ಶಿವಮೊಗ್ಗ: ಕಾಂಗ್ರೆಸ್ ಮಹಿಳಾ ಘಟಕದ (Women Congress) ಜಿಲ್ಲಾಧ್ಯಕ್ಷೆಯಾಗಿ ಆಯ್ಕೆಯಾಗಿರುವ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಶ್ವೇತಾ ಬಂಡಿ ಸೆ.27ರಂದು ಬೆಳಗ್ಗೆ 11ಕ್ಕೆ ನಗರದ ಬಂಜಾರ ಕನ್ವೆಷನ್ ಹಾಲ್ನಲ್ಲಿ ಅಧಿಕಾರ ಸ್ವೀಕರಿಸಿದ್ದಾರೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಆರ್.ಪ್ರಸನ್ನಕುಮಾರ್ ತಿಳಿಸಿದರು.
ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರಸನ್ನ ಕುಮಾರ್, ಶಿಕ್ಷಣ ಸಚಿವ ಮಧು ಬಂಗಾರಪ್ಪ, ಮಹಿಳಾ ಕಾಂಗ್ರೆಸ್ ರಾಜ್ಯಾಧ್ಯಕ್ಷೆ ಸೌಮ್ಯರೆಡ್ಡಿ, ಶಾಸಕರಾದ ಬೇಳೂರು ಗೋಪಾಲಕೃಷ್ಣ, ಬಲ್ಕಿಷ್ ಬಾನು, ಬಿ.ಕೆ.ಸಂಗಮೇಶ್ವರ, ಪ್ರಮುಖರಾದ ಗೀತಾ ಶಿವರಾಜ್ ಕುಮಾರ್, ನಿರ್ಗಮಿತ ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಅನಿತಾ ಕುಮಾರಿ ಸೇರಿ ಮಹಿಳಾ ಪದಾಧಿಕಾರಿಗಳು, ಕಾರ್ಯಕರ್ತರು ಆಗಮಿಸಲಿದ್ದಾರೆ ಎಂದರು.
ಜಿಲ್ಲಾ ಪಂಚಾಯಿತಿಯಲ್ಲಿ ಕೆಲಸ ಮಾಡಿದ ಅನುಭವ ಪಕ್ಷ ಸಂಘಟನೆಗೆ ಸಹಾಯ ಮಾಡಲಿದೆ. ಎಲ್ಲರನ್ನು ಒಟ್ಟಾಗಿ ಹಿರಿಯರ ಮಾರ್ಗದರ್ಶನ ಕರೆದೊಯ್ಯಲಾಗುವುದು.
- ಶ್ವೇತಾ ಬಂಡಿ, ಮಹಿಳಾ ಕಾಂಗ್ರೆಸ್ ನಿಯೋಜಿತ ಜಿಲ್ಲಾಧ್ಯಕ್ಷೆ
![]()
ಸುದ್ದಿಗೋಷ್ಠಿಯಲ್ಲಿ ಕಲಗೋಡು ರತ್ನಾಕರ್, ಯಮುನಾ ರಂಗೇಗೌಡ, ವಿಜಯಲಕ್ಷ್ಮಿ ಸಿ ಪಾಟೀಲ್, ವೇದಾ ವಿಜಯಕುಮಾರ್, ರಾಮಚಂದ್ರ, ಭಾರತಿ ರಾಮಕೃಷ್ಣ, ಸುವರ್ಣಾ ನಾಗರಾಜ್, ಅರ್ಚನಾ, ಅಮೀರ್ ಅಂಜಾದ್ ಮತ್ತಿತರರಿದ್ದರು.


ಇದನ್ನೂ ಓದಿ » ಶಿವಮೊಗ್ಗದಲ್ಲಿ ಆನೆಗಳನ್ನು ನೋಡಲು ತಂಡೋಪತಂಡವಾಗಿ ಜನ ಆಗಮನ
