ಹವಾಮಾನ ವರದಿ: ಆರಂಭದಲ್ಲಿ ಅಬ್ಬರಿಸಿದ್ದ ಪುನರ್ವಸು ಮಳೆ ತಣ್ಣಗಾಗಿದೆ. ಜಿಲ್ಲೆಯಲ್ಲಿ ಮಳೆ ಸಂಪೂರ್ಣ ಕ್ಷೀಣಿಸಿದೆ. ಮಳೆಗಾಲವೋ ಬೇಸಿಗೆಯೋ ಎಂಬ ಅನುಮಾನ ಮೂಡುವಷ್ಟು ವಾತಾವರಣದಲ್ಲಿ ಬದಲಾವಣೆ ಆಗಿದೆ. ಬಿಸಿಲು ಮತ್ತು ತಾಪಮಾನ ಏರಿಕೆಯಾಗಿದೆ.
ಇವತ್ತು ಮಳೆ ಆಗಬಹುದಾ?
ರಾಜ್ಯದ ಯಾವುದೇ ಜಿಲ್ಲೆಗಳಲ್ಲು ಇವತ್ತು ಜೋರು ಮಳೆಯ ಸಾಧ್ಯತೆ ಇಲ್ಲ ಎಂದು ಹಾವಾಮಾನ ಇಲಾಖೆ ತಿಳಿಸಿದೆ. ಅಂತೆಯೇ ಶಿವಮೊಗ್ಗ ಜಿಲ್ಲೆಯಲ್ಲು ಮಳೆ ಇರುವುದಿಲ್ಲ. ಮೋಡ ಕವಿದ ವಾತಾರಣ ಇರುವ ಸಾದ್ಯತೆ ಇದೆ. ಅಲ್ಲಲ್ಲಿ ಸಣ್ಣ ಪ್ರಮಾಣದಲ್ಲಿ ಅಥವಾ ಚದುರಿದ ಹಾಗೆ ಮಳೆಯಾಗಬಹುದು ಎಂದು ಅಂದಾಜಿಸಲಾಗಿದೆ.

ತಾಲೂಕುವಾರು ತಾಪಮಾನದ ವಿವರ
ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಗರಿಷ್ಠ 31 ಡಿಗ್ರಿ, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್. ತೀರ್ಥಹಳ್ಳಿ ಗರಿಷ್ಠ 28 ಡಿಗ್ರಿ, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್. ಹೊಸನಗರ ಗರಿಷ್ಠ 29 ಡಿಗ್ರಿ, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್. ಸಾಗರ ಗರಿಷ್ಠ 28 ಡಿಗ್ರಿ, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್. ಸೊರಬ ಗರಿಷ್ಠ 30 ಡಿಗ್ರಿ, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್. ಶಿಕಾರಿಪುರ ಗರಿಷ್ಠ 30 ಡಿಗ್ರಿ, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.