ಮಾಜಿ ಸಚಿವರ ಪುತ್ರಿ, ಮಾಜಿ ಜಿಲ್ಲಾಧ್ಯಕ್ಷ ಸೇರಿ 13 ಮಂದಿ ಕಾಂಗ್ರೆಸ್‌ ಪಕ್ಷದಿಂದ ಉಚ್ಚಾಟನೆ, ಕಾರಣವೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE | 6 JULY 2023

SHIMOGA : ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರ ಪುತ್ರಿ ಡಾ.ರಾಜನಂದಿನಿ ಸೇರಿದಂತೆ 13 ಮಂದಿಯನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಆರು ವರ್ಷ ಉಚ್ಚಾಟನೆ (Expelled) ಮಾಡಲಾಗಿದೆ. ಈ ಸಂಬಂಧ ಕಾಂಗ್ರೆಸ್‌ ಪಕ್ಷದ ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್‌ ಆದೇಶ ಹೊರಡಿಸಿದ್ದಾರೆ.

Dr-Rajanandini-Kagodu-Daughter-of-Kagodu-Thimmappa

ಉಚ್ಚಾಟನೆಗೆ ಕಾರಣವೇನು?

ಸಾಗರ ಕ್ಷೇತ್ರದಲ್ಲಿ ಕಾಂಗ್ರೆಸ್‌ ತೊರೆದ ಮತ್ತು ಪಕ್ಷದಲ್ಲಿ ಇದ್ದುಕೊಂಡು ಚುನಾವಣೆ ಸಂದರ್ಭ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಆಪಾದನೆ ಮೇಲೆ 13 ಮಂದಿಯನ್ನು ಉಚ್ಚಾಟನೆ (Expelled) ಮಾಡಲಾಗಿದೆ. ಡಾ. ರಾಜನಂದಿನಿ ಕಾಗೋಡು ಅವರು ಕಾಂಗ್ರೆಸ್‌ ಪಕ್ಷ ತೊರೆದು ಮೂರು ತಿಂಗಳ ಹಿಂದೆ ಬಿಜೆಪಿ ಸೇರ್ಪಡೆಯಾಗಿದ್ದರು.

Congress-Shimoga-President-HS-Sundaresh-Press-Meet
ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್‌

ಯಾರನ್ನೆಲ್ಲ ಉಚ್ಚಾಟಿಸಲಾಗಿದೆ?

ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ಭರ್ಮಪ್ಪ ಅಂದಾಸುರ, ಹೊನಗೋಡು ರತ್ನಾಕರ್‌, ಪಕ್ಷದ ಮಾಜಿ ಜಿಲ್ಲಾಧ್ಯಕ್ಷ ತೀ.ನಾ.ಶ್ರೀನಿವಾಸ್‌, ನಗರಸಭೆ ಮಾಜಿ ಸದಸ್ಯ ಜಿ.ಕೆ.ಭೈರಪ್ಪ, ಬ್ಲಾಕ್‌ ಕಾಂಗ್ರೆಸ್‌ ಮಾಜಿ ಪ್ರಧಾನ ಕಾರ್ಯದರ್ಶಿ ರಮೇಶ್‌ ಗಾಳಿಪುರ, ಮಾಸೂರು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ವೆಂಕಟೇಶ್‌ ಮೆಳವರಿಗೆ, ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಪ್ರಕಾಶ್‌ ಲವಿಗ್ಗೆರೆ, ಹೂಸಂತೆ ಗ್ರಾಮ ಪಂಚಾಯಿತಿ ಸದಸ್ಯ ಶಿವಪ್ಪ, ಆನಂದಪುರಂ ಗ್ರಾಮ ಪಂಚಾಯಿತಿ ಸದಸ್ಯ ಮೋಹನ್‌, ತ್ಯಾಗರ್ತಿ ಘಟಕದ ಮಾಜಿ ಅಧ್ಯಕ್ಷ ಅಬ್ದುಲ್‌ ಹಮೀದ್‌,  ಹಿರೇಬಿಲಗುಂಜಿ ಘಟಕದ ಅಧ್ಯಕ್ಷ ರಮೇಶ ಹೂಸಂತೆ, ಗ್ರಾಮ ಪಂಚಾಯಿತಿ ಸದಸ್ಯ ಎಂ.ಹೆಚ್.ವೀರೇಂದ್ರ ಮಡಸೂರು ಉಚ್ಚಾಟನೆ ಮಾಡಲಾಗಿದೆ.

ಇದನ್ನೂ ಓದಿ – ಭದ್ರಾವತಿ ನಗರಸಭೆಗೆ ನೂತನ ಅಧ್ಯಕ್ಷೆ, ಸದಸ್ಯರಾಗಿ ಮೊದಲ ಅವಧಿಯಲ್ಲೆ ಒಲಿದ ಮಹತ್ವದ ಹುದ್ದೆ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment