(FILE PHOTO)
ಶಿವಮೊಗ್ಗ ಲೈವ್.ಕಾಂ | SHIMOGA NEWS | 02 FEBRUARY 2021
ತುಂಗಾ ಜಲಾಶಯದಲ್ಲಿ ಲಭ್ಯವಿರುವ ನೀರಿನ ಪ್ರಮಾಣಕ್ಕೆ ಅನುಗುಣವಾಗಿ ಎಡದಂಡೆ ಮತ್ತು ಬಲದಂಡೆ ನಾಲೆಗಳಲ್ಲಿ ನೀರು ಹರಿಸಲಾಗುತ್ತಿದೆ.
ಬೇಸಿಗೆಯಲ್ಲಿ ಶಿವಮೊಗ್ಗ ನಗರಕ್ಕೆ ಕುಡಿಯುವ ನೀರಿನ ಸರಬರಾಜಿಗಾಗಿ ನೀರಿನ ಶೇಖರಣೆ ಅತ್ಯವಶಕ್ಯಕವಾಗಿದೆ. ತೋಟಗಾರಿಕೆ ಹಾಗೂ ನಿಂತ ಬೆಳೆಗಳಿಗೆ ಮಾತ್ರ ಕಾಲುವೆಯಲ್ಲಿ ನೀರು ಹರಿಸಲಾಗುತ್ತದೆ ಎಂದು ನೀರಾವರಿ ನಿಗಮ ತಿಳಿಸಿದೆ.
ಈ ಭಾಗಗಳಲ್ಲಿ ಭತ್ತದ ಬೆಳೆಗೆ ನೀರನ್ನು ಪೂರೈಸಲು ಸಾಧ್ಯ ಆಗುವುದಿಲ್ಲ. ಆದ್ದರಿಂದ ರೈತರು ಬೇಸಿಗೆಯಲ್ಲಿ ಭತ್ತದ ಬೆಳೆ ಬೆಳೆಯಬಾರ ಎಂದು ಸೂಚನೆ ನೀಡಲಾಗಿದೆ.
ಭತ್ತ ಬೆಳೆದು ಹಾನಿಯಾದಲ್ಲಿ ಬೆಳೆ ಪರಿಹಾರಕ್ಕೆ ಇಲಾಖೆ ಜವಾಬ್ದಾರಿ ಆಗುವುದಿಲ್ಲ ಎಂದು ಕರ್ನಾಟಕ ನೀರಾವರಿ ನಿಗಮದ ತುಂಗಾ ಮೇಲ್ದಂಡೆ ಯೋಜನಾ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]