ಬೆಂಗಳೂರು: ರಾಜ್ಯದಲ್ಲಿ ಪ್ರಸ್ತುತ ಮುಂಗಾರು (Monsoon) ಮಾರುತಗಳು ನಿರೀಕ್ಷಿತ ಮಟ್ಟದಲ್ಲಿ ಸಕ್ರಿಯವಾಗಿಲ್ಲ. ಸದ್ಯಕ್ಕೆ ಮುಂಗಾರು ದುರ್ಬಲಗೊಂಡಿದ್ದು, ಇನ್ನಷ್ಟು ದಿನ ಒಣಹವೆ ಮುಂದುವರಿಯುವ ಸಾಧ್ಯತೆಯಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಮುಂಗಾರಿನ ಆರಂಭದಲ್ಲಿ ಉತ್ತಮ ಮಳೆ ಕಂಡಿದ್ದ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡದಲ್ಲಿ ಜೂನ್ 6 ರಿಂದ ಜೂನ್ 12 ರವರೆಗೆ ಹೆಚ್ಚಾಗಿ ಬಿಸಿಲಿನ ವಾತಾವರಣ ಇರಲಿದೆ.
ಇನ್ನು, ಉತ್ತರ ಮತ್ತು ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಮಾತ್ರ ಮುಂದಿನ ಐದು ದಿನಗಳ ಕಾಲ ಸಾಧಾರಣ ಪ್ರಮಾಣದಲ್ಲಿ ಮಳೆಯಾಗುವ ನಿರೀಕ್ಷೆಯಿದೆ. ಈ ಪ್ರದೇಶಗಳಲ್ಲೂ ಭಾಗಶಃ ಮೋಡ ಕವಿದ ವಾತಾವರಣದ ಜೊತೆಗೆ ಶುಭ್ರ ಆಕಾಶವೂ ಕಾಣಿಸಿಕೊಳ್ಳಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮಳೆ ಕ್ಷೀಣಿಸಿದ ಕಾರಣ ಹಲವು ಜಿಲ್ಲೆಗಳಲ್ಲಿ ತಾಪಮಾನ ಏರಿಕೆಯಾಗಿದೆ. ಉತ್ತರ ಕರ್ನಾಟಕದಲ್ಲಿ 33ರಿಂದ 37 ಡಿಗ್ರಿ ಸೆಲ್ಸಿಯಸ್, ದಕ್ಷಿಣ ಕರ್ನಾಟಕದಲ್ಲಿ 30ರಿಂದ 32 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.
ಅರಬ್ಬಿ ಸಮುದ್ರದಲ್ಲಿ ಸದ್ಯಕ್ಕೆ ಮುಂಗಾರು ಬಲಗೊಳ್ಳಲು ಪೂರಕವಾದ ವಾತಾವರಣವಿಲ್ಲ ಎಂದು ಹವಾಮಾನ ತಜ್ಞರು ಹೇಳಿದ್ದಾರೆ. ಮಾರುತಗಳು ಪ್ರಬಲಗೊಳ್ಳಲು ಸ್ವಲ್ಪ ಸಮಯ ಬೇಕಾಗುತ್ತದೆ, ಹಾಗಾಗಿ ಸದ್ಯಕ್ಕೆ ರಾಜ್ಯದ ಕೆಲವೆಡೆ ಮಾತ್ರ ಸಾಧಾರಣ ಮಳೆಯಾಗಲಿದೆ. ಸಾರ್ವಜನಿಕರು ಹವಾಮಾನ ವೈಪರೀತ್ಯಗಳಿಗೆ ಸಿದ್ಧರಾಗಿರುವಂತೆ ಹವಾಮಾನ ಇಲಾಖೆ ಸೂಚಿಸಿದೆ.
ಇದನ್ನೂ ಓದಿ » ಆರ್ಸಿಬಿ ಗೆಲುವಿನ ಸಂಭ್ರಮಾಚರಣೆ, ಶಿವಮೊಗ್ಗದಲ್ಲಿ ಅಣ್ಣ, ತಮ್ಮನ ಮೇಲೆ ಹಲ್ಲೆ, ಆಸ್ಪತ್ರೆಗೆ ದಾಖಲು

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200