ಶಿವಮೊಗ್ಗದಲ್ಲಿ ಮಂಗನ ಕಾಯಿಲೆಗೆ ಸಿದ್ದಾಪುರದ ಮಹಿಳೆ ಸಾವು, ಆರೋಗ್ಯ ಇಲಾಖೆ ಅಧಿಕಾರಿಗಳು ಹೇಳಿದ್ದೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

Shivamogga-Live-9-years-Number-1.avif

SHIVAMOGGA LIVE NEWS | 26 FEBRUARY 2024

SHIMOGA : ಮಂಗನ ಕಾಯಿಲೆಗೆ (ಕೆಎಫ್‌ಡಿ) ತುತ್ತಾಗಿದ್ದ ಮಹಿಳೆಯೊಬ್ಬರು ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಸಿದ್ದಾಪುರ ತಾಲೂಕಿನ ಕೊರ್ಲಕೈ ಉಪಕೇಂದ್ರ ವ್ಯಾಪ್ತಿಯ ನಾಗಮ್ಮ (57) ಮೃತ ಮಹಿಳೆ.

ಐಸಿಯುನಲ್ಲಿ ದಾಖಲಾಗಿದ್ದ ನಾಗಮ್ಮ ಅವರು ಫೆ.25ರಂದು ರಾತ್ರಿ 8.30ರ ಹೊತ್ತಿಗೆ ಕೊನೆಯುಸಿರೆಳೆದಿದ್ದಾರೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ರಾಜೇಶ್‌ ಸುರಗಿಹಳ್ಳಿ ತಿಳಿಸಿದ್ದಾರೆ.

ಒತ್ತಾಯವಾಗಿ ಆಸ್ಪತ್ರೆಗೆ ದಾಖಲು

ಜ.28ರಂದು ಆಶಾ ಕಾರ್ಯಕರ್ತೆ ಮನೆ ಭೇಟಿ ವೇಳೆ ನಾಗಮ್ಮ ಅವರಿಗೆ ಕೆಮ್ಮು, ಜ್ವರ ಇರುವುದು ಗೊತ್ತಾಗಿತ್ತು. ಕಫ ಪರೀಕ್ಷೆಗೆ ನೀಡುವಂತೆ ಸೂಚಿಸಿದ್ದರು. ಫೆ.29ರಂದು ಸಾಗರದ ಭಾಗವತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಜ.30 ರಂದು ಆಶಾ ಕಾರ್ಯಕರ್ತೆ ಮನೆ ಭೇಟಿ ಸಂದರ್ಭ ಇನ್ನೂ ಜ್ವರ ಇರುವುದು ಗೊತ್ತಾಗಿತ್ತು. ಈ ಹಿನ್ನೆಲೆ ಸಮುದಾಯ ಆರೋಗ್ಯಾಧಿಕಾರಿ ರಕ್ತದ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಿದ್ದರು. ಫೆ.1ರಂದು ಕೆಎಫ್‌ಡಿ ಆರ್‌ಟಿಪಿಸಿಆರ್‌ ಪಾಸಿಟಿವ್‌ ಎಂದು ತಿಳಿದು ಬಂದಿತ್ತು.

ಫೆ.2ರಂದು ರೋಗಿಯನ್ನು ಸಿದ್ದಾಪುರ ತಾಲ್ಲೂಕು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಹೆಚ್ಚಿನ ಚಿಕಿತ್ಸೆಗೆ ಫೆ.3 ರಂದು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚೇತರಿಕೆ ಕಾಣದ ಹಿನ್ನೆಲೆ ಫೆ.4ರಂದು ಕೆಎಂಸಿ ಮಣಿಪಾಲಕ್ಕೆ ದಾಖಲು ಮಾಡಲಾಗಿತ್ತು. ಫೆ.24 ರಂದು ವೈದ್ಯರ ಸಲಹೆ ವಿರುದ್ಧವಾಗಿ ಕೆಎಂಸಿ ಆಸ್ಪತ್ರೆಯಿಂದ ಮಧ್ಯಾಹ್ನ  3.30ಕ್ಕೆ ಬಿಡುಗಡೆಯಾಗಿದ್ದರು. ಆದರೆ ಆರೋಗ್ಯ ಇಲಾಖೆ ಅಧಿಕಾರಿಗಳು ಮನವೊಲಿಸಿ ಫೆ.24 ರಂದು ಸಂಜೆ ಮೆಗ್ಗನ್ ಆಸ್ಪತ್ರೆಯ ಐಸಿಯುಗೆ ದಾಖಲಿಸಿದ್ದರು ಎಂದು ಡಾ. ರಾಜೇಶ್‌ ಸುರಗಿಹಳ್ಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ – ಶಿವಮೊಗ್ಗದಲ್ಲಿ ಜನ ಸಂಚಾರ ಹೆಚ್ಚಿರುವ ರಸ್ತೆಯಲ್ಲೇ ಬೈಕುಗಳು ನಾಪತ್ತೆ, ಎರಡು ಪ್ರತ್ಯೇಕ ಕೇಸ್‌ ದಾಖಲು

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : February 26, 2024

ಸುಟ್ಟ ಸ್ಥಿತಿಯಲ್ಲಿ ಉಪನ್ಯಾಸಕನ ಮೃತದೇಹ, ದೂರಿನಲ್ಲಿ ಭದ್ರಾವತಿಯ 3 ಸ್ನೇಹಿತರ ಉಲ್ಲೇಖ, ಯಾರದು?

ಸುಟ್ಟ ಸ್ಥಿತಿಯಲ್ಲಿ ಉಪನ್ಯಾಸಕನ ಮೃತದೇಹ, ದೂರಿನಲ್ಲಿ ಭದ್ರಾವತಿಯ 3 ಸ್ನೇಹಿತರ ಉಲ್ಲೇಖ, ಯಾರದು?

ನಿನ್ನ ಬೈಕ್ ಕೊಡು ಎಂದು ವ್ಯಕ್ತಿಯನ್ನು ಅಡ್ಡಗಟ್ಟಿ ಹೊಡೆದ ಅಪರಿಚಿತರು, ಕಾರಣವೇನು? ಏನಿದು ಕೇಸ್‌?

ನಿನ್ನ ಬೈಕ್ ಕೊಡು ಎಂದು ವ್ಯಕ್ತಿಯನ್ನು ಅಡ್ಡಗಟ್ಟಿ ಹೊಡೆದ ಅಪರಿಚಿತರು, ಕಾರಣವೇನು? ಏನಿದು ಕೇಸ್‌?

ಶಿವಮೊಗ್ಗದ ಬೈಪಾಸ್‌ ರಸ್ತೆಯ ಸೇತುವೆ ಬಳಿ ತುಂಗಾ ಹೊಳೆಗೆ ಹಾರಲು ಯತ್ನಿಸಿದ ಬಾಲಕ

ಶಿವಮೊಗ್ಗದ ಬೈಪಾಸ್‌ ರಸ್ತೆಯ ಸೇತುವೆ ಬಳಿ ತುಂಗಾ ಹೊಳೆಗೆ ಹಾರಲು ಯತ್ನಿಸಿದ ಬಾಲಕ

ಸಂಜೆ ಇದ್ದದ್ದು ಬೆಳಗ್ಗೆ ಮಾಯ! ಪುರದಾಳ್ ಡ್ಯಾಂ ಬಳಿ ಆಗಿದ್ದೇನು? ದಾಖಲಾಯ್ತು ಕೇಸ್‌

ಸಂಜೆ ಇದ್ದದ್ದು ಬೆಳಗ್ಗೆ ಮಾಯ! ಪುರದಾಳ್ ಡ್ಯಾಂ ಬಳಿ ಆಗಿದ್ದೇನು? ದಾಖಲಾಯ್ತು ಕೇಸ್‌

ಸಿಡಿಲು ಬಡಿದು ಅಂಗಡಿಗೆ ಬೆಂಕಿ, ವ್ಯಾಪಾರಿ ಸಾವು, ಎಲ್ಲಿ?

ಸಿಡಿಲು ಬಡಿದು ಅಂಗಡಿಗೆ ಬೆಂಕಿ, ವ್ಯಾಪಾರಿ ಸಾವು, ಎಲ್ಲಿ?

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮುಂದುವರೆಯುತ್ತಾ ಮಳೆ? ಇಲ್ಲಿದೆ ಇಂದಿನ ಹವಾಮಾನ ವರದಿ

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮುಂದುವರೆಯುತ್ತಾ ಮಳೆ? ಇಲ್ಲಿದೆ ಇಂದಿನ ಹವಾಮಾನ ವರದಿ

ಇವತ್ತು ತ್ರಯೋದಶಿ, ಶುಭ ಸಮಯ ಎಷ್ಟೊತ್ತಿಗಿದೆ? ಇಂದಿನ ಪಂಚಾಂಗ

ಇವತ್ತು ತ್ರಯೋದಶಿ, ಶುಭ ಸಮಯ ಎಷ್ಟೊತ್ತಿಗಿದೆ? ಇಂದಿನ ಪಂಚಾಂಗ

Bus falls off bridge near Bhadravathi, 30 injured

Bus falls off bridge near Bhadravathi, 30 injured

ಸೇತುವೆಯಿಂದ ಕೆಳಗೆ ಹಾರಿದ ಖಾಸಗಿ ಬಸ್‌, ಹೇಗಾಯ್ತು ಘಟನೆ?

ಸೇತುವೆಯಿಂದ ಕೆಳಗೆ ಹಾರಿದ ಖಾಸಗಿ ಬಸ್‌, ಹೇಗಾಯ್ತು ಘಟನೆ?

BREAKING NEWS – ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ನುಗ್ಗಿದ ಕರಡಿ

BREAKING NEWS – ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ನುಗ್ಗಿದ ಕರಡಿ

Leave a Comment