ಬಿ-ಫಾರಂ ಜೊತೆ ಶಿವಮೊಗ್ಗದಲ್ಲಿ ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ, ಸಚಿವರು, ಶಾಸಕರು ಸಾಥ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 23 ನವೆಂಬರ್ 2021

ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್’ಗೆ ನಡೆಯುವ ಚುನಾವಣೆಗೆ ಬಿಜೆಪಿ ಅಭ್ಯರ್ಥಿ ಡಿ.ಎಸ್.ಅರುಣ್ ಅವರು ಇವತ್ತು ಮತ್ತೊಂದು ನಾಮಪತ್ರ ಸಲ್ಲಿಸಿದರು. ಪಕ್ಷದ ಬಿ-ಫಾರಂ ಜೊತೆಗೆ ಹೆಚ್ಚುವರಿ ನಾಮಪತ್ರ ಸಲ್ಲಿಸಲಾಗಿದೆ.

ADVT JULY NANJAPPA HOSPITAL HOME LAB TESTING

ಗ್ರಾಮೀಣಾಭಿವೃದ್ದಿ ಸಚಿವ ಕೆ.ಎಸ್.ಈಶ್ವರಪ್ಪ, ಸಾಗರ ಶಾಸಕ ಹರತಾಳು ಹಾಲಪ್ಪ ಅವರೊಂದಿಗೆ ತೆರಳಿ ಡಿ.ಎಸ್.ಅರುಣ್ ಅವರು ನಾಮಪತ್ರ ಸಲ್ಲಿಸಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ಡಿ.ಎಸ್.ಅರುಣ್ ಅವರು ನಾಮಪತ್ರ ಸಲ್ಲಿಸಿದರು.

‘ವಿಜೇತ ಎಂಎಲ್ಸಿ ಅಭ್ಯರ್ಥಿ’

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಕೆ.ಎಸ್.ಈಶ್ವರಪ್ಪ, ಹತ್ತು ವಿಧಾನ ಸಭೆ ಕ್ಷೇತ್ರದ ಪೈಕಿ ಒಂಭತ್ತು ಮಂದಿ ಬಿಜೆಪಿ ಶಾಸಕರಿದ್ದೇವೆ. ಇಬ್ಬರು ಸಂಸದರಿದ್ದಾರೆ. ಗ್ರಾಮ ಪಂಚಾಯಿತಿ, ನಗರಸಭೆ, ಪಟ್ಟಣ ಪಂಚಾಯಿತಿಯಲ್ಲಿ ಅತಿ ಹೆಚ್ಚು ಸದಸ್ಯರನ್ನು ಬಿಜೆಪಿ ಹೊಂದಿದೆ. ಆದ್ದರಿಂದ ನಮ್ಮ ಅಭ್ಯರ್ಥಿ ಗೆಲುವು ಸಾಧಿಸುತ್ತಾರೆ ಎಂದು ತಿಳಿಸಿದರು.

‘ನಮ್ಮ ಗೆಲುವು ಕಾಂಗ್ರೆಸಿಗರಿಗೂ ಗೊತ್ತು’

ಶಾಸಕ ಹರತಾಳು ಹಾಲಪ್ಪ ಮಾತನಾಡಿ, ವಿಧಾನ ಪರಿಷತ್ ಚುನಾವಣೆಯಲ್ಲಿ ನಾವು ಗೆಲ್ಲುತ್ತೇವೆ ಅನ್ನುವುದು ಎಲ್ಲರಿಗೂ ಗೊತ್ತಿದೆ. ಕಾಂಗ್ರೆಸ್ ಪಕ್ಷದವರಿಗೂ ಬಿಜೆಪಿ ಅಭ್ಯರ್ಥಿ ಗೆಲುವು ಸಾಧಿಸುತ್ತಾರೆ ಅನ್ನುವುದು ಗೊತ್ತಿದೆ ಎಂದು ಹೇಳಿದರು.

ಡಿ.ಎಸ್.ಅರುಣ್ ಅವರು ನಾಮಪತ್ರ ಸಲ್ಲಿಸುವ ಸಂದರ್ಭ ಬಿಜೆಪಿ ವಿವಿಧ ಮುಖಂಡರು ಹಾಜರಿದ್ದರು.

shivamogga live subscribe band

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ

HOME LOAN SERVICES
ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!

🏠 ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಇಂದೇ ಸಂಪರ್ಕಿಸಿ:


📞 99721 94422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment