ಮೆಗಾ ಧಾರಾವಾಹಿಯಂತಿದ್ದ 20 ಲಕ್ಷ ಕೋಟಿ ಪ್ಯಾಕೇಜ್ ಬರಿ ಪುಸ್ತಕದ ಬದನೆಕಾಯಿ, ಶಿವಮೊಗ್ಗ ಕಾಂಗ್ರೆಸ್ ಆಕ್ರೋಶ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 20 ಮೇ 2020

ಕೇಂದ್ರ ಸರ್ಕಾರ ಘೋಷಣೆ ಮಾಡಿರುವ 20 ಲಕ್ಷ ಕೋಟಿ ಹಣದ ಪ್ಯಾಕೇಜ್ ಒಂದು ವಾರದ ಟಿವಿ ಮೆಗಾ ಧಾರಾವಾಹಿಯಂತಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಎಸ್.ಸುಂದರೇಶ್ ಲೇವಡಿ ಮಾಡಿದರು.

ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕರೋನಾ ಸಂಕಷ್ಟದ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಘೋಷಿಸಿರುವ ಈ 20 ಲಕ್ಷ ಕೋಟಿ ಪ್ಯಾಕೇಜ್, ಕೇವಲ ಪುಸ್ತಕದ ಬದನೆಕಾಯಿಯಂತೆ ಕಾಣುತ್ತಿದೆ ಎಂದು ವ್ಯಂಗ್ಯವಾಡಿದರು.

2 ತಿಂಗಳ ಕಾಲ ಲಾಕ್‌ಡೌನ್‌ನಿಂದಾಗಿ ದೇಶದ ಎಲ್ಲಾ ವರ್ಗದ ಜನರಿಗು ಕೇಂದ್ರದ ಮೇಲೆ ಸಾಕಷ್ಟು ನಿರೀಕ್ಷೆ ಇತ್ತು. ಆದರೆ ಕೇಂದ್ರದ ಪ್ಯಾಕೇಜ್‌ನಿಂದ ಎಲ್ಲಾ ಕ್ಷೇತ್ರದವರಿಗೂ ನಿರಾಸೆ ಆಗಿದೆ. ಜಿಡಿಪಿಯ ಕೇವಲ 1% ಮಾತ್ರ ಕೇಂದ್ರ ಸರ್ಕಾರ ವಿನಿಯೋಗ ಮಾಡುತ್ತಿದೆ. ಈ ಪ್ಯಾಕೇಜ್ ಗಿಮಿಕ್ ಎಂದು ಟೀಕಿಸಿದರು.

ಎಲ್ಲಾ ಉದ್ಯಮಿಗಳು ಸಾಲದಲ್ಲಿದ್ದಾರೆ. ಮತ್ತೆ ಸಾಲ ಮಾಡಲು ಕೇಂದ್ರ ಸರ್ಕಾರ ಉತ್ತೇಜಿಸುವುದು ಸರಿಯಲ್ಲ. ಕೇಂದ್ರದ ತೀರ್ಮಾನಗಳು ಬೋಗಸ್ ಅನಿಸುತ್ತಿದೆ. 2 ವರ್ಷಗಳ ಕಾಲ ಜಿಎಸ್‌ಟಿ ಸಂಗ್ರಹ ಮಾಡಬಾರದು. ಇಲ್ಲದಿದ್ದರೆ ವರ್ಕಿಂಗ್ ಕ್ಯಾಪಿಟಲ್, ಕಾರ್ಮಿಕರು ಇಲ್ಲದೇ ಉದ್ಯಮಗಳು ಪುನಾರಂಭಗೊಳ್ಳುವುದು ಸಾಧ್ಯವಾಗುವುದಿಲ್ಲ ಎಂದರು.

ರೈತರಿಗೆ 1 ಲಕ್ಷ ಕೋಟಿ ಹಣ ನಿಗದಿಪಡಿಸಿರುವುದು ಕಾಗದದಲ್ಲಿ ಮಾತ್ರ ಕಾಣಿಸಲಾಗಿದೆ. ಕೃಷಿ ಇಲಾಖೆ ಚಟುವಟಿಕೆಗೆ ಸಹಕರಿಸಬೇಕಾದ ಕೇಂದ್ರದ ಬಿಜೆಪಿ ಸರ್ಕಾರ ನೇರವಾಗಿ ಸಹಾಯ ಮಾಡಬೇಕಿತ್ತು. ಕೃಷಿಕರಿಗೆ ಯಾವುದೇ ಹೊಸ ಯೋಜನೆಗಳು ಇಲ್ಲ. ಬೆಳೆದ ಬೆಳೆಗೆ ಮಾರುಕಟ್ಟೆ ಸಿಗುತ್ತಿಲ್ಲ. ಪ್ಯಾಕೇಜ್ ಮೂಲಕ ಮೊದಲು ರೈತರ ಸಾಲ ಮನ್ನಾ ಮಾಡಬೇಕು. 2 ವರ್ಷ ಅವರು ಚೇತರಿಸಿಕೊಳ್ಳಲು ಬೀಜ ಮತ್ತು ಗೊಬ್ಬರ ಉಚಿತವಾಗಿ ನೀಡಬೇಕು ಎಂದು ಒತ್ತಾಯಿಸಿದರು.

ಪ್ರಮುಖರಾದ ರಾಮೇಗೌಡ, ನಾಗರಾಜ್‌ಗೌಡ, ಚಂದ್ರಶೇಖರ್ ಮತ್ತಿತರರು ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು. 

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 20, 2020

ಇಂದಿನ ಪಂಚಾಂಗ, ಇವತ್ತು ಶುಭ ಸಮಯ ಎಷ್ಟೊತ್ತಿಗಿದೆ? ದಿನ ನಕ್ಷತ್ರ ಯಾವುದು?

ಇಂದಿನ ಪಂಚಾಂಗ, ಇವತ್ತು ಶುಭ ಸಮಯ ಎಷ್ಟೊತ್ತಿಗಿದೆ? ದಿನ ನಕ್ಷತ್ರ ಯಾವುದು?

ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಹೊಂಬುಜದಲ್ಲಿ ಕುಂಕುಮೋತ್ಸವದ ಓಕಳಿಯಲ್ಲಿ ಮಿಂದೆದ್ದ ಭಕ್ತರು

ಹೊಂಬುಜದಲ್ಲಿ ಕುಂಕುಮೋತ್ಸವದ ಓಕಳಿಯಲ್ಲಿ ಮಿಂದೆದ್ದ ಭಕ್ತರು

ರೈಲಿಗೆ ಸಿಲುಕಿ 74 ವರ್ಷದ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

ರೈಲಿಗೆ ಸಿಲುಕಿ 74 ವರ್ಷದ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

ದ್ವಿತೀಯ ಪಿಯುಸಿ ಉತ್ತರಪತ್ರಿಕೆ ಮೌಲ್ಯಮಾಪನ ಬಹಿಷ್ಕರಿಸುವ ಎಚ್ಚರಿಕೆ, ಕಾರಣವೇನು?

ದ್ವಿತೀಯ ಪಿಯುಸಿ ಉತ್ತರಪತ್ರಿಕೆ ಮೌಲ್ಯಮಾಪನ ಬಹಿಷ್ಕರಿಸುವ ಎಚ್ಚರಿಕೆ, ಕಾರಣವೇನು?

ನಿಧಿ ಆಪ್ಕೆ ನಿಕಟ್ 2.0, ತೀರ್ಥಹಳ್ಳಿ ಮತ್ತು ದಾವಣಗೆರೆಯಲ್ಲಿ ಮಹತ್ವದ ಕಾರ್ಯಕ್ರಮ

ನಿಧಿ ಆಪ್ಕೆ ನಿಕಟ್ 2.0, ತೀರ್ಥಹಳ್ಳಿ ಮತ್ತು ದಾವಣಗೆರೆಯಲ್ಲಿ ಮಹತ್ವದ ಕಾರ್ಯಕ್ರಮ

ಶಿವಮೊಗ್ಗದಲ್ಲಿ ಸಾಕು ನಾಯಿ ವಿಚಾರಕ್ಕೆ ಶುರುವಾದ ಕಿರಿಕ್, ಹಲ್ಲು ಮುರಿಯುವ ಹಂತಕ್ಕೆ ಹೋಯ್ತು

ಶಿವಮೊಗ್ಗದಲ್ಲಿ ಸಾಕು ನಾಯಿ ವಿಚಾರಕ್ಕೆ ಶುರುವಾದ ಕಿರಿಕ್, ಹಲ್ಲು ಮುರಿಯುವ ಹಂತಕ್ಕೆ ಹೋಯ್ತು

ಸಿಲಿಂಡರ್ ಬುಕ್ಕಿಂಗ್, ಶಿವಮೊಗ್ಗದಲ್ಲಿ ಸಹಾಯವಾಣಿ ಆರಂಭ, ಇಲ್ಲಿವೆ ಎರಡು ನಂಬರ್‌

ಸಿಲಿಂಡರ್ ಬುಕ್ಕಿಂಗ್, ಶಿವಮೊಗ್ಗದಲ್ಲಿ ಸಹಾಯವಾಣಿ ಆರಂಭ, ಇಲ್ಲಿವೆ ಎರಡು ನಂಬರ್‌

ಶಿವಮೊಗ್ಗದಲ್ಲಿ ಅಬಕಾರಿ ಇಲಾಖೆಯಿಂದ ವಾಹನಗಳ ಹರಾಜು, ಯಾವಾಗ?

ಶಿವಮೊಗ್ಗದಲ್ಲಿ ಅಬಕಾರಿ ಇಲಾಖೆಯಿಂದ ವಾಹನಗಳ ಹರಾಜು, ಯಾವಾಗ?

₹1,400 ಇದ್ದ ಶುಲ್ಕ ಈಗ ₹28,000, ಶಿವಮೊಗ್ಗ ಲಾರಿ ಮಾಲೀಕರ ಆಕ್ರೋಶ, ಕಾರಣವೇನು?

₹1,400 ಇದ್ದ ಶುಲ್ಕ ಈಗ ₹28,000, ಶಿವಮೊಗ್ಗ ಲಾರಿ ಮಾಲೀಕರ ಆಕ್ರೋಶ, ಕಾರಣವೇನು?

Leave a Comment