ಬೆಂಗಳೂರು: ಪಶ್ಚಿಮ ಘಟ್ಟದ ನದಿಗಳಿಗೆ (Rivers) ಕಸಾಯಿಖಾನೆ ಮತ್ತು ಆಸ್ಪತ್ರೆಗಳ ತ್ಯಾಜ್ಯವನ್ನು ಸುರಿಯಲಾಗುತ್ತಿದ್ದು ಸಂಬಂಧಪಟ್ಟವರಿಗೆ ದೂರು ನೀಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ವಿಧಾನ ಪರಿಷತ್ತಿನಲ್ಲಿ ಬಿಜೆಪಿಯ ಡಿ.ಎಸ್.ಅರುಣ್ ಕಳವಳ ವ್ಯಕ್ತಪಡಿಸಿದರು.
ಪರಿಷತ್ತಿನ ಕಲಾಪದ ಶೂನ್ಯವೇಳೆಯಲ್ಲಿ ಅವರು ವಿಷಯ ಪ್ರಸ್ತಾಪಿಸಿದರು. ಮೊದಲು ಇಂತಹ ಸಮಸ್ಯೆ ಇರಲಿಲ್ಲ. ವರ್ಷದ ಹಿಂದೆ ಇದು ಆರಂಭವಾಗಿದ್ದು, ಈಗ ವಿಪರೀತ ಎನಿಸುವಷ್ಟಾಗಿದೆ. ತುಂಗಾ, ಭದ್ರಾ ಮತ್ತು ಶರಾವತಿ ನದಿಗಳಿಗೆ ತ್ಯಾಜ್ಯ ಸುರಿಯುವುದು ಅವ್ಯಾಹತವಾಗಿ ನಡೆಯುತ್ತಿದೆ. ಈ ಬಗ್ಗೆ ಸ್ಥಳೀಯ ಸಂಸ್ಥೆಗಳಿಗೆ ಹಲವು ಬಾರಿ ದೂರು ನೀಡಲಾಗಿದೆ. ಆದರೆ ಸಮಸ್ಯೆ ಬಗೆಹರಿದಿಲ್ಲ. ಸರ್ಕಾರದ ನಿರ್ಲಕ್ಷ್ಯದ ಕಾರಣದಿಂದಲೇ ಹೀಗಾಗಿದೆ ಎಂದು ಆರೋಪಿಸಿದರು.
ಮಲೆನಾಡಿನ ಪ್ರವಾಸಿ ತಾಣಗಳಿಗೆ ಈಚಿನ ದಿನಗಳಲ್ಲಿ ಜನಸಂದಣಿ ಹೆಚ್ಚಾಗಿದೆ. ಪ್ರವಾಸಿಗರ ನಿಯಂತ್ರಣಕ್ಕೆ ಮತ್ತು ಆ ಸ್ಥಳಗಳ ನಿರ್ವಹಣೆಗೆ ಯಾವುದೇ ವ್ಯವಸ್ಥೆ ಇಲ್ಲ. ಇದರಿಂದಾಗಿ ಎಲ್ಲ ಪ್ರವಾಸಿ ತಾಣಗಳೂ ಕಸದ ತೊಟ್ಟಿಗಳಂತಾಗಿವೆ. ಚಾರ್ಮಾಡಿ ಮತ್ತು ಆಗುಂಬೆ ಘಾಟಿಯ ತಿರುವುಗಳಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ಬಾಟಲಿಗಳು, ಮದ್ಯದ ಬಾಟಲಿಗಳು ರಾಶಿ ರಾಶಿ ಬಿದ್ದಿವೆ. ಇದನ್ನು ನಿಯಂತ್ರಿಸಲು ಸರ್ಕಾರವು ತಕ್ಷಣವೇ ಮುಂದಾಗಬೇಕು ಎಂದು ಆಗ್ರಹಿಸಿದರು.
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ.
ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ.ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..!ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ.ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ.ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ