ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | 1 ಮೇ 2019
ಸಹ್ಯಾದ್ರಿ ಕಾಲೇಜಿನಲ್ಲಿ ಮೇ.23ರಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯ ನಡೆಯಲಿದೆ. ಈ ಸಂಬಂಧ ಜಿಲ್ಲಾಧಿಕಾರಿ ಕಚೇರಿಯಲ್ಲಿ, ಪೂರ್ವಭಾವಿ ಸಿದ್ಧತೆ ಬಗ್ಗೆ ಅಭ್ಯರ್ಥಿಗಳು ಮತ್ತು ಅವರ ಏಜೆಂಟರುಗಳ ಸಭೆ ನಡೆಸಲಾಯಿತು.
ಬಿ.ಹೆಚ್.ರಸ್ತೆಯ ಸಹ್ಯಾದ್ರಿ ಕಲಾ ಕಾಲೇಜಿನಲ್ಲಿ ಮತ ಎಣಿಕೆ ನಡೆಯಲಿದ್ದು, ನೆಲ ಮಹಡಿಯಲ್ಲಿ ಶಿವಮೊಗ್ಗ, ಭದ್ರಾವತಿ ಮತ್ತು ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ನಡೆಯಲಿದೆ.

ಒಂದನೇ ಮಹಡಿಯಲ್ಲಿ ಶಿವಮೊಗ್ಗ ಗ್ರಾಮಾಂತರ, ಬೈಂದೂರು, ಸಾಗರ, ಶಿಕಾರಿಪುರ, ಸೊರಬ ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ನಡೆಯಲಿದೆ. ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 16 ಟೇಬಲ್’ಗಳನ್ನು ಅಳವಡಿಸಲಾಗಿದೆ. ಅದರಲ್ಲಿ ಮತ ಎಣಿಕೆಗೆ 14 ಟೇಬಲ್’ಗಳು, ಸಹಾಯಕ ಚುನಾವಣಾಧಿಕಾರಿ ಹಾಗೂ ಟ್ಯಾಬುಲೇಷನ್’ಗೆ 2 ಟೇಬಲ್ ಇರುತ್ತದೆ. ಒಟ್ಟು 8 ಕ್ಷೇತ್ರಕ್ಕೆ 128 ಟೇಬಲ್ ಇರುತ್ತದೆ.
ಚುನಾವಣಾಧಿಕಾರಿಗಳಿಗೆ 1 ಟೇಬಲ್ ಇದ್ದು, ಒಟ್ಟು 129 ಟೇಬಲ್’ಗಳಿದ್ದು ಮತ ಎಣಿಕೆ ಏಜೆಂಟರನ್ನು ನೇಮಿಸಲು ನಮೂನೆ- 18ರಲ್ಲಿ ಅರ್ಜಿ ನೀಡಲಾಗಿದೆ. ಅರ್ಜಿಗೆ ತಮ್ಮ ಸ್ಟಾಂಪ್ ಸೈಜ್ ಚಿತ್ರ ಅಂಟಿಸಿ ಇನ್ನೆರಡು ಹೆಚ್ಚುವರಿ ಭಾವಚಿತ್ರಗಳೊಂದಿಗೆ ಅಭ್ಯರ್ಥಿಯ ಸಹಿ ಪಡೆದು
ಚುನಾವಣಾ ಏಜೆಂಟರು ಸಹಿ ಮಾಡಿ ಮೇ.15ರೊಳಗೆ ಸಲ್ಲಿಸಬೇಕೆಂದು ತಿಳಿಸಲಾಗಿದೆ. ಸಭೆಯಲ್ಲಿ ವಿವಿಧ ಪಕ್ಷಗಳ ಏಜೆಂಟರುಗಳು ಉಪಸ್ಥಿತರಿದ್ದರು.
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






