ಯಡಿಯೂರಪ್ಪ ಅಭಿಮಾನೋತ್ಸವ, ಶಿವಮೊಗ್ಗದಲ್ಲಿ ಪೂರ್ವಭಾವಿ ಸಭೆ, ರಾಘವೇಂದ್ರ ಏನೆಲ್ಲ ಹೇಳಿದರು?

ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ (Yediyurappa) ಅವರ ಸಾರ್ವಜನಿಕ ಜೀವನದ 50 ಸಾರ್ಥಕ ವರ್ಷಗಳ ಸಂಭ್ರಮದ (celebration) ಅಂಗವಾಗಿ ಮೇ 9ರಂದು ನಗರದಲ್ಲಿ ಬೃಹತ್ ಅಭಿಮಾನೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ತಿಳಿಸಿದರು.

ನಗರದ ಸರ್ಕಾರಿ ನೌಕರರ ಭವನದಲ್ಲಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಬಿಜೆಪಿಯನ್ನು ತಳಮಟ್ಟದಿಂದ ಸಂಘಟಿಸಿ, ದಶಕಗಳ ಕಾಲ ಜನಸೇವೆಯಲ್ಲಿ ತೊಡಗಿಸಿಕೊಂಡಿರುವ ಬಿ.ಎಸ್‌.ಯಡಿಯೂರಪ್ಪ ಅವರ ಸಾಧನೆಯನ್ನು ಸ್ಮರಿಸಲು ಈ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.

ಕಾರ್ಯಕ್ರಮದ ವಿಶೇಷತೆಗಳೇನು? ರಾಘವೇಂದ್ರ ಏನಂದ್ರು?

  • ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.
  • ಕಾರ್ಯಕ್ರಮಕ್ಕಾಗಿ 100 ಎಕರೆ ಜಾಗದಲ್ಲಿ ಪೆಂಡಾಲ್ ಹಾಗೂ 200 ಅಡಿ ಅಗಲದ ಬೃಹತ್ ವೇದಿಕೆ ನಿರ್ಮಾಣವಾಗುತ್ತಿದೆ.
  • ಜಿಲ್ಲೆ ಸೇರಿದಂತೆ ರಾಜ್ಯದ ವಿವಿಧೆಡೆಯಿಂದ ಸುಮಾರು 10 ಲಕ್ಷಕ್ಕೂ ಅಧಿಕ ಜನ ಸೇರುವ ನಿರೀಕ್ಷೆಯಿದೆ.
  • ಮೇ 8ರಂದು ಬಿ.ಎಸ್. ಯಡಿಯೂರಪ್ಪ ಅವರ ಭವ್ಯ ಪುರಪ್ರವೇಶ ಮೆರವಣಿಗೆ ನಡೆಯಲಿದೆ.
BY-Raghavendra-spoke-at-Yedyurappa-abhimanotsava-celebration-meeting.

ಯಡಿಯೂರಪ್ಪ ಅವರ ಇಚ್ಛಾಶಕ್ತಿಯಿಂದ ಶಿವಮೊಗ್ಗ ಜಿಲ್ಲೆಯ ಚಹರೆಯೇ ಬದಲಾಗಿದೆ. ಅವರ ಅಭಿವೃದ್ಧಿ ತುಡಿತದ ಫಲವಾಗಿ ಜಿಲ್ಲೆ ಇಂದು ಈ ಮಟ್ಟಕ್ಕೆ ಬೆಳೆದಿದೆ. ಅವರ 50 ವರ್ಷಗಳ ಸಾರ್ಥಕ ಸೇವೆಯನ್ನು ಗೌರವಿಸುವುದು ನಮ್ಮೆಲ್ಲರ ಕರ್ತವ್ಯ.

– ಬಿ.ವೈ. ರಾಘವೇಂದ್ರ, ಸಂಸದರು.

ಸಭೆಯಲ್ಲಿ ಪ್ರಮುಖರಾದ ನಟರಾಜ್ ಭಾಗವತ್, ಶಾಸಕರಾದ ಎಸ್.ಎನ್. ಚನ್ನಬಸಪ್ಪ, ಡಿ.ಎಸ್. ಅರುಣ್, ಮಾಜಿ ಶಾಸಕ ಎಸ್. ರುದ್ರೇಗೌಡ ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದರು.

ಇದನ್ನೂ ಓದಿ : ಕೇಂದ್ರ ಸರ್ಕಾರದ ಸಮಿತಿಗೆ ಸಂಸದ ರಾಘವೇಂದ್ರ ಮರು ನೇಮಕ

ನಿತಿನ್ ಆರ್‌.ಕೈದೊಟ್ಲು
ನಿತಿನ್ ಆರ್‌.ಕೈದೊಟ್ಲು

Published : May 5, 2026 at 1:20 PM IST

JNN College of Engineering Admissions started

© ಶಿವಮೊಗ್ಗ ಲೈವ್‌ : ಮೇ 5, 2026