ಶಿವಮೊಗ್ಗ ಲೈವ್.ಕಾಂ | 22 ಫೆಬ್ರವರಿ 2019
ಕಾರಿಗೆ ಫುಲ್ ಟ್ಯಾಂಕ್ ಪೆಟ್ರೋಲ್ ಹಾಕಿಸಿಕೊಂಡು, ಹಣವನ್ನೇ ಕೊಡದೇ, ನಾಲ್ವರು ಪರಾರಿಯಾಗಿದ್ದಾರೆ. ತೀರ್ಥಹಳ್ಳಿಯ ಸಹ್ಯಾದ್ರಿ ಪೆಟ್ರೋಲ್ ಬಂಕ್’ನಲ್ಲಿ ಘಟನೆ ನಡೆದಿದೆ.
ಗುರುವಾರ ಬೆಳಗಿನ ಜಾವ ಗ್ರೇ ಕಲರ್ ಇನ್ನೋವಾ ಕಾರಿನಲ್ಲಿ ಬಂದ ನಾಲ್ವರು, ಫುಲ್ ಟ್ಯಾಂಕ್ ಪೆಟ್ರೋಲ್ ಹಾಕುವಂತೆ ಸೂಚಿಸಿದ್ದಾರೆ. ಪೆಟ್ರೋಲ್ ಭರ್ತಿಯಾಗುತ್ತಿದ್ದಂತೆ, ಏಕಾಏಕಿ ಕಾರು ಚಲಾಯಿಸಿಕೊಂಡು ತೆರಳಿದ್ದಾರೆ. ತೀರ್ಥಹಳ್ಳಿಯ ಕುವೆಂಪು ಸರ್ಕಲ್’ವರೆಗೂ ತೆರಳಿದ ಕಾರು, ನಂತರ ವಾಪಸ್ ತಿರುಗಿ ವೇಗವಾಗಿ ಶಿವಮೊಗ್ಗದ ಕಡೆಗೆ ತೆರಳಿದೆ.
ಕಾರಿನ ಹಿಂಭಾಗದಲ್ಲಿ ನಂಬರ್ ಪ್ಲೇಟ್ ಇರಲಿಲ್ಲ. ಇನ್ನು, ಕಾರಿನಲ್ಲಿದ್ದ ನಾಲ್ವರು ಪಾನಮತ್ತರಾಗಿದ್ದರು ಎಂದು ಹೇಳಲಾಗುತ್ತಿದೆ. ಘಟನೆ ನಡೆಯುತ್ತಿದ್ದಂತೆ ಮಾಳೂರು ಮತ್ತು ಶಿವಮೊಗ್ಗದ ತುಂಗಾನಗರ ಪೊಲೀಸ್ ಠಾಣೆಗೆ ಮಾಹಿತಿ ನೀಡಲಾಯಿತು. ಆದರೆ ಕಾರು ಪತ್ತೆಯಾಗಿಲ್ಲ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | [email protected]