ಶಿವಮೊಗ್ಗ ಲೈವ್.ಕಾಂ | 03 ಏಪ್ರಿಲ್ 2019
ಬಿ.ಎಸ್.ಯಡಿಯೂರಪ್ಪ ತಮಗೆ ಮಾಟ ಮಾಡಿಸಿದ್ದಾರೆ. ಹಾಗಾಗಿ ನಾನು ಸ್ವಲ್ಪ ಮಂಕಾಗಿದ್ದೇನೆ ಅಂತಾ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಆರೋಪಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬೇಳೂರು ಗೋಪಾಲಕೃಷ್ಣ, ತಾವು ಕಳೆದ ಕೆಲವು ದಿನಗಳಿಂದ ಮಂಕಾಗಿದ್ದು ನಿಜ. ಇದಕ್ಕೆ ಬಿ.ಎಸ್.ಯಡಿಯೂರಪ್ಪ ಕಾರಣ. ಅವರು ತಮ್ಮ ಮೇಲೆ ಮಾಟ ಮಾಡಿಸಿದ್ದಾರೆ. ಆದರೆ ತಾವೀಗ ಆ ಮಾಟಕ್ಕೆ ಪ್ರತಿತಂತ್ರ ರೂಪಿಸಿದ್ದು, ಇನ್ಯಾವ ಮಾಟಕ್ಕೂ ಹೆದರುವುದಿಲ್ಲ ಎಂದು ತಮ್ಮ ಕೈಯಲ್ಲಿ ಧರಿಸಿದ ಬಂಗಾರದ ವಾಚನ್ನು ಪತ್ರಕರ್ತರಿಗೆ ತೋರಿಸಿ ಯಡಿಯೂರಪ್ಪ ವಿರುದ್ಧ ವ್ಯಂಗ್ಯ ಮಾಡಿದರು.
ಅಡ್ವಾಣಿಯಂತೆ ಯಡಿಯೂರಪ್ಪ ಕೂಡ ಮೂಲೆಗುಂಪಾಗ್ತಾರೆ
ಲೋಕಸಭಾ ಚುನಾವಣೆಯ ನಂತರ ಯಡಿಯೂರಪ್ಪ ಅವರನ್ನು ಬಿಜೆಪಿಯೇ ಮೂಲೆ ಗುಂಪಾಗಿ ಮಾಡುವುದು ನೂರಕ್ಕೆ ನೂರರಷ್ಟು ನಿಜ. ಬಿಜೆಪಿ ರಾಷ್ಟ್ರೀಯ ನಾಯಕರು ಅಡ್ವಾಣಿಯಂತಹ ವ್ಯಕ್ತಿಗಳನ್ನೇ ಮೂಲೆಗುಂಪು ಮಾಡಿದ್ದಾರೆ. ಇನ್ನು ಬಿ.ಎಸ್. ಯಡಿಯೂರಪ್ಪನವರು ಯಾವಲೆಕ್ಕ. ಸದ್ಯದಲ್ಲೇ ಅವರು ಮೂಲೆಗುಂಪಾಗುತ್ತಾರೆ ಎಂದರು.

ನಿಖಿಲ್ ಕುಮಾರ್ ಸ್ವಾಮಿ ಆಸ್ತಿ 9 ಕೋಟಿ ಎಂದು ಬಿಜೆಪಿಯವರು ಟೀಕಿಸುತ್ತಾರೆ. ಆದರೆ ಬಿಜೆಪಿ ಶಿವಮೊಗ್ಗ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಆಸ್ತಿ ಕಳೆದ ಐದು ತಿಂಗಳಲ್ಲಿ 12 ಕೋಟಿ ಹೆಚ್ಚಾಗಿದೆ. ಈ ಆದಾಯ ಎಲ್ಲಿಂದ ಬಂತು ಎಂದು ಬೇಳೂರು ಗೋಪಾಲಕೃಷ್ಣ ಪ್ರಶ್ನಿಸಿದರು.
ಸಿಡಿ ಇಟ್ಟುಕೊಂಡು ಬ್ಲಾಕ್ ಮೇಲ್
ಯಡಿಯೂರಪ್ಪ ಕುಟುಂಬಕ್ಕೆ ಸಂಬಂಸಿದ ಸಿಡಿ ಹರತಾಳು ಹಾಲಪ್ಪ ಹಾಗೂ ಕೆ.ಎಸ್.ಈಶ್ವರಪ್ಪ ಪಿಎ ಬಳಿ ಇದೆ. ಇದೇ ಕಾರಣದಿಂದ ಕಳೆದ ಬಾರಿ ರಾಘವೇಂದ್ರ ಹಾಗೂ ವಿಜಯೇಂದ್ರ ಅವರಿಗೆ ಬ್ಲಾಕ್ ಮೇಲ್ ಮಾಡಿ ಸಾಗರ ಕ್ಷೇತ್ರದಲ್ಲಿ ಹಾಲಪ್ಪ ಟಿಕೆಟ್ ಪಡೆದಿದ್ದಾರೆ. ಇದನ್ನು ಸಾಗರದಲ್ಲಿ ಮೊನ್ನೆ ನಡೆದ ಸಭೆಯಲ್ಲಿ ವಿಜಯೇಂದ್ರ ಅವರು ಪರೋಕ್ಷವಾಗಿ ಹೇಳಿದ್ದಾರೆ. ಯಡಿಯೂರಪ್ಪ ಶೋಭಾ ಕರಂದ್ಲಾಜೆ ಕೇರಳ ದೇವಸ್ಥಾನದಲ್ಲಿ ಮದುವೆಯಾಗಿದ್ದಾರೆ ಎಂದು ಈ ಹಿಂದೆ ಕೆಜೆಪಿ ಸಂಸ್ಥಾಪಕರೇ ಹೇಳಿದ್ದರು. ಅದೇ ಸಿಡಿ ಹಾಲಪ್ಪ ಅವರ ಬಳಿ ಇರಬೇಕು ಅಂತಾ ಬೇಳೂರು ಗೋಪಾಲಕೃಷ್ಣ ಆರೋಪಿಸಿದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | shivamoggalive@gmail.com
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200