ಶಿವಮೊಗ್ಗದ ಮೊದಲ ಸಂಸದ ಯಾರು ಗೊತ್ತಾ? ಬ್ರಿಟೀಷರಿಗೆ ಅವರನ್ನು ಕಂಡರೆ ಮುಖ ಕೆಂಪಾಗುತ್ತಿದ್ದದ್ದು ಯಾಕೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 1 APRIL 2024

ELECTION SPECIAL : ಸ್ವಾತಂತ್ರ್ಯ ಚಳವಳಿಯಲ್ಲಿ ಮುಂಚೂಣಿಯಲ್ಲಿದ್ದು, ಅರಣ್ಯ ಸತ್ಯಾಗ್ರಹ ನಡೆಸಿದ್ದ ಕೆ.ಜಿ.ಒಡೆಯರ್‌ ಶಿವಮೊಗ್ಗ ಕ್ಷೇತ್ರದ ಮೊದಲ ಸಂಸದ. ಮಹಾತ್ಮ ಗಾಂಧೀಜಿ ಅನುಯಾಯಿಯಾಗಿದ್ದ ಕೆ.ಜಿ.ಒಡೆಯರ್‌ ಸ್ವಾತಂತ್ರ್ಯ ಹೋರಾಟದ ಸಂದರ್ಭ ಮಧ್ಯ ಕರ್ನಾಟಕ ಭಾಗದಲ್ಲಿನ ಹಲವು ಚಳವಳಿಗಳಲ್ಲಿ ಭಾಗವಹಿಸಿದ್ದರು.

ಅರಣ್ಯ ಸತ್ಯಾಗ್ರಹದಲ್ಲಿ ಮುಂಚೂಣಿ

ಸ್ವಾತಂತ್ರ್ಯ ಚಳವಳಿ ವೇಳೆ ಅರಣ್ಯ ಸತ್ಯಾಗ್ರಹವು ಪ್ರಮುಖ ಹೋರಾಟವಾಗಿತ್ತು. ಸರ್ಕಾರಿ ಜಮೀನಿನಲ್ಲಿರುವ ಬೈನೆ ಮರಗಳನ್ನು ಕಡಿದು ಹೆಂಡ ಸರಬರಾಜು ಅಗದಂತೆ ತಡೆಯುವುದು ಇದರ ಪ್ರಮುಖ ಉದ್ದೇಶ. 1939ರಲ್ಲಿ ಸಾಗರ ಸಮೀಪದ ಸಣ್ಣಮನೆ ಹಳ್ಳದಲ್ಲಿ ಬಿ.ಕೆ.ಶಿವಪ್ಪ ಗೌಡ, ಬಿ.ವೆಂಕಟರಾವ್‌, ಕೆ.ಜಿ.ಒಡೆಯರ್‌ ಸೇರಿದಂತೆ ಹಲವರು ಕ್ಯಾಂಪ್‌ ಮಾಡಿ ಅರಣ್ಯ ಸತ್ಯಾಗ್ರಹದಲ್ಲಿ ತೊಡಗಿಸಿಕೊಂಡಿದ್ದರು. ಈ ಗುಂಪು ಆಗಾಗ ಪ್ರಭಾತ್‌ ಪೇರಿ (ಬೆಳಗೆ ಪಥಸಂಚಲನ) ನಡೆಸಿ ಜನ ಜಾಗೃತಿ ಮೂಡಿಸುತ್ತಿತ್ತು. ಸರ್ಕಾರಿ ಕಚೇರಿಗಳ ಮೇಲೆ ತ್ರಿವರ್ಣ ಧ್ವಜ ಹಾರಿಸುವುದು, ಹೆಂಡದ ಅಂಗಡಿಗಳ ಮುಂದೆ ಪ್ರತಿಭಟನೆ ನಡೆಸಿ ಬ್ರಿಟೀಷ್‌ ಆಡಳಿತದ ವಿರುದ್ಧ ಹೋರಾಟ ನಡೆಸುತ್ತಿತ್ತು.

ಜೈಲಿಗೆ ಹೋಗಿದ್ದರು ಕೆ.ಜಿ.ಒಡೆಯರ್‌

ಮನ್ನಾಜಂಗಲ್‌ನಲ್ಲಿ ಬೈನೆ ಮರ ಕಡಿದ ಪ್ರಕರಣದಲ್ಲಿ ಬ್ರಿಟೀಷ್‌ ಪೊಲೀಸರು 1939ರ ಅಕ್ಟೋಬರ್‌ 10ರಂದು ಕೆ.ಜಿ.ಒಡೆಯರ್‌, ಕಲ್ಲಕೊಪ್ಪ ಸೇರಿದಂತೆ 16 ಹೋರಾಟಗಾರರನ್ನು ಬಂಧಿಸಿದ್ದರು. ತಪ್ಪೊಪ್ಪಿಗೆ ಪತ್ರ ಬರೆದುಕೊಡುವಂತೆ ಬ್ರಿಟೀಷ್‌ ಪೊಲೀಸರು ಹಿಂಸೆ ನೀಡಿದ್ದರು. ಕೊನೆಗೆ ನ್ಯಾಯಾಲಯದಲ್ಲಿ ಕೆ.ಜಿ.ಒಡೆಯರ್‌ ಮತ್ತಿತರರನ್ನ ದೋಷಿ ಎಂದು ಪರಿಗಣಿಸಿ ಶಿಕ್ಷೆ ವಿಧಿಸಲಾಗಿತ್ತು.

ಎರಡು ಬಾರಿ ಸಂಸದರಾಗಿದ್ದರು

ಕೆ.ಜಿ.ಒಡೆಯರ್‌ ಅವರು ಶಿವಮೊಗ್ಗದಿಂದ ಎರಡು ಬಾರಿ ಲೋಕಸಭೆ ಪ್ರವೇಶಿಸಿದ್ದರು. 1952ರಲ್ಲಿ ಮೊದಲ ಬಾರಿ ಸಂಸದರಾಗಿದ್ದರು. 1957ರಲ್ಲಿ ಎರಡನೇ ಲೋಕಸಭೆಗು ಶಿವಮೊಗ್ಗದ ಸಂಸದರಾಗಿದ್ದರು. ಸಂಸತ್ತಿನ ವಿವಿಧ ಕಮಿಟಿಗಳಿಗೆ ಸದಸ್ಯರಾಗಿದ್ದರು.

 ಇದನ್ನೂ ಓದಿ ‘ಹಸೆ ಚಿತ್ತಾರ’ ಪುಸ್ತಕ ಬಿಡುಗಡೆ, ಯಾರೆಲ್ಲ ಭಾಗವಹಿಸಿದ್ದರು, ಏನೇನೆಲ್ಲ ಮಾತನಾಡಿದರು?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 1, 2024

ದುರಸ್ತಿ ವೇಳೆ ಲೈನ್‌ ಮ್ಯಾನ್‌ಗೆ ಕರೆಂಟ್‌ ಶಾಕ್‌, ಸ್ಥಳದಲ್ಲೆ ಸಾವು

ದುರಸ್ತಿ ವೇಳೆ ಲೈನ್‌ ಮ್ಯಾನ್‌ಗೆ ಕರೆಂಟ್‌ ಶಾಕ್‌, ಸ್ಥಳದಲ್ಲೆ ಸಾವು

ಶಿವಮೊಗ್ಗದ ವಾಹನ ಸವಾರರೆ ಎಚ್ಚರ, ಪೊಲೀಸ್‌ ಇಲಾಖೆಯಿಂದ ಮಹತ್ವದ ಪ್ರಕಟಣೆ, ಏನದು?

ಶಿವಮೊಗ್ಗದ ವಾಹನ ಸವಾರರೆ ಎಚ್ಚರ, ಪೊಲೀಸ್‌ ಇಲಾಖೆಯಿಂದ ಮಹತ್ವದ ಪ್ರಕಟಣೆ, ಏನದು?

ಉಪನ್ಯಾಸಕ ಸುರೇಶ್‌ ನಿಗೂಢ ಸಾವು ಕೇಸ್‌, ಶಿವಮೊಗ್ಗ SP ಫಸ್ಟ್‌ ರಿಯಾಕ್ಷನ್‌, ಏನಂದ್ರು?

ಉಪನ್ಯಾಸಕ ಸುರೇಶ್‌ ನಿಗೂಢ ಸಾವು ಕೇಸ್‌, ಶಿವಮೊಗ್ಗ SP ಫಸ್ಟ್‌ ರಿಯಾಕ್ಷನ್‌, ಏನಂದ್ರು?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಗದರ್ಶನ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಗದರ್ಶನ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ

ಟಾಟಾ ಏಸ್‌, ಆಟೋ ಡಿಕ್ಕಿ, ಮಗು ಸೇರಿ ಹಲವರಿಗೆ ಗಾಯ

ಟಾಟಾ ಏಸ್‌, ಆಟೋ ಡಿಕ್ಕಿ, ಮಗು ಸೇರಿ ಹಲವರಿಗೆ ಗಾಯ

ಮೀನು ಮಾರುಕಟ್ಟೆ ಬಳಿ ಕಿರಿಕ್‌, ಕಾರಿನ ಬೀಗದಿಂದ ವ್ಯಕ್ತಿಯ ಕಣ್ಣಿಗೆ ಹೊಡೆದು ಜೀವ ಬೆದರಿಕೆ, ಕಾರಣವೇನು?

ಮೀನು ಮಾರುಕಟ್ಟೆ ಬಳಿ ಕಿರಿಕ್‌, ಕಾರಿನ ಬೀಗದಿಂದ ವ್ಯಕ್ತಿಯ ಕಣ್ಣಿಗೆ ಹೊಡೆದು ಜೀವ ಬೆದರಿಕೆ, ಕಾರಣವೇನು?

ಮಂಚಿಯ ಪುರಾಣ ಪ್ರಸಿದ್ಧ ಜಾತ್ರೆ, ಬುಡ ಸಹಿತ ಬಿಲ್ವಪತ್ರೆ ಮರ ಕಿತ್ತು ತಂದ ದಾಸರ ಕುಟುಂಬ

ಮಂಚಿಯ ಪುರಾಣ ಪ್ರಸಿದ್ಧ ಜಾತ್ರೆ, ಬುಡ ಸಹಿತ ಬಿಲ್ವಪತ್ರೆ ಮರ ಕಿತ್ತು ತಂದ ದಾಸರ ಕುಟುಂಬ

ಅಡಿಕೆ ತೋಟದಲ್ಲಿ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಉಪನ್ಯಾಸಕರ ಮೃತದೇಹ ಪತ್ತೆ

ಅಡಿಕೆ ತೋಟದಲ್ಲಿ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಉಪನ್ಯಾಸಕರ ಮೃತದೇಹ ಪತ್ತೆ

ತಂದೆ ಸಾವಿನಲ್ಲೂ ಪರೀಕ್ಷೆ ಬರೆದ ವಿದ್ಯಾರ್ಥಿ, ಕಾರಿನಲ್ಲಿ ಕರೆದೊಯ್ದು ಪರೀಕ್ಷಾ ಕೇಂದ್ರಕ್ಕೆ ಬಿಟ್ಟ ಅಧಿಕಾರಿ

ತಂದೆ ಸಾವಿನಲ್ಲೂ ಪರೀಕ್ಷೆ ಬರೆದ ವಿದ್ಯಾರ್ಥಿ, ಕಾರಿನಲ್ಲಿ ಕರೆದೊಯ್ದು ಪರೀಕ್ಷಾ ಕೇಂದ್ರಕ್ಕೆ ಬಿಟ್ಟ ಅಧಿಕಾರಿ

ಮದುವೆ ಮುಗಿಸಿ ಭದ್ರಾವತಿಯ ನಾಗತಿಬೆಳಗಲು ತಾಂಡಾದ ಮನೆಗೆ ಮರಳಿದವರಿಗೆ ಕಾದಿತ್ತು ಆಘಾತ

ಮದುವೆ ಮುಗಿಸಿ ಭದ್ರಾವತಿಯ ನಾಗತಿಬೆಳಗಲು ತಾಂಡಾದ ಮನೆಗೆ ಮರಳಿದವರಿಗೆ ಕಾದಿತ್ತು ಆಘಾತ

Leave a Comment