ಕಾಂಗ್ರೆಸ್‌ ಪಕ್ಷದಿಂದ 3 ಗ್ರಾಮ ಪಂಚಾಯಿತಿ ಸದಸ್ಯರು, ಇಬ್ಬರು ಕಾರ್ಯಕರ್ತರು, 6 ವರ್ಷ ಉಚ್ಛಾಟನೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 19 AUGUST 2023

SORABA : ಪಕ್ಷದ ಆದೇಶ ಧಿಕ್ಕರಿಸಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಆರೋಪದ ಹಿನ್ನೆಲೆ ಸೊರಬ ತಾಲೂಕಿನ ಮೂವರು ಗ್ರಾಮ ಪಂಚಾಯಿತಿ ಸದಸ್ಯರು ಮತ್ತು ಇಬ್ಬರು ಪಕ್ಷದ ಕಾರ್ಯಕರ್ತರನ್ನು (Party workers) ಆರು ವರ್ಷ ಕಾಂಗ್ರೆಸ್‌ ಪಕ್ಷದಿಂದ ಉಚ್ಛಾಟನೆ (Expelled) ಮಾಡಿ ಜಿಲ್ಲಾಧ್ಯಕ್ಷ ಹೆಚ್‌.ಎಸ್.ಸುಂದರೇಶ್‌ ಆದೇಶಿಸಿದ್ದಾರೆ.

ಸೊರಬ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ಉಳವಿ ಮತ್ತು ಕಾನಲೆ ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ವೇಳೆ ಬ್ಲಾಕ್‌ ಕಾಂಗ್ರೆಸ್‌ ಸಮಿತಿಯ ಆದೇಶ ಉಲ್ಲಂಘಿಸಿದ್ದರು. ಈ ಹಿನ್ನೆಲೆ ಬ್ಲಾಕ್‌ ಕಾಂಗ್ರೆಸ್‌ ಸೂಚನೆ ಮೇರೆಗೆ ಜಿಲ್ಲಾ ಕಾಂಗ್ರೆಸ್‌ ಐವರನ್ನು ಉಚ್ಛಾಟನೆ ಮಾಡಿದೆ.

ಇದನ್ನೂ ಓದಿ – ಪಿಳ್ಳಂಗಿರಿ ಶಾಲೆಯಲ್ಲಿ ಮಕ್ಕಳಿಗೆ ಮೊಟ್ಟೆ, ಬಾಳೆ ಹಣ್ಣು, ಶೇಂಗಾ ಚಿಕ್ಕಿ, ಜಿಲ್ಲೆಯಾದ್ಯಂತ ವಿತರಣೆಗೆ ಚಾಲನೆ

ಉಳವಿ ಗ್ರಾಮ ಪಂಚಾಯಿತಿ ಸದಸ್ಯರಾದ ಪರಶುರಾಮ ಕೋಳಿಸಾಲು, ತನ್ವೀರ್‌ ಅಹಮದ್‌ ಉಳವಿ, ಪಕ್ಷದ ಕಾರ್ಯಕರ್ತ ನಾಗರಾಜ ಕೆ.ಬಿ. ಕೈಸೋಡಿ, ಕಾನಲೆ ಗ್ರಾಮ ಪಂಚಾಯಿತಿ ಸದಸ್ಯೆ ಜಾನಕಿ ರಾಮಕೃಷ್ಣ, ಪಕ್ಷದ ಕಾರ್ಯಕರ್ತ ರಾಮಕೃಷ್ಣ ಪಡವಗೋಡು ಅವರನ್ನು ಉಚ್ಛಾಟಿಸಲಾಗಿದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment