ಶಿವಮೊಗ್ಗದ ಲೈವ್.ಕಾಂ | SHIMOGA NEWS | 22 ಫೆಬ್ರವರಿ 2022
ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ ಮತ್ತು ಪ್ರಕ್ಷುಬ್ದ ವಾತಾವರಣದ ಹಿನ್ನೆಲೆ ಶಿವಮೊಗ್ಗ ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.
ಶಿವಮೊಗ್ಗದ ಬಂದೋಬಸ್ತ್’ಗಾಗಿ ಮೂವರು ಎಸ್.ಪಿಗಳನ್ನು ನಿಯೋಜಿಸಲಾಗಿದೆ. ಒಬ್ಬರು ಹೆಚ್ಚುವರಿ ರಕ್ಷಣಾಧಿಕಾರಿ, 12 ಡಿವೈಎಸ್’ಪಿ, 39 ಇನ್ಸ್ ಪೆಕ್ಟರ್, 54 ಸಬ್ ಇನ್ಸ್ ಪೆಕ್ಟರ್, 48 ಎಎಸ್ಐ, 819 ಕಾನ್ಸ್ ಟೇಬಲ್’ಗಳು, 20 ಕೆ.ಎಸ್.ಆರ್.ಪಿ, 10 ಡಿಎಆರ್, 1 ಆರ್.ಎ.ಎಫ್ ತುಕಡಿಯನ್ನು ನಿಯೋಜನೆ ಮಾಡಲಾಗಿದೆ.
ಅಹಿತಕರ ಘಟನೆಗಳು ಸಂಭವಿಸದಂತೆ ತಡೆಯಲು ನಗರದಾದ್ಯಂತ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.