ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಬೆಂಗಳೂರು: ರಾಜ್ಯದಲ್ಲಿ ಪ್ರಸ್ತುತ ಮುಂಗಾರು (Monsoon) ಮಾರುತಗಳು ನಿರೀಕ್ಷಿತ ಮಟ್ಟದಲ್ಲಿ ಸಕ್ರಿಯವಾಗಿಲ್ಲ. ಸದ್ಯಕ್ಕೆ ಮುಂಗಾರು ದುರ್ಬಲಗೊಂಡಿದ್ದು, ಇನ್ನಷ್ಟು ದಿನ ಒಣಹವೆ ಮುಂದುವರಿಯುವ ಸಾಧ್ಯತೆಯಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಮುಂಗಾರಿನ ಆರಂಭದಲ್ಲಿ ಉತ್ತಮ ಮಳೆ ಕಂಡಿದ್ದ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡದಲ್ಲಿ ಜೂನ್ 6 ರಿಂದ ಜೂನ್ 12 ರವರೆಗೆ ಹೆಚ್ಚಾಗಿ ಬಿಸಿಲಿನ ವಾತಾವರಣ ಇರಲಿದೆ.
ಇನ್ನು, ಉತ್ತರ ಮತ್ತು ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಮಾತ್ರ ಮುಂದಿನ ಐದು ದಿನಗಳ ಕಾಲ ಸಾಧಾರಣ ಪ್ರಮಾಣದಲ್ಲಿ ಮಳೆಯಾಗುವ ನಿರೀಕ್ಷೆಯಿದೆ. ಈ ಪ್ರದೇಶಗಳಲ್ಲೂ ಭಾಗಶಃ ಮೋಡ ಕವಿದ ವಾತಾವರಣದ ಜೊತೆಗೆ ಶುಭ್ರ ಆಕಾಶವೂ ಕಾಣಿಸಿಕೊಳ್ಳಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮಳೆ ಕ್ಷೀಣಿಸಿದ ಕಾರಣ ಹಲವು ಜಿಲ್ಲೆಗಳಲ್ಲಿ ತಾಪಮಾನ ಏರಿಕೆಯಾಗಿದೆ. ಉತ್ತರ ಕರ್ನಾಟಕದಲ್ಲಿ 33ರಿಂದ 37 ಡಿಗ್ರಿ ಸೆಲ್ಸಿಯಸ್, ದಕ್ಷಿಣ ಕರ್ನಾಟಕದಲ್ಲಿ 30ರಿಂದ 32 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.
ಅರಬ್ಬಿ ಸಮುದ್ರದಲ್ಲಿ ಸದ್ಯಕ್ಕೆ ಮುಂಗಾರು ಬಲಗೊಳ್ಳಲು ಪೂರಕವಾದ ವಾತಾವರಣವಿಲ್ಲ ಎಂದು ಹವಾಮಾನ ತಜ್ಞರು ಹೇಳಿದ್ದಾರೆ. ಮಾರುತಗಳು ಪ್ರಬಲಗೊಳ್ಳಲು ಸ್ವಲ್ಪ ಸಮಯ ಬೇಕಾಗುತ್ತದೆ, ಹಾಗಾಗಿ ಸದ್ಯಕ್ಕೆ ರಾಜ್ಯದ ಕೆಲವೆಡೆ ಮಾತ್ರ ಸಾಧಾರಣ ಮಳೆಯಾಗಲಿದೆ. ಸಾರ್ವಜನಿಕರು ಹವಾಮಾನ ವೈಪರೀತ್ಯಗಳಿಗೆ ಸಿದ್ಧರಾಗಿರುವಂತೆ ಹವಾಮಾನ ಇಲಾಖೆ ಸೂಚಿಸಿದೆ.
ಇದನ್ನೂ ಓದಿ » ಆರ್ಸಿಬಿ ಗೆಲುವಿನ ಸಂಭ್ರಮಾಚರಣೆ, ಶಿವಮೊಗ್ಗದಲ್ಲಿ ಅಣ್ಣ, ತಮ್ಮನ ಮೇಲೆ ಹಲ್ಲೆ, ಆಸ್ಪತ್ರೆಗೆ ದಾಖಲು

LATEST NEWS
- ಶಿವಮೊಗ್ಗದಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ, ಧಗಧಗ ಹೊತ್ತಿ ಉರಿದ ಮುಂಭಾಗ

- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

About The Editor
ನಿತಿನ್ ಆರ್.ಕೈದೊಟ್ಲು






