SHIVAMOGGA LIVE NEWS | INSTAGRAM | 9 ಏಪ್ರಿಲ್ 2022
ತೆಪ್ಪ ಮಗುಚಿ ಶರಾವತಿ ಹಿನ್ನೀರಿನಲ್ಲಿ ಮುಳುಗಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಮೃತರನ್ನು ಕಣಿಕೆ ಗ್ರಾಮದ ಯಲ್ಲಪ್ಪ (55) ಎಂದು ಗುರುತಿಸಲಾಗಿದೆ.
ಸಿಗಂದೂರು ಸಮೀಪದ ಹೊಳೆಬಾಗಿಲು ಸಮೀಪದ ಕಣಿಕೆ ಗ್ರಾಮದ ಬಳಿ ಶರಾವತಿ ಹಿನ್ನೀರಿನಲ್ಲಿ ಯಲ್ಲಪ್ಪ ಮೀನು ಹಿಡಿಯಲು ತೆರಳಿದ್ದರು. ಮೀನು ಹಿಡಿಯುತ್ತಿದ್ದಾಗ ತೆಪ್ಪ ಮಗುಚಿಕೊಂಡು, ಯಲ್ಲಪ್ಪ ಮುಳುಗಿ ಸಾವನ್ನಪ್ಪಿದ್ದಾರೆ.
ಯಲ್ಲಪ್ಪ ಅವರಿಗಾಗಿ ಶೋಧ ಕಾರ್ಯ ನಡೆಸಲಾಯಿತು. ಶುಕ್ರವಾರ ಅವರ ಮೃತದೇಹ ತೇಲಿ ಬಂದಿದೆ. ಸಾಗರ ಗ್ರಾಮಾಂತರ ಠಾಣೆ ಪೊಲೀಸರು ಪರಿಶೀಲನೆ ನಡೆಸಿದರು.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – [email protected]
WhatsApp Number – 7411700200