SHIVAMOGGA LIVE NEWS | ACCIDENT | 29 ಏಪ್ರಿಲ್ 2022
ಟಿಪ್ಪರ್ ಲಾರಿಯೊಂದು ಬೈಕ್’ಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಬೈಕ್ ಸವಾರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಸೊರಬ ತಾಲೂಕು ಅವಲಗೋಡು ಗ್ರಾಮದ ಯುವರಾಜ್ (38) ಮೃತ ದುರ್ದೈವಿ. ತಾಲೂಕಿನ ಉಳವಿ ಮತ್ತು ಮಳಲಗದ್ದೆ ಗ್ರಾಮದ ಮಧ್ಯೆ ರಾತ್ರಿ ಘಟನೆ ಸಂಭವಿಸಿದೆ.
ಯುವರಾಜ್ ಉಳವಿಯಿಂದ ಅವಲಗೋಡು ಗ್ರಾಮಕ್ಕೆ ಬೈಕಿನಲ್ಲಿ ತೆರಳುತ್ತಿದ್ದ. ಸೊರಬದಿಂದ ಸಾಗರ ಕಡೆಗೆ ತೆರಳುತ್ತಿದ್ದ ಟಿಪ್ಪರ್ ಲಾರಿಯೊಂದು ಬೈಕಿಗೆ ಡಿಕ್ಕಿ ಹೊಡೆದಿದೆ. ಚಾಲಕ ಅತಿ ವೇಗ ಮತ್ತು ಅಜಾಗರೂಕತೆಯಿಂದ ಲಾರಿ ಚಲಾಯಿಸಿದ್ದರಿಂದ ಅಪಘಾತ ಸಂಭವಿಸಿದೆ.
ಘಟನೆಯಲ್ಲಿ ಯುವರಾಜ್ ಗಂಭೀರ ಗಾಯಗೊಂಡು ಸ್ಥಳದಲ್ಲಿ ಮೃತಪಟ್ಟಿದ್ದಾರೆ. ಸೊರಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಭದ್ರಾವತಿ ಬೈಪಾಸ್ ರಸ್ತೆಯಲ್ಲಿ ಅಪಘಾತ, ಸಿದ್ದಾಪುರದ ಯುವಕ ಸ್ಥಳದಲ್ಲೆ ಸಾವು