Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » ಅಡಕೆ ಬೆಳೆಗಾರನ ಮನ ಗೆದ್ದರೆ ಎಂಎಲ್ಎ ಆಗುವುದು ಖಚಿತ, ಯಾಕೆ? ಇಲ್ಲಿದೆ 4 ಕಾರಣ

ಅಡಕೆ ಬೆಳೆಗಾರನ ಮನ ಗೆದ್ದರೆ ಎಂಎಲ್ಎ ಆಗುವುದು ಖಚಿತ, ಯಾಕೆ? ಇಲ್ಲಿದೆ 4 ಕಾರಣ

24/11/2022 10:47 AM
ನಿತಿನ್‌ ಕೈದೊಟ್ಲು

SHIVAMOGGA LIVE NEWS | 24 NOVEMBER 2022

SHIMOGA | ಜಿಲ್ಲೆಯ ರೈತರಿಗೆ ಅರ್ಥಿಕವಾಗಿ ಬಲ ನೀಡಿದ್ದ ಅಡಕೆ ಈ ಬಾರಿ ಪ್ರಮುಖ ಚುನಾವಣಾ ವಿಷಯವಾಗಿದೆ. ಅಡಕೆ ಮತ್ತು ಅಡಕೆ ಬೆಳೆಗಾರರ ಪರವಾಗಿ ನಿಲ್ಲುವವರಿಗೆ ಹೆಚ್ಚಿನ ಮತ ಲಭಿಸಲಿದೆ ಅನ್ನುವುದು ಮೇಲ್ನೋಟಕ್ಕೆ ಕಂಡು ಬರುತ್ತಿರುವ ಟ್ರೆಂಡ್. ಇದೆ ಕಾರಣಕ್ಕೆ ಜಿಲ್ಲೆಯಲ್ಲಿ ಅಡಕೆ ಕೇಂದ್ರಿತ ರಾಜಕಾರಣ ಆರಂಭವಾಗಿದೆ. (adike as election issue)

 

» ಶಿವಮೊಗ್ಗ ಲೈವ್‌ ವಾಟ್ಸಪ್‌ ಗ್ರೂಪ್‌ ಸೇರಲು ಇಲ್ಲಿ ಕ್ಲಿಕ್‌ ಮಾಡಿ

Shimoga Atiyas Motors

2023ರ ವಿಧಾನ ಸಭೆ ಚುನಾವಣೆಯಲ್ಲಿ ಅಡಕೆ ಪ್ರಮುಖ ವಿಷಯವಾಗಲಿದೆ. ಅದಕ್ಕೆ ಐದು ಕಾರಣವಿದೆ.

(adike as election issue)

ಕಾರಣ 1 – ಎಲೆ ಚುಕ್ಕೆ ರೋಗ

ಎಲೆ ಚುಕ್ಕೆ ರೋಗ ಅಡಕೆ ಬೆಳಗಾರರ ಭವಿಷ್ಯವನ್ನು ಕರಾಳವಾಗಿಸಿದೆ. ಇಳುವರಿ ಕುಸಿದು ಬೆಳೆಗಾರರು ತಲೆ ಮೇಲೆ ಕೈ ಹೊತ್ತು ಕೂರುವಂತಾಗಿದೆ. ಕರೋನಾಗಿಂತಲು ವೇಗವಾಗಿ ರೋಗ ಹರಡುತ್ತಿದ್ದು ಔಷಧವು ಇಲ್ಲ, ಪರಿಹಾರವು ಇಲ್ಲದೆ ರೈತರು ಪರಿತಪಿಸುವಂತಾಗಿದೆ. ಹಾಗಾಗಿ ಈ ಬಾರಿ ಅಡಕೆ ಎಲೆ ಚುಕ್ಕೆ ರೋಗ ಪ್ರಮುಖ ರಾಜಕೀಯ ವಿಷಯವಾಗಲಿದೆ.

ರಾಜ್ಯ ಸರ್ಕಾರ ಕೋಟಿ ಕೋಟಿ ರೂ. ಪರಿಹಾರ ಬಿಡುಗಡೆ ಮಾಡಿರುವುದಾಗಿ ಘೋಷಿಸಿದೆ. ಈಚೆಗೆ ತಜ್ಞರ ತಂಡವು ವಿವಿಧೆಡೆ ಭೇಟಿ ನೀಡಿ ಪರಿಶೀಲಿಸಿದೆ. ಇದರಿಂದ ರೈತರಿಗಾದ ಪ್ರಯೋಜನವೇನು ಎಂದು ವಿರೋಧ ಪಕ್ಷಗಳು ಪ್ರಶ್ನಿಸುತ್ತಿವೆ. ಅಲ್ಲಲ್ಲಿ ಪ್ರತಿಭಟನೆ, ಪಾದಯಾತ್ರೆ, ಹಕ್ಕೊತ್ತಾಯಗಳನ್ನು ನಡೆಸಲಾಗುತ್ತಿದೆ. ಎಲೆ ಚುಕ್ಕೆ ರೋಗ ಮತ್ತು ರಾಜಕೀಯ ಮೇಲಾಟದಲ್ಲಿ ಪರಹಾರ ಸಿಗದೆ ಬೆಳಗಾರನ ಪರಿಸ್ಥಿತಿ ಅಡಕತ್ತರಿಯಲ್ಲಿ ಸಿಕ್ಕಂತಾಗಿದೆ.

(adike as election issue)

ಕಾರಣ 2 – ಟಾಸ್ಕ್ ಫೋರ್ಸ್

ಅಡಕೆ ಬೆಳೆಗಾರರಿಗೆ ಅಭಯ ನೀಡಲು ಸರ್ಕಾರ ಅಡಕೆ ಕಾರ್ಯಪಡೆ ರಚಿಸಿದೆ. ಅಡಕೆ ಬೆಳೆಗಾರರು, ಮಾರಾಟಗಾರರು, ತಜ್ಞರು ಸೇರಿದಂತೆ ಹಲವರು ಕಾರ್ಯಪಡೆಯಲ್ಲಿದ್ದಾರೆ. ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಇದರ ಅಧ್ಯಕ್ಷರಾಗಿದ್ದಾರೆ. ಸಭೆಗಳನ್ನು ನಡೆಸಿ ಅಡಕೆಯ ಮಾನ, ಬೆಳೆಗಾರರ ಭವಿಷ್ಯ ಕಾಪಾಡುವ ಕುರಿತು ಚರ್ಚಿಸಲಾಯಿತು. ಅಡಕೆಯ ಉಪ ಉತ್ಪನ್ನಗಳ ಸಂಶೋಧನೆ, ಉತ್ಪಾದನೆಗೆ ಒತ್ತು ನೀಡಲು ಚಿಂತಿಸಲಾಯಿತು.

Adike Task Force Meeting in Shimoga

ಈ ಮಧ್ಯೆ ವಿರೋಧ ಪಕ್ಷಗಳು ಟಾಸ್ಕ್ ಪೋರ್ಸ್ ವಿರುದ್ಧವು ಆಕ್ರೋಶ ಹೊರ ಹಾಕಿವೆ. ಕಾರ್ಯಪಡೆಯಿಂದ ಆಗಿರುವ ಪ್ರಯೋಜನವೇನು? ಅಡಕೆ ಬೆಳೆಗಾರರಿಗೆ ಕಾರ್ಯಪಡೆ ಬಲ ತುಂಬಲು ವಿಫಲವಾಗಿದೆ ಎಂದು ಆರೋಪಿಸಿವೆ. ಕಾರ್ಯಪಡೆ ಸ್ಥಾಪಿಸಿದ್ದಕ್ಕೆ ಹರ್ಷ ವ್ಯಕ್ತಪಡಿಸಿದ್ದ ಬೆಳೆಗಾರರು, ವಿರೋಧ ಪಕ್ಷಗಳ ಪ್ರಶ್ನೆಗಳಿಗೆ ಉತ್ತರ ಸಿಗದೆ ಪರಿತಪಿಸುತ್ತಿದ್ದಾರೆ.

(adike as election issue)

ಕಾರಣ 3 – ಸಂಶೋಧನ ಕೇಂದ್ರ

ಅಡಕೆ ಬೆಳೆದರೆ ಹಣವಷ್ಟೆ ಬರುವುದಿಲ್ಲ. ಸಾಲು ಸಾಲು ಸಮಸ್ಯೆಗಳು ಬೆನ್ನು ಹತ್ತುತ್ತವೆ. ಅಡಕೆಗೆ ಒಂದಿಲ್ಲೊಂದು ಸಮಸ್ಯೆ ಇದ್ದಿದ್ದೆ. ಕೊಳೆ ರೋಗದಿಂದ ಎಲೆ ಚುಕ್ಕೆ ರೋಗದವರೆಗೆ ವರ್ಷದಿಂದ ವರ್ಷಕ್ಕೆ ಹೊಸ ಮಾದರಿಯ ಸಮಸ್ಯೆ ಎದುರಾಗುತ್ತದೆ. ಇವುಗಳಿಗೆ ಥಟ್ ಅಂತಾ ಪರಿಹಾರ ಒದಗಿಸಲು ಸಂಶೋಧನ ಕೇಂದ್ರ ಬೇಕು ಎಂಬ ಬೇಡಿಕೆ ಇತ್ತು. ಕಳೆದ ಚುನಾವಣೆ ಹೊತ್ತಿಗೆ ತೀರ್ಥಹಳ್ಳಿಗೆ ಭೇಟಿ ನೀಡಿದ್ದ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ಅಡಕೆ ಸಂಶೋಧನ ಕೇಂದ್ರ ಸ್ಥಾಪನೆಯ ಭರವಸೆ ನೀಡಿದ್ದರು. ಇದು ಮಲೆನಾಡ ಅಡಕೆ ಬೆಳೆಗಾರರಿಗೆ ತುಸು ನೆಮ್ಮದಿ ಮೂಡಿಸಿತ್ತು.

Protest in favor of adike planters.

ಅಡಕೆ ಸಂಶೋಧನ ಕೇಂದ್ರವು ಉಳಿದ ಭರವಸೆಗಳಂತೆ ಕನಸಾಗಿಯೆ ಉಳಿದಿದೆ. ಈ ಬಾರಿ ಚುನಾವಣೆಯಲ್ಲಿ ಇದು ಕೂಡ ರಾಜಕಾರಣಿಗಳ ಮತ ಗಳಿಕೆಯ ಪ್ರಮುಖ ವಿಷಯ ವಸ್ತುವಾಗಿದೆ. ಸಂಶೋಧನೆ ಕೇಂದ್ರ ಸ್ಥಾಪಿಸಿಯೇ ಸಿದ್ಧ ಎಂದು ಬಿಜೆಪಿ ಮುಖಂಡರು ವಾದಿಸುತ್ತಿದ್ದಾರೆ. ಈವರೆಗು ಸ್ಥಾಪನೆಯಾಗದಿರಲು ಕಾರಣವೇನು? ಸಂಶೋಧನ ಕೇಂದ್ರ ರೂಪುರೇಷ ಏನು ಎಂದು ವಿರೋಧ ಪಕ್ಷದವರು ಪ್ರಶ್ನಿಸುತ್ತಿದ್ದಾರೆ.

(adike as election issue)

ಕಾರಣ 4 – ಕೋರ್ಟ್ ಅಂಗಳದಲ್ಲಿ ಅಡಕೆಯ ಮಾನ

‘ಅಡಕೆಯಿಂದ ಕ್ಯಾನ್ಸರ್ ಬರಲಿದೆ’, ‘ಆರೊಗ್ಯಕ್ಕೆ ಹಾನಿಕಾರಕ’ ಎಂದು ಪದೇ ಪದೆ ಸುದ್ದಿಯಾಗುತ್ತಿತ್ತು. ಇದು ಅಡಕೆ ಬೆಲೆ ಪಾತಾಳಕ್ಕೆ ಕುಸಿಯುಂತೆ ಮಾಡುತ್ತಿತ್ತು. ಅಡಕೆ ಕುರಿತು ಸುಪ್ರೀಂ ಕೋರ್ಟ್ ನಲ್ಲಿ ಪ್ರಕರಣವಿದೆ. ಕಳೆದೊಂದು ದಶಕದಿಂದ ವಿಚಾರಣೆ ನಡೆಯುತ್ತಿದ್ದು, ಸಂಶೋಧನೆಗಳು ಆಗುತ್ತಿವೆ. ಇದನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಲು ಸರ್ಕಾರಗಳಿಗೆ ಸಾಧ್ಯವಾಗುತ್ತಿಲ್ಲ. ಇದು ಕೂಡ ಪಕ್ಷಗಳ ನಡುವೆ ಕೆಸರೆರಚಾಟಕ್ಕೆ ಕಾರಣವಾಗಿದೆ. ಮತ ಬ್ಯಾಂಕ್ ಭದ್ರಗೊಳಿಸಲು ಇದು ಪ್ರಮುಖ ವಿಷಯವಾಗಿದೆ.

ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಜಿಲ್ಲೆಯ ಲಕ್ಷಾಂತರ ಜನರ ಭವಿಷ್ಯ ಅಡಕೆ ಮೇಲೆ ಅವಲಂಬಿತವಾಗಿದೆ. ಹಾಗಾಗಿ ಅಡಕೆ ಪ್ರಮುಖ ಚುನಾವಣಾ ವಿಷಯವಾಗಿದ್ದು, ಪ್ರಣಾಳಿಕೆಗಳಲ್ಲಿ ಜಾಗ ಪಡೆಯುವ ಸಾದ್ಯತೆ ಇದೆ. ಆದರೆ ಗೊಂದಲದಲ್ಲಿ ಇರುವ ಅಡಕೆ ಬೆಳೆಗಾರನ ಮನಸನ್ನು ಗೆಲ್ಲುವವರಾರು ಅನ್ನುವುದು ಕುತೂಹಲ ಮೂಡಿಸಿದೆ.

ಕ್ಲಿಕ್ ಮಾಡಿ ಇದನ್ನೂ ಓದಿ | 2023ರ ಸಾರ್ವತ್ರಿಕ ರಜೆ ಪಟ್ಟಿ ಪ್ರಕಟಿಸಿದ ರಾಜ್ಯ ಸರ್ಕಾರ, ಎಷ್ಟು ರಜೆಗಳಿವೆ?

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Byನಿತಿನ್‌ ಕೈದೊಟ್ಲು
Editor
Follow:
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Previous Article Palike-with-Commissioner-photo8578/6 ಶಿವಮೊಗ್ಗ ನಗರದಲ್ಲಿ ನಾಳೆ ಮಾಂಸ ಮಾರಾಟ ನಿಷೇಧ, ತಪ್ಪಿದರೆ ಕ್ರಮ
Next Article Basavaraja-Bommai-CM-Chief-Minister ನಾಳೆ ಶಿವಮೊಗ್ಗಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ

ಇದನ್ನೂ ಓದಿ

BJP-President-BY-Vijayendra-Press-meet-in-shimoga.
POLITICSSHIVAMOGGA CITY

ಬಿಜೆಪಿಯಿಂದ ರಾಜ್ಯಾದ್ಯಂತ ತಿರಂಗ ಯಾತ್ರೆ, ಏನಿದು ಯಾತ್ರೆ? ಎಲ್ಲೆಲ್ಲಿ ಯಾವಾಗ ನಡೆಯುತ್ತೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
13/05/2025
POLITICSSHIVAMOGGA CITY

ಶಿವಮೊಗ್ಗದಲ್ಲಿ ಜೋರು ಮಳೆಯಲ್ಲಿ ವಿಜಯೇಂದ್ರ ಭಾಷಣ, ಏನೆಲ್ಲ ಹೇಳಿದರು? ಇಲ್ಲಿದೆ ಪ್ರಮುಖ ಪಾಯಿಂಟ್ಸ್‌

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
13/04/2025
MLA-SN-Channabasappa-Shimoga.
POLITICSSHIVAMOGGA CITY

ಬೆಂಗಳೂರಿನಲ್ಲಿ ಅಹೋರಾತ್ರಿ ಧರಣಿ, ಶಿವಮೊಗ್ಗದಿಂದ ನೂರಾರು ಬಿಜೆಪಿ ಕಾರ್ಯಕರ್ತರು, ಎಂಎಲ್‌ಎ ಹೇಳಿದ್ದೇನು?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
02/04/2025
Madhu-Bangarappa-Minister
POLITICS

ಇವತ್ತು, ನಾಳೆ ಉಸ್ತುವಾರಿ ಸಚಿವರಿಂದ ಶಿವಮೊಗ್ಗ ಜಿಲ್ಲೆ ಪ್ರವಾಸ, ಎಲ್ಲೆಲ್ಲಿ ಭೇಟಿ ನೀಡ್ತಾರೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
22/03/2025
Dr-Dhananjaya-Sarji-in-session.
POLITICSSHIVAMOGGA CITY

ವಿಧಾನಸೌಧದಲ್ಲಿ ಕುವೆಂಪು ವಿ.ವಿ ಕುರಿತು ಚರ್ಚೆ, ಡಾ. ಸರ್ಜಿ ಏನೆಲ್ಲ ವಿಷಯ ಪ್ರಸ್ತಾಪಿಸಿದರು?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
19/03/2025
DS-Arun-speaks-at-session
POLITICSSHIVAMOGGA CITY

ಶರಾವತಿ ಭೂಗತ ವಿದ್ಯುತ್‌ ಯೋಜನೆ ಕೈ ಬಿಡುವಂತೆ ಪಟ್ಟು, ಸದನದಲ್ಲಿ ಡಿ.ಎಸ್‌.ಅರುಣ್‌ ಹೇಳಿದ್ದೇನು?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
19/03/2025
Previous Next
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?