‘ಯಡಿಯೂರಪ್ಪ ಹೋರಿ, ರಾಘವೇಂದ್ರ ಕರು, ರಾಜ್ಯಕ್ಕೆ ನಾನೆ ಮುಂದಿನ ಸಿಎಂ’

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA | 10 ನವೆಂಬರ್ 2019

ನಾನು ರಾಜ್ಯದ ಮುಂದಿನ ಮುಖ್ಯಮಂತ್ರಿ ಆಗಬೇಕು ಅಂದುಕೊಂಡಿದ್ದೇನೆ ಹೀಗಂತ ಹೇಳುವ ಮೂಲಕ ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಎಲ್ಲರ ಹುಬ್ಬೇರುವಂತೆ ಮಾಡಿದ್ದಾರೆ.

ಶಿವಮೊಗ್ಗ ತಿರುಪತಿ ರೈಲಿಗೆ ಚಾಲನೆ ನೀಡುವ ಮುನ್ನ ರೈಲ್ವೆ ನಿಲ್ದಾಣದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಮಾತನಾಡಿದ ಆಯನೂರು ಮಂಜುನಾಥ್, ಸಿಎಂ ಆಗುವುದಾಗಿ ಹೇಳಿದರು.

ಸಂಸದ ಬಿ.ವೈ.ರಾಘವೇಂದ್ರ ಚುರುಕಾಗಿ ಕೆಲಸ ಮಾಡುತ್ತಿದ್ದಾರೆ. ಅವರು ಸಂಸದರಾಗಿಯೇ ಉಳಿಯಬೇಕು. ರಾಜ್ಯದ ಕಡೆಗೆ ಬರುವುದು ಬೇಡ. ಯಾಕೆಂದರೆ ತಾವು ಮುಂದಿನ ಮುಖ್ಯಮಂತ್ರಿ ಆಗಬೇಕು ಅಂದುಕೊಂಡಿರುವುದಾಗಿ ತಿಳಿಸಿ ಸಭೆಯನ್ನು ನಗೆಗಡಲಲ್ಲಿ ತೇಲುವಂತೆ ಮಾಡಿದರು.

‘ನೆಮ್ಮದಿಯಾಗಿ ಆಳೋಕೆ ಬಿಡಿ’

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ನೆಮ್ಮದಿಯಾಗಿ ಆಳೋಕೆ ಬಿಡಬೇಕು ಅಂತಾ ಆಯನೂರು ಮಂಜುನಾಥ್ ಹೇಳಿದ್ದಾರೆ. ಅವರು ನಮ್ಮದಿಯಾಗಿ ಆಡಳಿತ ನಡೆಸಲು ಅವಕಾಶ ನೀಡಿದರೆ ರಾಜ್ಯದಲ್ಲಿ ಶಿವಮೊಗ್ಗ ನಂಬರ್ 1 ಆಗಲಿದೆ ಎಂದರು.

ಈ ನಡುವೆ ಯಡಿಯೂರಪ್ಪ ಅವರು ಹೋರಿ, ರಾಘವೇಂದ್ರ ಅವರನ್ನು ಕರು ಎಂದು ಅವರು ಬಣ್ಣಿಸಿದರು. ಅಭಿವೃದ್ಧಿ ವಿಚಾರದಲ್ಲಿ ಅಪ್ಪ, ಮಗ ಮುಂಚೂಣಿಗೆ ನಿಲ್ಲುತ್ತಾರೆ ಎಂದರು.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200

ಸುದ್ದಿಗಾಗಿ ಕರೆ ಮಾಡಿ – 9964634494

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 10, 2019

Leave a Comment