SHIVAMOGGA LIVE NEWS | 9 SEPTEMBER 2023
SHIMOGA : ಭದ್ರಾ ಅಚ್ಚುಕಟ್ಟು (Bhadra Dam) ವ್ಯಾಪ್ತಿಯಲ್ಲಿ ಭತ್ತ ಮತ್ತು ಅಧಿಕ ನೀರು ಬೇಡುವ ಯಾವ ಬೆಳೆಯನ್ನೂ ಬೆಳೆಯಬಾರದು ಎಂದು ನೀರಾವರಿ ಇಲಾಖೆ ಆದೇಶಿಸಿದೆ.
ರಾಜ್ಯದಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಕಾರಣ ಜಲಾಶಯದಲ್ಲಿ ನೀರಿನ ಸಂಗ್ರಹ ಕಡಿಮೆಯಾಗಿದೆ. ಬೇಸಿಗೆಯಲ್ಲಿ ಕುಡಿಯುವುದಕ್ಕೆ, ತೋಟಗಾರಿಕೆ ಹಾಗೂ ಇತರೆ ಬೆಳೆಗಳಿಗೆ ನೀರು ಸಂಗ್ರಹಿಸಿಡಬೇಕಿದೆ. ಆದ್ದರಿಂದ ಭತ್ತ ಹಾಗೂ ಇತರೆ ಬೆಳೆಗಳನ್ನು ಬೆಳೆಯದಂತೆ ಸೂಚಿಸಲಾಗಿದೆ.
ಇದನ್ನೂ ಓದಿ – BREAKING NEWS – ಭದ್ರಾ ನೀರು ನಿರ್ವಹಣಾ ಪ್ರಾಧಿಕಾರ ಸಭೆ, ಯಾರೆಲ್ಲ ಭಾಗಿಯಾಗಿದ್ದಾರೆ?
ಭತ್ತದ ನಾಟಿ ಮಾಡಿ ನೀರಿಲ್ಲದೆ ಬೆಳೆ ನಷ್ಟವಾದರೆ ಅದಕ್ಕೆ ಇಲಾಖೆ ಹೊಣೆಯಲ್ಲ. ಅಚ್ಚುಕಟ್ಟು ವ್ಯಾಪ್ತಿಯಲ್ಲಿ 2023-24ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಅರೆ ನೀರಾವರಿ ಬೆಳೆಗಳಿಗೆ ಭದ್ರಾ ಎಡದಂಡೆ ಮತ್ತು ಬಲದಂಡೆ ನಾಲೆಗಳಿಗೆ ಜಲಾಶಯದಿಂದ ನೀರಿನ ಸಂಗ್ರಹಕ್ಕೆ ಅನುಗುಣವಾಗಿ ನೀರನ್ನು ಹರಿಸಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.