SHIVAMOGGA LIVE NEWS | 14 APRIL 2023
SHIMOGA : ವಿಧಾನಸಭೆ ಚುನಾವಣೆಗೆ ನಾಮಪತ್ರ (Nomination) ಸಲ್ಲಿಸುವ ಪ್ರಕ್ರಿಯೆ ಆರಂಭವಾಗಿದೆ. ಮೊದಲ ದಿನ ಜಿಲ್ಲೆಯಲ್ಲಿ ಒಂದು ನಾಮಪತ್ರ ಸಲ್ಲಿಕೆಯಾಗಿದೆ. ಸಾಗರ ವಿಧಾನಸಭೆ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಮಾಜಿ ಜಿಲ್ಲಾಧ್ಯಕ್ಷ ತೀ.ನಾ.ಶ್ರೀನಿವಾಸ್ ಅವರು ನಾಮಪತ್ರ ಸಲ್ಲಿಸಿದ್ದಾರೆ.
ಏಪ್ರಿಲ್ 20ರವರೆಗೆ ನಾಮಪತ್ರ (Nomination) ಸಲ್ಲಿಸಲು ಕೊನೆಯ ದಿನಾಂಕ. ಏ.21ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ನಾಮಪತ್ರ ಹಿಂಪಡೆಯಲು ಏ.24 ಕೊನೆ ದಿನವಾಗಿದೆ.
ಇದನ್ನೂ ಓದಿ – ಮಗಳು ಬಿಜೆಪಿ ಸೇರ್ಪಡೆ ಕುರಿತು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಮೊದಲ ಪ್ರತಿಕ್ರಿಯೆ, ಏನಂದ್ರು ಹಿರಿಯ ನಾಯಕ?