SHIVAMOGGA LIVE | 16 JULY 2023
SHIMOGA : ಬಿಟ್ಟು ಬಂದವರನ್ನೆ ಮತ್ತೆ ಅಪ್ಪಿಕೊಳ್ಳಬೇಕಾದ ಪರಿಸ್ಥಿತಿ ಬರಬಹುದು. ಮುಂದಿನ ದಿನಗಳಲ್ಲಿ ಯಾವ ರೀತಿಯ ಹೊಂದಾಣಿಕೆಯಾಗುತ್ತದೆಯೊ ಗೊತ್ತಿಲ್ಲ. ಈಗಲೆ ಮಾನಸಿಕವಾಗಿ ಸಿದ್ಧತೆ ಮಾಡಿಕೊಳ್ಳಬೇಕು ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಆಯನೂರು ಮಂಜುನಾಥ್ ಹೇಳಿಕೆ ನೀಡಿ ಕುತೂಹಲ (Curiosity) ಮೂಡಿಸಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ನೂತನ ಶಾಸಕಿಗೆ ಅಭಿನಂದನೆ, ಕಾರ್ಯಕ್ರಮದಲ್ಲಿ ಯಾರೆಲ್ಲ ಏನೇನು ಹೇಳಿದರು?
![]() |
ಜೆಡಿಎಸ್ ಕಚೇರಿಯಲ್ಲಿ ಶಾಸಕಿ ಶಾರದಾ ಪೂರ್ಯಾನಾಯ್ಕ್ ಅವರ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಆಯನೂರು ಮಂಜುನಾಥ್, ಜು.18ರ ನಂತರ ದೇಶದ ರಾಜಕೀಯ ಚಿತ್ರಣ ಬದಲಾಗುವ ಬೆಳವಣಿಗೆ ನಡೆಯಲಿದೆ ಎಂದರು.
ನಾವು ಈವರೆಗೆ ಯಾರನ್ನು ವಿರೋಧಿಸುತ್ತಿದ್ದೆವೊ ಅವರನ್ನು ವಿರೋಧಿಸದಿರುವಂತ ಪರಿಸ್ಥಿತಿ ಬಾರದಿರಲಿ. ನಾವು ಬಿಟ್ಟು ಬಂದವರ ಕಡೆಗೆ ನಮ್ಮ ನಾಯಕರು ಹೋದರೆ ಅನುಭವಿಸುವ ಹಿಂಸೆ ದೇವರಿಗೆ ಗೊತ್ತಾಗಬೇಕು. ಆದರೆ ರಾಜಕೀಯದಲ್ಲಿ ಸ್ಥಿತ್ಯಂತರಗಳು ಸಹಜ ಎಂದು ಜೆಡಿಎಸ್ ಪಕ್ಷದ ಮುಂದಿನ ನಡೆಯ ಕುರಿತು ಕುತೂಹಲ (Curiosity) ಮೂಡಿಸಿದರು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200