ಶಿವಮೊಗ್ಗದ ಲೈವ್.ಕಾಂ | SHIMOGA NEWS | 22 ಫೆಬ್ರವರಿ 2022
ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ ಸಂಬಂಧ 12 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು, ಪ್ರಕರಣ ಸಂಬಂಧ 3 ಆರೋಪಿಗಳನ್ನು ಬಂಧಿಸಲಾಗಿದೆ. 12 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ. ಅವರು ಪ್ರಕರಣದಲ್ಲಿ ಭಾಗಿಯಾಗಿರುವುದು ದೃಢವಾದರೆ ಬಂಧಿಸಲಾಗುತ್ತದೆ. ಅಲ್ಲದೆ ಈ ಪ್ರಕರಣದ ಹಿಂದೆ ಯಾರಿದ್ದಾರೆ ಅನ್ನುವುದನ್ನು ಪತ್ತೆ ಹಚ್ಚಲಾಗುತ್ತದೆ ಎಂದು ತಿಳಿಸಿದರು.
ಸದ್ಯ ಶಿವಮೊಗ್ಗ ನಗರ ಶಾಂತಿಯುತವಾಗಿದೆ. ಪೊಲೀಸರು ಬಂದೋಬಸ್ತ್ ಕೈಗೊಂಡಿದ್ದಾರೆ. ಇನ್ನು, ಹರ್ಷ ಅಂತಿಮ ಯಾತ್ರೆ ವೇಳೆ ಕಲ್ಲು ತೂರಾಟ ನಡೆಸಿದವರ ವಿರುದ್ಧವು ಪ್ರಕರಣ ದಾಖಲಿಸಲಾಗುತ್ತದೆ ಎಂದು ತಿಳಿಸಿದರು.