ಶಿವಮೊಗ್ಗದ ಲೈವ್.ಕಾಂ | SHIMOGA NEWS | 16 ಫೆಬ್ರವರಿ 2022
ಶಿವಮೊಗ್ಗ ನಗರದಲ್ಲಿ ಎರಡು ದಿನ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.
ಫೆ.17 ಮತ್ತು 18ರಂದು ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸಬೇಕು ಎಂದು ಮಂಡಳಿಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಅವರು ತಿಳಿಸಿದ್ದಾರೆ.
ಮೆಸ್ಕಾಂ ವತಿಯಿಂದ ಮಂಡ್ಲಿ ಭಾಗದಲ್ಲಿ ಸ್ಮಾರ್ಟ್ ಸಿಟಿ ಯೋಜನೆ ಅಡಿ ಕಾಮಗಾರಿ ನಡೆಸಲಾಗುತ್ತಿದೆ. ಆದ್ದರಿಂದ ಕೃಷ್ಣರಾಜೇಂದ್ರ ಜಲ ಶುದ್ಧೀಕರಣ ಕೇಂದ್ರಕ್ಕೆ ವಿದ್ಯುತ್ ಪೂರೈಕೆ ನಿಲುಗಡೆ ಮಾಡಲಾಗಿದೆ. ಇದರಿಂದ ನೀರು ಪೂರೈಕೆಯಲ್ಲಿ ವ್ಯತ್ಯಯ ಆಗುವ ಸಾಧ್ಯತೆ ಇದೆ.
ಇದನ್ನೂ ಓದಿ | About Shivamogga Live