ಶಿವಮೊಗ್ಗ ಲೈವ್.ಕಾಂ | SHIMOGA NEWS | 12 ನವೆಂಬರ್ 2021
ಕಾರು ಮತ್ತು ಲಾರಿ ಮಧ್ಯೆ ಅಪಘಾತ ಸಂಭವಿಸಿದೆ. ಕಾರು ಚಾಲಕ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ವಿನಯ ಗೌಡ (24) ಮೃತ ದುರ್ದೈವಿ ಎಂದು ತಿಳಿದು ಬಂದಿದೆ. ವಿನಯ್ ಗೌಡ ಅವರು ಬಾಣಿಗ ಗ್ರಾಮದಿಂದ ರಾತ್ರಿ ಸಾಗರದ ಕಡೆಗೆ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ.
ಹೊಸಕೆರೆ – ಕೇಶವಪುರ ಮಧ್ಯೆ ಎದುರಿನಿಂದ ಬಂದ ಲಾರಿಯು ಆಲ್ಟೋ ಕಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ನಜ್ಜುಗುಜ್ಜಾಗಿದೆ. ಕಾರಿನಲ್ಲೇ ಸಿಲುಕಿ ವಿಯನಗೌಡ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಕಾರಿಗೆ ಡಿಕ್ಕಿ ಹೊಡೆದ ಬಳಿಕ ಲಾರಿ ಪಲ್ಟಿ ಹೊಡೆದಿದೆ. ಲಾರಿಯಲ್ಲಿ ತುಂಬಿದ್ದ ಭತ್ತದ ಮೂಟೆಗಳು ರಸ್ತೆಗೆ ಬಿದ್ದಿವೆ. ಇದರಿಂದ ಈ ಮಾರ್ಗದಲ್ಲಿ ವಾಹನಗಳ ಸಂಚಾರಕ್ಕೆ ಅಡ್ಡಿ ಉಂಟಾಯಿತು.
ಲಾರಿ ಚಾಲಕ ಅತಿ ವೇಗವೇ ಅಪಘಾತಕ್ಕೆ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಹೊಸನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.