SHIVAMOGGA LIVE NEWS | PROTEST | 4 ಜೂನ್ 2022
ಶಿಕ್ಷಣ ಸಚಿವ ನಾಗೇಶ್ ಅವರ ನಿವಾಸದ ಮುಂದೆ ಪ್ರತಿಭಟನೆ ನಡೆಸಿದ NSUI ಸಂಘಟನೆ ಕಾರ್ಯಕರ್ತರ ಬಂಧನ ಖಂಡಿಸಿ ಶಿವಮೊಗ್ಗದಲ್ಲಿ ಪ್ರತಿಭಟನೆ ನಡೆಸಲಾಯಿತು.
ಶಿವಮೊಗ್ಗದ ಮಹಾವೀರ ವೃತ್ತದಲ್ಲಿ ಪ್ರತಿಭಟನೆ ನಡೆಸಿದ NSUI ಸಂಘಟನೆ ಕಾರ್ಯಕರ್ತರು, ಸರ್ಕಾರ ಅಧಿಕಾರ ದುರ್ಬಳಕೆ ಮಾಡಿಕೊಂಡು NSUI ರಾಜ್ಯಾಧ್ಯಕ್ಷ ಕೀರ್ತಿ ಗಣೇಶ್ ಸೇರಿ 20 ಕಾರ್ಯಕರ್ತರನ್ನು ಬಂಧಿಸಿದೆ. ಸರ್ಕಾರದ ಈ ಕ್ರಮ ಸರಿಯಾದುದ್ದಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯಕ್ರಮ ಸಮಿತಿಯ ಪಠ್ಯಪುಸ್ತಕಗಳನ್ನು ಕೇಸರಿಕರಣಗೊಳಿಸುತ್ತಿದೆ. ವಿದ್ಯಾರ್ಥಿಗಳಲ್ಲಿ ಕೋಮು ದ್ವೇಷ ಬಿತ್ತುವ ಕಾರ್ಯ ನಡೆಸಲಾಗುತ್ತಿದೆ. ಆದ್ದರಿಂದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರನ್ನು ಸಂಪುಟದಿಂದ ವಜಾಗೊಳಿಸಬೇಕು ಎಂದು NSUI ಕಾರ್ಯಕರ್ತರು ಆಗ್ರಹಿಸಿದರು.
NSUI ಸಂಘಟನೆ ಜಿಲ್ಲಾಧ್ಯಕ್ಷ ವಿಜಯಕುಮಾರ್, ಶಿವಮೊಗ್ಗ ನಗರ ಅಧ್ಯಕ್ಷ ಚರಣ, ಗ್ರಾಮಾಂತರ ಅಧ್ಯಕ್ಷ ಹರ್ಷಿತ್, ಪ್ರಮುಖರಾದ ಚೇತನ್ ಗೌಡ, ಮಧುಸೂದನ್, ರವಿ ಕಾಟಿಕೆರೆ, ಚಂದ್ರೋಜಿರಾವ್, ರವಿ, ಪ್ರಮೋದ್, ಆಕಾಶ್, ಅಭಿ, ತೌಫಿಕ್ ಸೇರಿದಂತೆ ಹಲವರು ಇದ್ದರು.
ಇದನ್ನೂ ಓದಿ – ಭದ್ರಾವತಿ ಸರ್ ಎಂ.ವಿ ಕಾಲೇಜು ಉಪನ್ಯಾಸಕರಿಗೆ ಚಿನ್ನದ ಪದಕ, ರಾಷ್ಟ್ರಮಟ್ಟಕ್ಕೆ ಆಯ್ಕೆ
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.