ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE | 16 JULY 2023
SHIMOGA : ಬಿಟ್ಟು ಬಂದವರನ್ನೆ ಮತ್ತೆ ಅಪ್ಪಿಕೊಳ್ಳಬೇಕಾದ ಪರಿಸ್ಥಿತಿ ಬರಬಹುದು. ಮುಂದಿನ ದಿನಗಳಲ್ಲಿ ಯಾವ ರೀತಿಯ ಹೊಂದಾಣಿಕೆಯಾಗುತ್ತದೆಯೊ ಗೊತ್ತಿಲ್ಲ. ಈಗಲೆ ಮಾನಸಿಕವಾಗಿ ಸಿದ್ಧತೆ ಮಾಡಿಕೊಳ್ಳಬೇಕು ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಆಯನೂರು ಮಂಜುನಾಥ್ ಹೇಳಿಕೆ ನೀಡಿ ಕುತೂಹಲ (Curiosity) ಮೂಡಿಸಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ನೂತನ ಶಾಸಕಿಗೆ ಅಭಿನಂದನೆ, ಕಾರ್ಯಕ್ರಮದಲ್ಲಿ ಯಾರೆಲ್ಲ ಏನೇನು ಹೇಳಿದರು?
ಜೆಡಿಎಸ್ ಕಚೇರಿಯಲ್ಲಿ ಶಾಸಕಿ ಶಾರದಾ ಪೂರ್ಯಾನಾಯ್ಕ್ ಅವರ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಆಯನೂರು ಮಂಜುನಾಥ್, ಜು.18ರ ನಂತರ ದೇಶದ ರಾಜಕೀಯ ಚಿತ್ರಣ ಬದಲಾಗುವ ಬೆಳವಣಿಗೆ ನಡೆಯಲಿದೆ ಎಂದರು.

ನಾವು ಈವರೆಗೆ ಯಾರನ್ನು ವಿರೋಧಿಸುತ್ತಿದ್ದೆವೊ ಅವರನ್ನು ವಿರೋಧಿಸದಿರುವಂತ ಪರಿಸ್ಥಿತಿ ಬಾರದಿರಲಿ. ನಾವು ಬಿಟ್ಟು ಬಂದವರ ಕಡೆಗೆ ನಮ್ಮ ನಾಯಕರು ಹೋದರೆ ಅನುಭವಿಸುವ ಹಿಂಸೆ ದೇವರಿಗೆ ಗೊತ್ತಾಗಬೇಕು. ಆದರೆ ರಾಜಕೀಯದಲ್ಲಿ ಸ್ಥಿತ್ಯಂತರಗಳು ಸಹಜ ಎಂದು ಜೆಡಿಎಸ್ ಪಕ್ಷದ ಮುಂದಿನ ನಡೆಯ ಕುರಿತು ಕುತೂಹಲ (Curiosity) ಮೂಡಿಸಿದರು.


LATEST NEWS
- Three killed, several injured in soil cave-in at Hulikal Ghat

- BREAKING NEWS – ಹುಲಿಕಲ್ ಘಾಟಿಯಲ್ಲಿ ಘೋರ ದುರ್ಘಟನೆ, ಕಾರ್ಮಿಕರು ಸಾವು

- PU RESULT: ಶಿವಮೊಗ್ಗದ ಮಹೀನ್ ಖಾನಮ್ ಅಫ್ರಿದಿ ಮನೆಯಲ್ಲಿ ಸಂಭ್ರಮ, ಪಡೆದ ಅಂಕಗಳೆಷ್ಟು?

- ಇವತ್ತಿನ ಅಡಿಕೆ ರೇಟ್, ಶಿವಮೊಗ್ಗ, ಭದ್ರಾವತಿ, ತೀರ್ಥಹಳ್ಳಿಯಲ್ಲಿ ಎಷ್ಟಿದೆ ಅಡಿಕೆ ಧಾರಣೆ?

- ಶಿವಮೊಗ್ಗ ಜಿಲ್ಲೆಯಲ್ಲಿ ಯುವನಿಧಿ ಪ್ರಚಾರ, ಯಾವ್ಯಾವ ದಿನ ಯಾವ್ಯಾವ ಕಾಲೇಜಿನಲ್ಲಿ ಕಾರ್ಯಕ್ರಮ?

About The Editor
ನಿತಿನ್ ಆರ್.ಕೈದೊಟ್ಲು











