ಶಿವಮೊಗ್ಗ ಲೈವ್.ಕಾಂ | SHIMOGA NEWS | 5 ಅಕ್ಟೋಬರ್ 2020
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮನೆ ಮೇಲೆ ಸಿಬಿಐ ದಾಳಿಯಾಗಿದೆ. ಈ ದಾಳಿ ರಾಜಕೀಯ ಪ್ರೇರಿತ ಅಂತಾ ಆರೋಪಿಸಿ, ಶಿವಮೊಗ್ಗ ಎನ್ಎಸ್ಯುಐ ಕಾರ್ಯಕರ್ತರು ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ ಎನ್ಎಸ್ಯುಐ ಕಾರ್ಯಕರ್ತರನ್ನು ಬಂಧಿಸಲಾಯಿತು.
ಇಲ್ಲಿದೆ ವಿಡಿಯೋ ರಿಪೋರ್ಟ್
ವಿನೋಬನಗರದಲ್ಲಿರುವ ಮುಖ್ಯಮಂತ್ರಿ ಯಡಿಯೂರಪ್ಪ ಮನೆಗೆ ಮಧ್ಯಾಹ್ನ ಮುತ್ತಿಗೆ ಹಾಕಲು ಯತ್ನಿಸಿದರು. ಆದರೆ ಸಿಎಂ ಮನೆಯಿಂದ ಸ್ವಲ್ಪ ದೂರದಲ್ಲೇ ಪೊಲೀಸರು ಎನ್ಎಸ್ಯುಐ ಕಾರ್ಯಕರ್ತರನ್ನು ತಡೆದರು. ಈ ವೇಳೆ ಬಿಜೆಪಿ ಸರ್ಕಾರ, ಯಡಿಯೂರಪ್ಪ ವಿರುದ್ಧ ಎನ್ಎಸ್ಯುಐ ಕಾರ್ಯಕರ್ತರು ಘೋಷಣೆ ಕೂಗಿದರು.
ಸಿಎಂ ಮನೆ ಬಳಿ ಬಂದೋಬಸ್ತ್
ವಿನೋಬನಗರದಲ್ಲಿರುವ ಯಡಿಯೂರಪ್ಪ ಅವರ ಮನೆ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಎನ್ಎಸ್ಯುಐ ಕಾರ್ಯಕರ್ತರ ಮುತ್ತಿಗೆ ಯತ್ನದ ಹಿನ್ನೆಲೆಯಲ್ಲಿ ಯಡಿಯೂರಪ್ಪ ಅವರ ಮನೆಯನ್ನು ಸಂಪರ್ಕಿಸುವ ರಸ್ತೆಗಳಲ್ಲಿ ಬ್ಯಾರಿಕೇಡ್ಗಳನ್ನು ಹಾಕಲಾಗಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]