಾಂತ್, ದಿನೇಶ್, ಶಂಕರ ವಲಯ, ಸಕ್ರೆಬೈಲು ವನ್ಯಜೀವಿ ವಲಯದ ಅಧಿಕಾರಿಗಳು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು. ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ ⇒ ದರ್ಶನ್ ಸಹಚರರು ಆಗಮನಕ್ಕು ಮುನ್ನವೆ ಶಿವಮೊಗ್ಗ ಜೈಲಿನ ಮೇಲೆ 120 ಪೊಲೀಸರಿಂದ ದಾಳಿ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200