ನದಿಗಳಿಗೆ ಕಸಾಯಿಖಾನೆಯ ತ್ಯಾಜ್ಯ, ಅರುಣ್‌ ಕಳವಳ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಬೆಂಗಳೂರು: ಪಶ್ಚಿಮ ಘಟ್ಟದ ನದಿಗಳಿಗೆ (Rivers) ಕಸಾಯಿಖಾನೆ ಮತ್ತು ಆಸ್ಪತ್ರೆಗಳ ತ್ಯಾಜ್ಯವನ್ನು ಸುರಿಯಲಾಗುತ್ತಿದ್ದು ಸಂಬಂಧಪಟ್ಟವರಿಗೆ ದೂರು ನೀಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ವಿಧಾನ ಪರಿಷತ್ತಿನಲ್ಲಿ ಬಿಜೆಪಿಯ ಡಿ.ಎಸ್.ಅರುಣ್ ಕಳವಳ ವ್ಯಕ್ತಪಡಿಸಿದರು.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಇದನ್ನೂ ಓದಿ – ಶಿವಮೊಗ್ಗದಲ್ಲಿ ಹಾಲಿನ ಪ್ಯಾಕೆಟ್‌ ಕಳ್ಳರ ಹಾವಳಿ, ಸಿಸಿಟಿವಿಯಲ್ಲಿ ಸೆರೆಯಾಯ್ತು ದೃಶ್ಯ

ಪರಿಷತ್ತಿನ ಕಲಾಪದ ಶೂನ್ಯವೇಳೆಯಲ್ಲಿ ಅವರು ವಿಷಯ ಪ್ರಸ್ತಾಪಿಸಿದರು. ಮೊದಲು ಇಂತಹ ಸಮಸ್ಯೆ ಇರಲಿಲ್ಲ. ವರ್ಷದ ಹಿಂದೆ ಇದು ಆರಂಭವಾಗಿದ್ದು, ಈಗ ವಿಪರೀತ ಎನಿಸುವಷ್ಟಾಗಿದೆ. ತುಂಗಾ, ಭದ್ರಾ ಮತ್ತು ಶರಾವತಿ ನದಿಗಳಿಗೆ ತ್ಯಾಜ್ಯ ಸುರಿಯುವುದು ಅವ್ಯಾಹತವಾಗಿ ನಡೆಯುತ್ತಿದೆ. ಈ ಬಗ್ಗೆ ಸ್ಥಳೀಯ ಸಂಸ್ಥೆಗಳಿಗೆ ಹಲವು ಬಾರಿ ದೂರು ನೀಡಲಾಗಿದೆ. ಆದರೆ ಸಮಸ್ಯೆ ಬಗೆಹರಿದಿಲ್ಲ. ಸರ್ಕಾರದ ನಿರ್ಲಕ್ಷ್ಯದ ಕಾರಣದಿಂದಲೇ ಹೀಗಾಗಿದೆ ಎಂದು ಆರೋಪಿಸಿದರು.

DS-Arun-speaks-at-session

ಮಲೆನಾಡಿನ ಪ್ರವಾಸಿ ತಾಣಗಳಿಗೆ ಈಚಿನ ದಿನಗಳಲ್ಲಿ ಜನಸಂದಣಿ ಹೆಚ್ಚಾಗಿದೆ. ಪ್ರವಾಸಿಗರ ನಿಯಂತ್ರಣಕ್ಕೆ ಮತ್ತು ಆ ಸ್ಥಳಗಳ ನಿರ್ವಹಣೆಗೆ ಯಾವುದೇ ವ್ಯವಸ್ಥೆ ಇಲ್ಲ. ಇದರಿಂದಾಗಿ ಎಲ್ಲ ಪ್ರವಾಸಿ ತಾಣಗಳೂ ಕಸದ ತೊಟ್ಟಿಗಳಂತಾಗಿವೆ. ಚಾರ್ಮಾಡಿ ಮತ್ತು ಆಗುಂಬೆ ಘಾಟಿಯ ತಿರುವುಗಳಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ಬಾಟಲಿಗಳು, ಮದ್ಯದ ಬಾಟಲಿಗಳು ರಾಶಿ ರಾಶಿ ಬಿದ್ದಿವೆ. ಇದನ್ನು ನಿಯಂತ್ರಿಸಲು ಸರ್ಕಾರವು ತಕ್ಷಣವೇ ಮುಂದಾಗಬೇಕು ಎಂದು ಆಗ್ರಹಿಸಿದರು.

Total-Readers-of-Shivamogga-Live

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment