SHIVAMOGGA LIVE NEWS | 27 APRIL 2023
SAGARA : ಕಾಂಪೌಂಡ್ಗೆ ಓಮ್ನಿ ಕಾರು (Omni Car) ಡಿಕ್ಕಿಯಾಗಿ ಚಾಲಕ ಮೃತಪಟ್ಟಿದ್ದಾನೆ. ಮೃತನನ್ನು ಪ್ರಜ್ವಲ್ ಎಂದು ಗುರುತಿಸಲಾಗಿದೆ. ಸಾಗರ ತಾಲೂಕು ಗೌತಮಪುರ ಬಳಿ ಘಟನೆ ಸಂಭವಿಸಿದೆ.
ಗೌತಮಪುರದಿಂದ ಕೋಟೆ ಕೊಪ್ಪಕ್ಕೆ ಹೋಗುತ್ತಿದ್ದಾಗ ಅಪಘಾತವಾಗಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರು (Omni Car) ಕಾಂಪೌಂಡ್ಗೆ ಡಿಕ್ಕಿ ಹೊಡೆದಿದೆ. ಕಾರಿನಲ್ಲಿದ್ದವರಿಗೆ ಗಾಯಗಳಾಗಿವೆ. ಚಾಲಕ ಪ್ರಜ್ವಲ್ ಗಂಭೀರವಾಗಿ ಗಾಯಗೊಂಡಿದ್ದು, ಮೃತಪಟ್ಟಿದ್ದಾನೆ. ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಸಿಗಂದೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಶಿವಮೊಗ್ಗ – ಭದ್ರಾವತಿ ರಸ್ತೆಯಲ್ಲಿ ಪಲ್ಟಿ, ಅಪಘಾತಕ್ಕೆ ಕಾರಣವೇನು?