ಆಯನೂರು ಮಂಜುನಾಥ್ ಕಾಂಗ್ರೆಸ್ ಸೇರ್ಪಡೆಗೆ ದಿನಾಂಕ ನಿಗದಿ, ಸುದ್ದಿಗೋಷ್ಠಿಯಲ್ಲಿ ಏನೇನಲ್ಲ ಹೇಳಿದರು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 23 AUGUST 2023

SHIMOGA : ವಿಧಾನ ಪರಿಷತ್ ಮಾಜಿ ಸದಸ್ಯ ಆಯನೂರು ಮಂಜುನಾಥ್ ಕಾಂಗ್ರೆಸ್ ಸೇರ್ಪಡೆ (Congress Party) ಖಚಿತಗೊಂಡಿದೆ. ಆ.24 ಬೆಂಗಳೂರಿನಲ್ಲಿ ಕಾಂಗ್ರೆಸ್ ಸೇರ್ಪಡೆ ಆಗಲಿದ್ದಾರೆ.

Shivamogga-Live-Number-1-Website

ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆಯನೂರು ಮಂಜುನಾಥ್, ಆ.24ರಂದು ಬೆಳಗ್ಗೆ 10.30ಕ್ಕೆ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಾನು ಮತ್ತು ನನ್ನ ಸ್ನೇಹಿತರು ಪಕ್ಷ ಸೇರ್ಪಡೆಯಾಗಲಿದ್ದೇವೆ. ಶಿಕಾರಿಪುರದಲ್ಲಿ ಪಕ್ಷೇತರರಾಗಿ ಸ್ಪರ್ಧಿಸಿದ್ದ ನಾಗರಾಜಗೌಡ ಅವರು ನಮ್ಮೊಂದಿಗೆ ಕಾಂಗ್ರೆಸ್ ಸೇರುತ್ತಿದ್ದಾರೆ ಎಂದು ತಿಳಿಸಿದರು.

ವಿಧಾನಸಭೆ ಚುನಾವಣೆ ಹೊತ್ತಿನಲ್ಲೆ ಕಾಂಗ್ರೆಸ್ ಸೇರ್ಪಡೆಯ ಸಂದರ್ಭ ಎದುರಾಗಿತ್ತು. ಆಗ ಕಾರಣಾಂತರದಿಂದ ಜೆಡಿಎಸ್ ಸೇರಬೇಕಾಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಭೇಟಿಯಾಗಿ ಪಕ್ಷ ಸೇರ್ಪಡೆ ಬಗ್ಗೆ ಚರ್ಚೆಯಾಗಿದೆ ಎಂದರು.

Ayanuru-Manjunatha-press-meet-about-congress-joining.jpg

ಶಕ್ತಿ ಮೀರಿ ಸಮಯ ವಿನಿಯೋಗ

ಜಿಲ್ಲೆಯಲ್ಲಿ ಮುಂದಿನ ಜಿಲ್ಲಾ, ತಾಲೂಕು, ವಿಧಾನ ಪರಿಷತ್, ಲೋಕಸಭೆ ಚುನಾವಣೆಗೆ ನಾವೆಲ್ಲ ಶಕ್ತಿ ಮೀರಿ ಸಮಯ ವಿನಿಯೋಗ ಮಾಡುವ ನಿಲುವು ಹೊಂದಿದ್ದೇವೆ ಎಂದು ತಿಳಿಸಿದರು.

ಕಾಂಗ್ರೆಸ್ ಪಕ್ಷಕ್ಕೆ ಷರತ್ತು ರಹಿತವಾಗಿ ಸೇರಿದ್ದೇನೆ. ವಿಧಾನ ಪರಿಷತ್ ಚುನಾವಣೆಗೆ ಯಾರಿಗೆ ಟಿಕೆಟ್ ಕೊಟ್ಟರು ಗೆಲವು ಮುಖ್ಯ. ಜೆಡಿಎಸ್ ಪಕ್ಷ ತೊರೆಯಲು ಯಾವುದೆ ಕಾರಣವಿಲ್ಲ. ಆ ಪಕ್ಷದ ಬಗ್ಗೆ ಯಾವುದೆ ಬೇಸರವಿಲ್ಲ. ಪ್ರೀತಿಯಿಂದ ನಡೆಸಿಕೊಂಡಿದ್ದಾರೆ. ಸ್ಥಳೀಯವಾಗಿ ಕೆಲವು ಕಾರಣಗಳಿಂದಾಗಿ ಕಾಂಗ್ರೆಸ್ ಸೇರ್ಪಡೆ ಆಗಬೇಕಾಗಿದೆ. ರಾಜಕೀಯವೇ ಅವಕಾಶ. ಅವಕಾಶವಾದಿಯಲ್ಲದ ನಾಲ್ಕು ರಾಜಕಾರಣಿಗಳನ್ನು ತೋರಿಸಿ ಎಂದು ಸವಾಲು ಹಾಕಿದರು.

Ayanuru-Manjunatha-Meets-DK-Shivakumar-in-Benagaluru

ಇದನ್ನೂ ಓದಿ – ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಆಯನೂರು ಮಂಜುನಾಥ್‌ ಭೇಟಿ, ಕುತೂಹಲ ಮೂಡಿಸಿದ ನಡೆ

ಪ್ರಸನ್ನ ಕುಮಾರ್ ಸೇರುತ್ತಾರ?

ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್ ಅವರು ಕೆಲವರ ವರ್ತನೆಯಿಂದ ಪಕ್ಷ ತೊರೆದಿದ್ದೇನೆ ಎಂದು ತಮಗೆ ಹೇಳಿದ್ದರು. ಪರಿಸ್ಥಿತಿ ಬದಲಾದ ಮೇಲೆ ಅವರು ಕಾಂಗ್ರೆಸ್ ಸೇರಬಹುದು. ಈಗ ನಾನು ಪಕ್ಷ ಸೇರ್ಪಡೆ ಆಗುತ್ತಿರುವುದು ಸಹಜವಾಗಿ ಆಕಾಂಕ್ಷಿಗಳಲ್ಲಿ ಬೇಸರ ಮೂಡಿಸಿದೆ. ಅದನ್ನು ಲೆಕ್ಕಕ್ಕೆ ತೆಗೆದುಕೊಳ್ಳಬೇಕಿಲ್ಲ. ಕಾಂಗ್ರೆಸ್ ಪಕ್ಷದ ಎಲ್ಲ ಶಾಸಕರು ತಮ್ಮ ಸೇರ್ಪಡೆಯನ್ನು ಸ್ವಾಗತಿಸಿದ್ದಾರೆ ಎಂದು ತಿಳಿಸಿದರು.

ಯೋಗೇಶ್ ಆತಂಕಕ್ಕೆ ಒಳಗಾಗಿರಬೇಕು

ಪಾಲಿಕೆ ಸದಸ್ಯ ಹೆಚ್.ಸಿ.ಯೋಗೇಶ್ ಅವರು ಆತಂಕಕ್ಕೀಡಾದಂತೆ ಕಂಡು ಬರುತ್ತಿದೆ. ಅವರಿಗಿನ್ನು ಸಣ್ಣ ವಯಸ್ಸು. ತಾಳ್ಮೆ ವಹಿಸಬೇಕು. ಗ್ಯಾರಂಟಿ ಯೋಜನೆ ಸೇರಿದಂತೆ ನಾನಾ ಕಾರಣಕ್ಕೆ ಅವರಿಗೆ ಗೆಲ್ಲುವ ಅವಕಾಶ ಇತ್ತು. ಇಂತಹ ವಾತಾವರಣವಿದ್ದರು ಗೆಲ್ಲಲಾಗದೆ ವಿಚಲಿತರಾದಂತೆ ಕಾಣುತ್ತಿದೆ. ಹಿಂದೆ ಪ್ರಸನ್ನ ಕುಮಾರ್ ಅವರು ಪಡೆದ ಮತಕ್ಕಿಂತಲು 8 ಸಾವಿರ ಮತಗಳನ್ನಷ್ಟೆ ಹೆಚ್ಚಿಗೆ ಪಡೆದಿದ್ದಾರೆ ಎಂದರು.

ಯೋಗೇಶ್ ಅವರ ತಂದೆ ಚಂದ್ರಶೇಖರಪ್ಪ ಅವರು ನಮ್ಮೊಂದಿಗೆ ಬಿಜೆಪಿಯಲ್ಲಿ ಇದ್ದಾಗ ಕಾಂಗ್ರೆಸ್ ನಾಯಕರನ್ನು ಟೀಕಿಸಿದ್ದರು. ಅದರ ರೆಕಾರ್ಡುಗಳು ತೆಗೆಯಲಿ. ಯೋಗೇಶ್ ಅವರೊಂದಿಗೆ ಚರ್ಚೆ ಮಾಡುತ್ತೇನೆ ಎಂದು ಆಯನೂರು ಮಂಜುನಾಥ್ ತಿಳಿಸಿದರು‌.

ಪ್ರಮುಖರಾದ ರಿಯಾಜ್ ಅಹಮದ್, ಐಡಿಯಲ್ ಗೋಪಿ, ಧೀರರಾಜ್ ಹೊನ್ನವಿಲೆ, ಶಿ.ಜು.ಪಾಶ, ಆಯನೂರು ಸಂತೋಷ್ ಸೇರಿದಂತೆ ಪ್ರಮುಖರು ಇದ್ದರು.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 23, 2023

ವಿದ್ಯುತ್‌ ಕಂಬದಿಂದ ಬಿದ್ದು ಮೈಸೂರು ಮೂಲದ ಕಾರ್ಮಿಕ ಸಾವು, ಹೇಗಾಯ್ತು ಘಟನೆ?

ವಿದ್ಯುತ್‌ ಕಂಬದಿಂದ ಬಿದ್ದು ಮೈಸೂರು ಮೂಲದ ಕಾರ್ಮಿಕ ಸಾವು, ಹೇಗಾಯ್ತು ಘಟನೆ?

ಶಿವಮೊಗ್ಗದಲ್ಲಿ ಮಿನಿಸ್ಟರ್‌ ಕಚೇರಿ ಮುಂಭಾಗ ಪ್ರತಿಭಟನೆ, ಬೇಡಿಕೆ ಈಡೇರಿಕೆಗೆ ಪಟ್ಟು

ಶಿವಮೊಗ್ಗದಲ್ಲಿ ಮಿನಿಸ್ಟರ್‌ ಕಚೇರಿ ಮುಂಭಾಗ ಪ್ರತಿಭಟನೆ, ಬೇಡಿಕೆ ಈಡೇರಿಕೆಗೆ ಪಟ್ಟು

ಜ್ಯೋತಿಷಿ ಕಮಲಾಕರ್‌ ಭಟ್‌ ಶಿವಮೊಗ್ಗ ಪೊಲೀಸರ ವಶಕ್ಕೆ, ಕಾರಣವೇನು?

ಜ್ಯೋತಿಷಿ ಕಮಲಾಕರ್‌ ಭಟ್‌ ಶಿವಮೊಗ್ಗ ಪೊಲೀಸರ ವಶಕ್ಕೆ, ಕಾರಣವೇನು?

ಕುಂಸಿ ಸುತ್ತಾಮುತ್ತಾ ಏ.8ರಂದು ಇಡೀ ದಿನ ಕರೆಂಟ್‌ ಇರಲ್ಲ, ಯಾವ್ಯಾವ ಊರು? ಇಲ್ಲಿದೆ ಲಿಸ್ಟ್

ಕುಂಸಿ ಸುತ್ತಾಮುತ್ತಾ ಏ.8ರಂದು ಇಡೀ ದಿನ ಕರೆಂಟ್‌ ಇರಲ್ಲ, ಯಾವ್ಯಾವ ಊರು? ಇಲ್ಲಿದೆ ಲಿಸ್ಟ್

ಸಕೆಂಡ್‌ ಹ್ಯಾಂಡ್‌ ಕಾರು ಖರೀದಿ ತಂದ ಫಜೀತಿ, ಶಿವಮೊಗ್ಗದಲ್ಲಿ ದಾಖಲಾಯ್ತು ಕೇಸ್‌? ಆಗಿದ್ದೇನು?

ಸಕೆಂಡ್‌ ಹ್ಯಾಂಡ್‌ ಕಾರು ಖರೀದಿ ತಂದ ಫಜೀತಿ, ಶಿವಮೊಗ್ಗದಲ್ಲಿ ದಾಖಲಾಯ್ತು ಕೇಸ್‌? ಆಗಿದ್ದೇನು?

ಶಿವಮೊಗ್ಗದ JNN ಇಂಜಿನಿಯರಿಂಗ್‌ ಕಾಲೇಜಿನಲ್ಲಿ ಬೂಟ್‌ ಕ್ಯಾಂಪ್‌, ಏನಿದು?

ಶಿವಮೊಗ್ಗದ JNN ಇಂಜಿನಿಯರಿಂಗ್‌ ಕಾಲೇಜಿನಲ್ಲಿ ಬೂಟ್‌ ಕ್ಯಾಂಪ್‌, ಏನಿದು?

ಶಿವಮೊಗ್ಗ, ಶಿಕಾರಿಪುರ, ಸಾಗರದ ಐದು ಕಡೆ ಲೋಕಾಯುಕ್ತ ದಾಳಿ, ಪರಿಶೀಲನೆ

ಶಿವಮೊಗ್ಗ, ಶಿಕಾರಿಪುರ, ಸಾಗರದ ಐದು ಕಡೆ ಲೋಕಾಯುಕ್ತ ದಾಳಿ, ಪರಿಶೀಲನೆ

ಹೊಸನಗರ ಕ್ಷೇತ್ರ ಮರು ರಚನೆ, ಪಾದಯಾತ್ರೆ ಸಮಾರೋಪ, ಸಚಿವ, ಸಂಸದರು ಏನಂದ್ರು?

ಹೊಸನಗರ ಕ್ಷೇತ್ರ ಮರು ರಚನೆ, ಪಾದಯಾತ್ರೆ ಸಮಾರೋಪ, ಸಚಿವ, ಸಂಸದರು ಏನಂದ್ರು?

ಎದುರು ಮನೆಗೆ ನುಗ್ಗಿದ್ದ ಭದ್ರಾವತಿ ವ್ಯಕ್ತಿಗೆ ಜೈಲು, ದಂಡ, ಎಷ್ಟು ವರ್ಷ ಶಿಕ್ಷೆ?

ಎದುರು ಮನೆಗೆ ನುಗ್ಗಿದ್ದ ಭದ್ರಾವತಿ ವ್ಯಕ್ತಿಗೆ ಜೈಲು, ದಂಡ, ಎಷ್ಟು ವರ್ಷ ಶಿಕ್ಷೆ?

ಭದ್ರಾವತಿ ತಾಲೂಕಿನ ಹಲವು ಕಡೆ ಇವತ್ತು ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಲಿಸ್ಟ್

ಭದ್ರಾವತಿ ತಾಲೂಕಿನ ಹಲವು ಕಡೆ ಇವತ್ತು ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಲಿಸ್ಟ್

Leave a Comment