SHIVAMOGGA LIVE NEWS | SHIMOGA | 19 ಏಪ್ರಿಲ್ 2022
ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದ ಪ್ರಮುಖ ಆರೋಪಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರನ್ನು ಬಂಧಿಸಬೇಕು ಎಂದು ಆಗ್ರಹಿಸಿ NSUI ಸಂಘಟನೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಗಾಂಧಿ ಪಾರ್ಕ್ ಬಳಿ ಬಸವೇಶ್ವರ ಪ್ರತಿಮೆ ಮುಂಭಾಗ NSUI ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಎ1 ಆರೋಪಿ. ಸರ್ಕಾರವೆ ಅವರ ರಕ್ಷಣೆಗೆ ನಿಂತಿದೆ ಎಂದು ಆರೋಪಿಸಿದರು.
ಎಲ್ಲರಿಗೂ ಒಂದೇ ಕಾನೂನು ಎಂದು ಹೇಳುವ ಸರ್ಕಾರ ಮತ್ತು ರಾಷ್ಟ್ರಭಕ್ತರ ಪಕ್ಷದ ನಾಯಕರು ಈಶ್ವರಪ್ಪ ಅವರ ಬಂಧನಕ್ಕೆ ಕ್ರಮ ಕೈಗೊಂಡಿಲ್ಲ. ಭ್ರಷ್ಟಾಚಾರ ಮತ್ತು ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪಿಗೆ ಎಸ್ಕಾರ್ಟ್ ಕೊಟ್ಟು ರಕ್ಷಣೆ ಮಾಡಲಾಗುತ್ತಿದೆ. ಈಶ್ವರಪ್ಪ ಅವರನ್ನು ಕೂಡಲೆ ಬಂಧಿಸಬೇಕು ಎಂದು NSUI ಕಾರ್ಯಕರ್ತರು ಆಗ್ರಹಿಸಿದರು.
NSUI ಜಿಲ್ಲಾಧ್ಯಕ್ಷ ವಿಜಯ್ ಕುಮಾರ್, ಗ್ರಾಮಾಂತರ ಅಧ್ಯಕ್ಷ ಹರ್ಷಿತ್, ನಗರ ಅಧ್ಯಕ್ಷ ಚರಣ್, ನಿಹಾಲ್, ಚೇತನ್, ಮಧುಸೂದನ್, ರಮೇಶ್ ರೆಡ್ಡಿ, ಚಂದ್ರೋಜಿ ರಾವ್, ಅಮೃತ್, ಗಿರೀಶ್ ಸೇರಿದಂತೆ ಹಲವರು ಇದ್ದರು.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ