ರಾಜ್ಯದಲ್ಲಿ ಸದ್ಯಕ್ಕೆ ಮುಂಗಾರು ದುರ್ಬಲ, ಇನ್ನಷ್ಟು ದಿನ ಮಳೆ ಇಲ್ಲ, ಕಾರಣವೇನು?

ಬೆಂಗಳೂರು: ರಾಜ್ಯದಲ್ಲಿ ಪ್ರಸ್ತುತ ಮುಂಗಾರು (Monsoon) ಮಾರುತಗಳು ನಿರೀಕ್ಷಿತ ಮಟ್ಟದಲ್ಲಿ ಸಕ್ರಿಯವಾಗಿಲ್ಲ. ಸದ್ಯಕ್ಕೆ ಮುಂಗಾರು ದುರ್ಬಲಗೊಂಡಿದ್ದು, ಇನ್ನಷ್ಟು ದಿನ ಒಣಹವೆ ಮುಂದುವರಿಯುವ ಸಾಧ್ಯತೆಯಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಮುಂಗಾರಿನ ಆರಂಭದಲ್ಲಿ ಉತ್ತಮ ಮಳೆ ಕಂಡಿದ್ದ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡದಲ್ಲಿ ಜೂನ್ 6 ರಿಂದ ಜೂನ್ 12 ರವರೆಗೆ ಹೆಚ್ಚಾಗಿ ಬಿಸಿಲಿನ ವಾತಾವರಣ ಇರಲಿದೆ. ಸುದ್ದಿಯ ಮುಂದಿನ 4 ಪ್ಯಾರಾಗಳು ಕೆಳಗಿವೆ.

ಇನ್ನು, ಉತ್ತರ ಮತ್ತು ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಮಾತ್ರ ಮುಂದಿನ ಐದು ದಿನಗಳ ಕಾಲ ಸಾಧಾರಣ ಪ್ರಮಾಣದಲ್ಲಿ ಮಳೆಯಾಗುವ ನಿರೀಕ್ಷೆಯಿದೆ. ಈ ಪ್ರದೇಶಗಳಲ್ಲೂ ಭಾಗಶಃ ಮೋಡ ಕವಿದ ವಾತಾವರಣದ ಜೊತೆಗೆ ಶುಭ್ರ ಆಕಾಶವೂ ಕಾಣಿಸಿಕೊಳ್ಳಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮಳೆ ಕ್ಷೀಣಿಸಿದ ಕಾರಣ ಹಲವು ಜಿಲ್ಲೆಗಳಲ್ಲಿ ತಾಪಮಾನ ಏರಿಕೆಯಾಗಿದೆ. ಉತ್ತರ ಕರ್ನಾಟಕದಲ್ಲಿ 33ರಿಂದ 37 ಡಿಗ್ರಿ ಸೆಲ್ಸಿಯಸ್, ದಕ್ಷಿಣ ಕರ್ನಾಟಕದಲ್ಲಿ 30ರಿಂದ 32 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.

https://chat.whatsapp.com/JPJ0lTQsTKf365Fqu6Q7cd

ಅರಬ್ಬಿ ಸಮುದ್ರದಲ್ಲಿ ಸದ್ಯಕ್ಕೆ ಮುಂಗಾರು ಬಲಗೊಳ್ಳಲು ಪೂರಕವಾದ ವಾತಾವರಣವಿಲ್ಲ ಎಂದು ಹವಾಮಾನ ತಜ್ಞರು ಹೇಳಿದ್ದಾರೆ. ಮಾರುತಗಳು ಪ್ರಬಲಗೊಳ್ಳಲು ಸ್ವಲ್ಪ ಸಮಯ ಬೇಕಾಗುತ್ತದೆ, ಹಾಗಾಗಿ ಸದ್ಯಕ್ಕೆ ರಾಜ್ಯದ ಕೆಲವೆಡೆ ಮಾತ್ರ ಸಾಧಾರಣ ಮಳೆಯಾಗಲಿದೆ. ಸಾರ್ವಜನಿಕರು ಹವಾಮಾನ ವೈಪರೀತ್ಯಗಳಿಗೆ ಸಿದ್ಧರಾಗಿರುವಂತೆ ಹವಾಮಾನ ಇಲಾಖೆ ಸೂಚಿಸಿದೆ.

ಇದನ್ನೂ ಓದಿ » ಆರ್‌ಸಿಬಿ ಗೆಲುವಿನ ಸಂಭ್ರಮಾಚರಣೆ, ಶಿವಮೊಗ್ಗದಲ್ಲಿ ಅಣ್ಣ, ತಮ್ಮನ ಮೇಲೆ ಹಲ್ಲೆ, ಆಸ್ಪತ್ರೆಗೆ ದಾಖಲು

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ
📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.

Shivamogga Live Promotion

Leave a Comment