ಶಿವಮೊಗ್ಗದ ಲೈವ್.ಕಾಂ | SHIMOGA NEWS | 2 ಫೆಬ್ರವರಿ 2022
ಮಲವಗೊಪ್ಪದಲ್ಲಿ ಪಿಎಸ್ಐ ನೇತೃತ್ವದ ಪೊಲೀಸರ ತಂಡ ದಾಳಿ ನಡೆಸಿ, ಓ.ಸಿ. ಬರೆಸುತ್ತಿದ್ದ ವ್ಯಕ್ತಿಯೊಬ್ಬರನ್ನು ಅರೆಸ್ಟ್ ಮಾಡಿದ್ದಾರೆ. ಆತನಿಂದ ನಗದು ವಶಕ್ಕೆ ಪಡೆಯಲಾಗಿದೆ.
ಮಲವಗೊಪ್ಪದ ರಾಮಮಂದಿರ ಹಿಂಭಾಗ ಓ.ಸಿ. ಬರೆಸುತ್ತಿರುವ ಕುರಿತು ಖಚಿತ ಮಾಹಿತಿ ಲಭ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ತುಂಗಾ ನಗರ ಠಾಣೆ ಪಿಎಸ್ಐ ಶಿವಪ್ರಸಾದ್ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿದ್ದರು.
ಪೊಲೀಸರನ್ನು ಕಂಡು ಓ.ಸಿ. ಬರೆಸುತ್ತಿದ್ದವರು ಪರಾರಿಯಾಗಿದ್ದಾರೆ. ಓ.ಸಿ. ಬರೆಯುತ್ತಿದ್ದ ಸಂಪತ್ ಕುಮಾರ್ (51) ಎಂಬಾತನನ್ನು ಬಂಧಿಸಲಾಗಿದೆ. ಈತನ ಬಳಿ ಇದ್ದ ನಗದು, ಓ.ಸಿ. ಬರೆಸಲು ಇದ್ದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.
ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.