SHIVAMOGGA LIVE NEWS | 14 JULY 2024
RAINFALL NEWS : ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಸ್ವಲ್ಪ ಬಿರುಸು ಪಡೆದುಕೊಳ್ಳುತ್ತಿದೆ. ಇನ್ನು ನಾಲ್ಕು ದಿನ ಭಾರಿ ಮಳೆಯ ಅಲರ್ಟ್ ಪ್ರಕಟಿಸಲಾಗಿದೆ. ಇನ್ನು, ಕಳೆದ 24 ಗಂಟೆಯಲ್ಲಿ ಸಾಗರ, ಹೊಸನಗರ, ತೀರ್ಥಹಳ್ಳಿಯಲ್ಲಿ ಮಳೆ ಅಬ್ಬರಿಸಿದೆ.
ಯಾವ್ಯಾವ ತಾಲೂಕಿನಲ್ಲಿ ಎಷ್ಟಾಗಿದೆ ಮಳೆ?
ಜುಲೈ 13ರ ಬೆಳಗ್ಗೆ 8.30 ರಿಂದ ಜುಲೈ 14ರ ಬೆಳಗ್ಗೆ 8.30ರವರೆಗೆ ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿದೆ. ಭದ್ರಾವತಿಯಲ್ಲಿ 8.4 ಮಿ.ಮೀ, ಹೊಸನಗರದಲ್ಲಿ 69.4 ಮಿ.ಮೀ, ಸಾಗರದಲ್ಲಿ 71.9 ಮಿ.ಮೀ, ಶಿಕಾರಿಪುರದಲ್ಲಿ 14.2 ಮಿ.ಮೀ, ಶಿವಮೊಗ್ಗದಲ್ಲಿ 14.6, ಸೊರಬದಲ್ಲಿ 23.3 ಮಿ.ಮೀ, ತೀರ್ಥಹಳ್ಳಿಯಲ್ಲಿ 56.7 ಮಿ.ಮೀ ಮಳೆಯಾಗಿದೆ.
ಇನ್ನು ನಾಲ್ಕು ದಿನ ಅಲರ್ಟ್
ಜಿಲ್ಲೆಯಲ್ಲಿ ಇನ್ನು ನಾಲ್ಕು ದಿನ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಜು.15ರಂದು ರೆಡ್ ಅಲರ್ಟ್ ಘೋಷಿಸಲಾಗಿದೆ. ಜು.16 ರಿಂದ 18ರವರೆಗೆ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಪ್ರಕಟಿಸಲಾಗಿದೆ. ತೀರ್ಥಹಳ್ಳಿ, ಸಾಗರ ಮತ್ತು ಹೊಸನಗರ ತಾಲೂಕಿನಲ್ಲಿ ಮಳೆ ಅಬ್ಬರಿಸುವ ಸಾಧ್ಯತೆ ಇದೆ.
ಇದನ್ನೂ ಓದಿ ⇓
ಶಿವಮೊಗ್ಗ KSRTC ನಿಲ್ದಾಣದಲ್ಲಿ ಕಳ್ಳತನ ಕೇಸ್, ಭದ್ರಾವತಿಯ 5 ಮಹಿಳೆಯರು ಅರೆಸ್ಟ್
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200