Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » ಶಿವಮೊಗ್ಗದ 7 ಕ್ಷೇತ್ರದ ಚುನಾವಣೆ ಫಲಿತಾಂಶ, ತಿಳಿಯಬೇಕಾದ 5 ವಿಚಾರಗಳು ಇಲ್ಲಿವೆ

ಶಿವಮೊಗ್ಗದ 7 ಕ್ಷೇತ್ರದ ಚುನಾವಣೆ ಫಲಿತಾಂಶ, ತಿಳಿಯಬೇಕಾದ 5 ವಿಚಾರಗಳು ಇಲ್ಲಿವೆ

15/05/2023 6:50 AM
ನಿತಿನ್‌ ಕೈದೊಟ್ಲು
CLICK HERE TO JOIN SHIVAMOGGA LIVE WHATSAPP GROUP

SHIVAMOGGA LIVE NEWS | 15 MAY 2023

 

» ಶಿವಮೊಗ್ಗ ಲೈವ್‌ ವಾಟ್ಸಪ್‌ ಗ್ರೂಪ್‌ ಸೇರಲು ಇಲ್ಲಿ ಕ್ಲಿಕ್‌ ಮಾಡಿ

SHIMOGA : ವಿಧಾನಸಭೆ ಚುನಾವಣೆ ಫಲಿತಾಂಶ (Election Result) ಪ್ರಕಟವಾಗಿದ್ದು ಜಿಲ್ಲೆಯಲ್ಲಿ ಕಾಂಗ್ರೆಸ್‌, ಬಿಜೆಪಿ ಪಾರಮ್ಯ ಮೆರೆದಿವೆ. ಜೆಡಿಎಸ್‌ ಪಕ್ಷ ಕೂಡ ತನ್ನ ಇರುವಿಕೆಯನ್ನು ಸೂಚಿಸಿದೆ. ಈ ಫಲಿತಾಂಶದಲ್ಲಿ ಗಮನಿಸಬೇಕಾದ ವಿಚಾರಗಳು ಇಲ್ಲಿವೆ.

ಪ್ರಮುಖಾಂಶ 1 : ಈ ಬಾರಿ ಇಬ್ಬರು ಹೊಸಬರು ವಿಧಾನಸಭೆ ಪ್ರವೇಶಿಸುತ್ತಿದ್ದಾರೆ. ಶಿವಮೊಗ್ಗ ನಗರದ ಬಿಜೆಪಿ ಅಭ್ಯರ್ಥಿ ಎಸ್‌.ಎನ್.ಚನ್ನಬಸಪ್ಪ, ಶಿಕಾರಿಪುರ ಕ್ಷೇತ್ರದ ಬಿ.ವೈ.ವಿಜಯೇಂದ್ರ ಇದೇ ಮೊದಲು ವಿಧಾನಸಭೆಗೆ ತೆರಳುತ್ತಿದ್ದಾರೆ. ಇಬ್ಬರು ಒಂದೇ ಪಕ್ಷದವರು ಎಂಬುದು ವಿಶೇಷ.

ಇದನ್ನೂ ಓದಿ – ಜನ, ಜನಪ್ರತಿನಿಧಿಗಳು, ಮೆಗ್ಗಾನ್‌ ಸಿಬ್ಬಂದಿ, ಪೊಲೀಸರಿಂದಾಗಿ ಉಳಿಯಿತು ಹಲವರ ಪ್ರಾಣ, ಸಿಕ್ತು ಸೂಕ್ತ ಚಿಕಿತ್ಸೆ, ಹೇಗದು?

ಪ್ರಮುಖಾಂಶ 2 : ಮೂವರು ಮಾಜಿಗಳಿಗೆ ಮತ್ತೆ ವಿಧಾನಸಭೆಯಲ್ಲಿ ಕೂರುವ ಅವಕಾಶ ಲಭಿಸಿದೆ. ಶಿವಮೊಗ್ಗ ಗ್ರಮಾಂತರ ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿ ಶಾರದಾ ಪೂರ್ಯಾನಾಯ್ಕ್‌, ಸೊರಬದ ಕಾಂಗ್ರೆಸ್‌ ಅಭ್ಯರ್ಥಿ ಮಧು ಬಂಗಾರಪ್ಪ, ಸಾಗರದ ಕಾಂಗ್ರೆಸ್‌ ಅಭ್ಯರ್ಥಿ ಬೇಳೂರು ಗೋಪಾಲಕೃಷ್ಣ ಅವರು ಪುನಃ ವಿಧಾನಸಭೆಗೆ ತೆರಳುತ್ತಿದ್ದಾರೆ.

ಪ್ರಮುಖಾಂಶ 3 : ಈ ಬಾರಿ ಘಟನುಘಟಿಗಳು ಇಲ್ಲ. ಮಾಜಿ ಸಿಎಂ ಯಡಿಯೂರಪ್ಪ, ಮಾಜಿ ಸಚಿವರಾದ ಕೆ.ಎಸ್.ಈಶ್ವರಪ್ಪ, ಕಾಗೋಡು ತಿಮ್ಮಪ್ಪ ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದ್ದಾರೆ. ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ ಸೋಲನುಭವಿಸಿದ್ದಾರೆ. ಪುನರಾಯ್ಕೆ ಆಗಿರುವ ತೀರ್ಥಹಳ್ಳಿಯ ಆರಗ ಜ್ಞಾನೇಂದ್ರ, ಭದ್ರಾವತಿಯ ಬಿ.ಕೆ.ಸಂಗಮೇಶ್ವರ ಅವರೆ ಈ ಬಾರಿ ಜಿಲ್ಲೆಯ ಸೀನಿಯರ್‌ ಶಾಸಕರು.

WATCH VIDEO

ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ

ಪ್ರಮುಖಾಂಶ 4 : ಗೆದ್ದ ಅಭ್ಯರ್ಥಿಗಳ (Election Result) ಪೈಕಿ ಹಲವರಿಗೆ ಗೆಲುವು ಸುಲಭದ್ದಾಗಿರಲಿಲ್ಲ. ಸ್ವಲ್ಪ ಮೈಮರೆತಿದ್ದರು ಸೋಲಾಗುವ ಭೀತಿ ಇತ್ತು. ಭದ್ರಾವತಿಯಲ್ಲಿ ಬಿ.ಕೆ.ಸಂಗಮೇಶ್ವರ್‌ ಮತ್ತು ಶಾರದಾ ಅಪ್ಪಾಜಿ ಅವರ ಮಧ್ಯೆ ಟೈಟ್‌ ಫೈಟ್‌ ಇತ್ತು. ಶೇ.1.74ರಷ್ಟು ಮತಗಳ ಅಂತರದಲ್ಲಿ ಸಂಗಮೇ‍ಶ್ವರ್‌ ಅವರು ಗೆದ್ದಿದ್ದಾರೆ. ಶಿಕಾರಿಪುರದಲ್ಲಿ ಬಿ.ವೈ.ವಿಜಯೇಂದ್ರ 81,810 ಮತಗಳು, ಪಕ್ಷೇತರ ಅಭ್ಯರ್ಥಿ ಎಸ್‌.ಪಿ.ನಾಗನಗೌಡ 70,802 ಮತಗಳನ್ನು ಪಡೆದಿದ್ದಾರೆ. ಇಬ್ಬರ ಮಧ್ಯೆ ಜಿದ್ದಾಜಿದ್ದಿ ಇತ್ತು. ಬಿಜೆಪಿ ಪಾಳಯ ಸ್ವಲ್ಪ ವಿರಮಿಸಿದ್ದರು ಅಂತರ ಕಡಿಮೆ ಅಥವಾ ಫಲಿತಾಂಶ ತಲೆ ಕೆಳಗಾಗುವ ಸಾ‍ಧ್ಯತೆ ಇತ್ತು. ತೀರ್ಥಹಳ್ಳಿ, ಶಿವಮೊಗ್ಗ ಗ್ರಾಮಾಂತರದಲ್ಲಿಯು ಇದೇ ರೀತಿ ಹಣಾಹಣಿ ಇತ್ತು.

ಪ್ರಮುಖಾಂಶ 5 : ಹರಸಾಹಸ ಪಟ್ಟು ಹಲವರು ಈ ಬಾರಿ ವಿವಿಧ ಪಕ್ಷಗಳಿಂದ ಟಿಕೆಟ್‌ ಪಡೆದಿದ್ದರು. ಪ್ರತಿಷ್ಠೆಯನ್ನ ಪಣಕ್ಕಿಟ್ಟು ಚುನಾವಣೆಯಲ್ಲಿ ಸ್ಪರ್ಧಿಸಿದ್ದರು. ಅವರ ರಾಜಕೀಯ ಭವಿಷ್ಯಕ್ಕೆ ಕಾರ್ಮೋಡ ಆವರಿಸಿದೆ. ಮಾಜಿಗಳಾದವರಿಗು ಮುಂದಿನ ಚುನಾವಣೆಯಲ್ಲಿ ಟಿಕೆಟ್‌ ಸಿಗುವ ಗ್ಯಾರಂಟಿ ಇಲ್ಲ. ಹಾಗಾಗಿ ಹಲವರ ರಾಜಕೀಯ ಅಂತ್ಯವಾಗುವ ಸಾಧ್ಯತೆ ಇದೆ.

Shivamogga Live | Whatsapp7411700200
CLICK HERE TO JOIN SHIVAMOGGA LIVE WHATSAPP GROUP

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Byನಿತಿನ್‌ ಕೈದೊಟ್ಲು
Editor
Follow:
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Previous Article crime name image ರಸ್ತೆ ಬದಿ ನಡೆದು ಹೋಗುತ್ತಿದ್ದ ವ್ಯಕ್ತಿಗೆ ಹಿಂಬದಿಯಿಂದ ಬಂದು ಗುದ್ದಿದ ಬೈಕ್
Next Article ACCIDENT-NEWS-GENERAL-IMAGE. ಉಂಬ್ಳೆಬೈಲು ಸಮೀಪ ಬೈಕ್‌, ಬೊಲೇರೋ ಮುಖಾಮುಖಿ ಡಿಕ್ಕಿ

ಇದನ್ನೂ ಓದಿ

POLITICSSHIVAMOGGA CITY

ಶಿವಮೊಗ್ಗದಲ್ಲಿ ಜೋರು ಮಳೆಯಲ್ಲಿ ವಿಜಯೇಂದ್ರ ಭಾಷಣ, ಏನೆಲ್ಲ ಹೇಳಿದರು? ಇಲ್ಲಿದೆ ಪ್ರಮುಖ ಪಾಯಿಂಟ್ಸ್‌

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
13/04/2025
MLA-SN-Channabasappa-Shimoga.
POLITICSSHIVAMOGGA CITY

ಬೆಂಗಳೂರಿನಲ್ಲಿ ಅಹೋರಾತ್ರಿ ಧರಣಿ, ಶಿವಮೊಗ್ಗದಿಂದ ನೂರಾರು ಬಿಜೆಪಿ ಕಾರ್ಯಕರ್ತರು, ಎಂಎಲ್‌ಎ ಹೇಳಿದ್ದೇನು?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
02/04/2025
Madhu-Bangarappa-Minister
POLITICS

ಇವತ್ತು, ನಾಳೆ ಉಸ್ತುವಾರಿ ಸಚಿವರಿಂದ ಶಿವಮೊಗ್ಗ ಜಿಲ್ಲೆ ಪ್ರವಾಸ, ಎಲ್ಲೆಲ್ಲಿ ಭೇಟಿ ನೀಡ್ತಾರೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
22/03/2025
Dr-Dhananjaya-Sarji-in-session.
POLITICSSHIVAMOGGA CITY

ವಿಧಾನಸೌಧದಲ್ಲಿ ಕುವೆಂಪು ವಿ.ವಿ ಕುರಿತು ಚರ್ಚೆ, ಡಾ. ಸರ್ಜಿ ಏನೆಲ್ಲ ವಿಷಯ ಪ್ರಸ್ತಾಪಿಸಿದರು?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
19/03/2025
DS-Arun-speaks-at-session
POLITICSSHIVAMOGGA CITY

ಶರಾವತಿ ಭೂಗತ ವಿದ್ಯುತ್‌ ಯೋಜನೆ ಕೈ ಬಿಡುವಂತೆ ಪಟ್ಟು, ಸದನದಲ್ಲಿ ಡಿ.ಎಸ್‌.ಅರುಣ್‌ ಹೇಳಿದ್ದೇನು?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
19/03/2025
Minister-Madhu-Bangarappa-Press-meet.
POLITICSSHIVAMOGGA CITY

ಮುಸ್ಲಿಮ್‌ ಬಜೆಟ್‌ ಆರೋಪಕ್ಕೆ ಮಧು ಬಂಗಾರಪ್ಪ ತಿರುಗೇಟು, ಏನಂದ್ರು? ಇಲ್ಲಿದೆ ನಾಲ್ಕು ಪಾಯಿಂಟ್‌

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
09/03/2025
Previous Next
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?