SHIVAMOGGA LIVE NEWS | Non Vegetarian | 8 ಏಪ್ರಿಲ್ 2022
ಶಿವಮೊಗ್ಗ ನಗರದಲ್ಲಿ ಎರಡು ದಿನ ಪ್ರಾಣಿ ವಧೆ ಮತ್ತು ಮಾಂಸ ಮಾರಾಟವನ್ನು ನಿಷೇಧಿಸಲಾಗಿದೆ. ಈ ಸಂಬಂಧ ಮಹಾನಗರ ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಏಪ್ರಿಲ್ 10 ರಂದು ಶ್ರೀರಾಮ ನವಮಿ ಮತ್ತು ಏಪ್ರಿಲ್ 14 ರಂದು ಮಹಾವೀರ ಜಯಂತಿ ಹಾಗೂ ಡಾ. ಅಂಬೇಡ್ಕರ್ ಜಯಂತಿ ಅಂಗವಾಗಿ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟ ನಿಷೇಧಿಸಲಾಗಿದೆ. ಮಾಂಸ ಮಾರಾಟ ಉದ್ದಿಮೆದಾರರು ಆಯಾ ದಿನಾಂಕಗಳಂದು ಮಾರಾಟ ಬಂದ್ ಮಾಡಿ ಸಹಕರಿಸಬೇಕು ಎಂದು ತಿಳಿಸಲಾಗಿದೆ.
ಒಂದು ವೇಳೆ ಆದೇಶ ಉಲ್ಲಂಘಿಸಿದರೆ ಅಂಗಡಿ ಮಾಲೀಕರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮಹಾನಗರಪಾಲಿಕೆ ಆಯುಕ್ತರು ತಿಳಿಸಿದ್ದಾರೆ.
Non Vegetarian
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – [email protected]
WhatsApp Number – 7411700200