SHIVAMOGGA LIVE NEWS
ಸಾಗರ | ಚಾಲಕನ ನಿಯಂತ್ರಣ ತಪ್ಪಿದ ಲಾರಿಯೊಂದು ಎದುರಿನಿಂದ ಬರುತ್ತಿದ್ದ ಎರಡು ಬೈಕ್’ಗಳಿಗೆ ಡಿಕ್ಕಿ (ACCIDENT) ಹೊಡೆದು, ರಸ್ತೆ ಪಕ್ಕದ ಗುಂಡಿಗೆ ಹೋಗಿ ನಿಂತಿದೆ. ಘಟನೆಯಲ್ಲಿ ಓರ್ವ ಬೈಕ್ ಸಾವರ ಸಾವನ್ನಪ್ಪಿದ್ದಾರೆ. ಮೂವರು ಗಾಯಗೊಂಡಿದ್ದಾರೆ.
ಸಾಗರ ತಾಲೂಕಿನ ಹಕ್ರೆಗೊಪ್ಪ ತಿರುವಿನಲ್ಲಿ ಘಟನೆ ಸಂಭವಿಸಿದೆ. ಅಪಘಾತದಲ್ಲಿ ಬೈಕ್ ಸವಾರ, ಪಡವಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಿಳಿಸಿರೆ ಗ್ರಾಮದ ಪ್ರೇಮಾನಂದ (51) ಮೃತಪಟ್ಟಿದ್ದಾರೆ.
ಹೇಗಾಯ್ತು ಘಟನೆ?
ಪ್ರೇಮಾನಂದ ಅವರು ತಮ್ಮ ಪತ್ನಿ ಪಾಲಾಕ್ಷಮ್ಮ ಅವರೊಂದಿಗೆ ಬುಲೆಟ್ ಬೈಕಿನಲ್ಲಿ ಬೆಳ್ಳಿಬೈಲು ಗ್ರಾಮಕ್ಕೆ ತೆರಳುತ್ತಿದ್ದರು. ಇವರ ಹಿಂಬದಿಯಲ್ಲೇ ಹಿರೇನಲ್ಲೂರು ಗ್ರಾಮದ ಸಂತೋಷ್ ಮತ್ತು ಸಂದೀಪ್ ಎಂಬುವವರು ಪಲ್ಸರ್ ಬೈಕಿನಲ್ಲಿ ಬರುತ್ತಿದ್ದರು. ಹಕ್ರೆಕೊಪ್ಪದ ಬಳಿ ಎದುರಿನಿಂದ ಬಂದ ಲಾರಿಯೊಂದು ಏಕಾಏಕಿ ಬುಲೆಟ್ ಮತ್ತು ಪಲ್ಸರ್ ಬೈಕುಗಳಿಗೆ ಡಿಕ್ಕಿ (ACCIDENT) ಹೊಡೆದಿದೆ.
ಘಟನೆಯಲ್ಲಿ ಪ್ರೇಮಾನಂದ ಅವರ ತಲೆಗೆ ತೀವ್ರ ಪೆಟ್ಟಾಗಿದೆ. ಸ್ಥಳದಲ್ಲೆ ಅವರು ಅಸುನೀಗಿದ್ದಾರೆ ಎಂದು ತಿಳಿದು ಬಂದಿದೆ. ಪತ್ನಿ ಪಾಲಾಕ್ಷಮ್ಮ ಅವರಿಗೆ ಗಂಭೀರ ಗಾಯವಾಗಿದೆ. ಪಲ್ಸರ್ ಬೈಕಿನಲ್ಲಿದ್ದ ಸಂತೋಷ್ ಮತ್ತು ಸಂದೀಪ್ ಅವರು ಬೈಕ್ ಬಿಟ್ಟು ಹಾರಿದ್ದಾರೆ. ಪಕ್ಕದ ಹಳ್ಳಕ್ಕೆ ಬಿದ್ದು ಗಾಯಗೊಂಡಿದ್ದಾರೆ.
ಬೈಕುಗಳಿಗೆ ಡಿಕ್ಕಿ ಹೊಡೆದ ಲಾರಿ ರಸ್ತೆ ಪಕ್ಕದ ತಗ್ಗಿನಲ್ಲಿ ಇಳಿದಿದೆ. ಎರಡು ಬೈಕುಗಳು ನುಜ್ಜುಗುಜ್ಜಾಗಿವೆ. ಗಾಯಾಳುಗಳಿಗೆ ಸಾಗರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಯಿತು. ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗಕ್ಕೆ ರವಾನಿಸಲಾಗಿದೆ. ಲಾರಿ ಚಾಲಕನು ಗಾಯಗೊಂಡಿದ್ದಾನೆ ಎಂದು ತಿಳಿದು ಬಂದಿದೆ.
ಸಾಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗ – ರಿಪ್ಪನ್ ಪೇಟೆ ರಸ್ತೆಯಲ್ಲಿ ಹಿಟ್ ಅಂಡ್ ರನ್ ಕೇಸ್, ಬೈಕ್ ಸವಾರ ಸಾವು
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.