ಶಿವಮೊಗ್ಗ ಲೈವ್.ಕಾಂ | SHIMOGA NEWS | 30 ಅಕ್ಟೋಬರ್ 2021
ಕಾನೂನು ಬಾಹಿರ ಚಟುವಟಿಕೆಯಲ್ಲಿ ತೊಡಗಿರುವುದು ಸಾಬೀತಾದ ಹಿನ್ನೆಲೆ, ಹರಿಗೆಯ ಅರುಣ ಎಂಬಾತನನ್ನು ಶಿವಮೊಗ್ಗ ಜಿಲ್ಲೆಯಿಂದ ಗಡಿಪಾರು ಮಾಡಲಾಗಿದೆ. ಈ ಸಂಬಂಧ ಶಿವಮೊಗ್ಗ ಉಪ ವಿಭಾಗಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಅರುಣ ಅಲಿಯಾಸ್ ಗೂನಾ ಎಂಬಾತನನ್ನು ಒಂದು ವರ್ಷ ಶಿವಮೊಗ್ಗದಿಂದ ಗಡಿಪಾರು ಮಾಡಲಾಗಿದೆ. ಕಾನೂನು ಬಾಹಿರ ಚುಟುವಟಿಕೆಯಲ್ಲಿ ತೊಡಗಿರುವುದು ಸಾಬೀತಾದ ಹಿನ್ನೆಲೆಯಲ್ಲಿ ಉಪ ವಿಭಾಗಾಧಿಕಾರಿ ಅವರು ಅರುಣನನ್ನು ಗಡಿಪಾರು ಮಾಡಿದ್ದಾರೆ.
ಇವತ್ತಿನಿಂದಲೇ ಗಡಿಪಾರು ಆದೇಶ ಜಾರಿಯಾಗಲಿದೆ. ಆದ್ದರಿಂದ ಅರುಣನನ್ನು ಕೂಡಲೆ ಗಡಿಪಾರು ಮಾಡುವಂತೆ ಶಿವಮೊಗ್ಗ ಡಿವೈಎಸ್’ಪಿ ಅವರಿಗೆ ಉಪ ವಿಭಾಗಾಧಿಕಾರಿ ಅವರು ಆದೇಶದಲ್ಲಿ ತಿಳಿಸಿದ್ದಾರೆ.