ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 17 MAY 2024
SHIMOGA : ನೈಋತ್ಯ ಪದವೀಧರ ಕ್ಷೇತ್ರದ ಚುನಾವಣೆಗೆ ಬಿಜೆಪಿಯಲ್ಲಿ ಏಕಪಕ್ಷೀಯವಾಗಿ ಅಭ್ಯರ್ಥಿ ಘೋಷಿಸಲಾಗಿದೆ. ಆಕಾಂಕ್ಷಿಗಳ (Aspirant) ಅಭಿಪ್ರಾಯ ಕೇಳದೆ ಅಭ್ಯರ್ಥಿ ಘೋಷಿಸಲಾಗಿದೆ. ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಸೌಜನ್ಯಕ್ಕು ಆಹ್ವಾನಿಸಿಲ್ಲ ಎಂದು ಬಿಜೆಪಿ ಕಾನೂನು ಪ್ರಕೋಷ್ಟದ ಸಹ ಸಂಚಾಲಕ ಪ್ರವೀಣ್ ಆರೋಪಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರವೀಣ್, ಪದವೀಧರ ಕ್ಷೇತ್ರಕ್ಕೆ ಗಿರೀಶ್ ಪಟೇಲ್, ಎಸ್.ದತ್ತಾತ್ರಿ, ರಘಪತಿ ಭಟ್ ಮತ್ತು ನಾನು ಆಕಾಂಕ್ಷಿಗಳಾಗಿದ್ದೆವು. ಇದಕ್ಕಾಗಿ ಪದವೀಧರರ ನೋಂದಣಿ ಕಾರ್ಯ ನಡೆಸಿದ್ದೇವೆ. ಆದರೆ ತಮ್ಮ ಅಭಿಪ್ರಾಯ ಕೇಳದೆ, ಈಚೆಗಷ್ಟೆ ಬಿಜೆಪಿ ಸೇರಿದವರಿಗೆ ಟಿಕೆಟ್ ನೀಡಲಾಗಿದೆ. ಇನ್ನೊಂದೆಡೆ ಶಿಕ್ಷಕರ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಕಡು ಭ್ರಷ್ಟ ಎಂದು ಆರೋಪಿಸಿದರು.
ಇದನ್ನೂ ಓದಿ – ಪ್ಲಾಸ್ಟಿಕ್ ನುಂಗಿ ನಿತ್ರಾಣಗೊಂಡಿದ್ದ ಹಾವು, ಮಾರುದ್ದದ್ದ ಪ್ಲಾಸ್ಟಿಕ್ ಹೊರತೆಗೆದ ಉರಗ ರಕ್ಷಕ
ಮೇ 21ರ ನಂತರ ತಮ್ಮ ಮುಂದಿನ ನಿರ್ಧಾರ ಪ್ರಕಟಿಸಲಾಗುತ್ತದೆ ಎಂದು ತಿಳಿಸಿದರು. ವಕೀಲರ ಸಂಘದ ಮಾಜಿ ಅಧ್ಯಕ್ಷ ಎನ್.ದೇವೇಂದ್ರಪ್ಪ, ಮಹೇಂದ್ರ ಕುಮಾರ್, ವಾಗೀಶ್ ಉಪಸ್ಥಿತರಿದ್ದರು.
LATEST NEWS
- ದಿಢೀರ್ ರಸ್ತೆಗೆ ಬಂದು ಕಾರಿನ ಮೇಲೆ ಜಿಗಿದ ಕಾಡುಕೋಣ

- ಶಿವಮೊಗ್ಗ ಮಾರುಕಟ್ಟೆಯಲ್ಲಿ ಇವತ್ತು ಎಷ್ಟಿದೆ ಅಡಿಕೆ ರೇಟ್? | 10 ಫೆಬ್ರವರಿ 2026

- ಶಿವಮೊಗ್ಗ ವಿಮಾನ ನಿಲ್ದಾಣ, ಕೇಂದ್ರ ಸಚಿವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಸಂಸದ ರಾಘವೇಂದ್ರ

- ಶಿವಮೊಗ್ಗದಲ್ಲಿ ಉಚಿತ ಆರ್ಯುವೇದ ಆರೋಗ್ಯ ತಪಾಸಣಾ ಶಿಬಿರ, ಈಗಲೇ ಹೆಸರು ನೋಂದಣಿಗೆ ಸೂಚನೆ

- ಶಿವಮೊಗ್ಗ ಕೋಟೆ ಮಾರಿಕಾಂಬಾ ಜಾತ್ರೆ ಸಿದ್ಧತೆ ಜೋರು, ಪ್ರಚಾರ ಶುರು

About The Editor
ನಿತಿನ್ ಆರ್.ಕೈದೊಟ್ಲು






