ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ | 23 ಜುಲೈ 2019
ಕಾಂಗ್ರೆಸ್ – ಜೆಡಿಎಸ್ ಸಮ್ಮಿಶ್ರ ಸರ್ಕಾರ ವಿಶ್ವಾಸಮತದಲ್ಲಿ ಸೋಲನುಭವಿಸಿದೆ. ಇದರ ಬೆನ್ನಿಗೆ ಬಿಜೆಪಿ ಸರ್ಕಾರ ರಚನೆಯಾಗುತ್ತಿರುವ ಸಂಭ್ರಮ ಮೊಳಕೆಯೊಡೆದಿದೆ. ಶಿವಮೊಗ್ಗದಲ್ಲಿ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದರು.
ಎಲ್ಲೆಲ್ಲಿ ಹೇಗಿತ್ತು ಸಂಭ್ರಮಾಚರಣೆ
ಬಿಜೆಪಿ ಕಚೇರಿ
ಶಿವಮೊಗ್ಗ ಬಿಜೆಪಿ ಕಚೇರಿಯಲ್ಲಿ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದರು. ಪಟಾಕಿ ಸಿಡಿಸಿ, ಸಿಹಿ ಹಂಚಿದರು. ಪ್ರಧಾನಿ ನರೇಂದ್ರ ಮೋದಿ, ಅಮಿತ್ ಷಾ, ಯಡಿಯೂರಪ್ಪ, ಈಶ್ವರಪ್ಪ ಸೇರಿದಂತೆ ಬಿಜೆಪಿ ಮುಖಂಡರ ಪರವಾಗಿ ಘೋಷಣೆ ಕೂಗಿದರು.

ವಿನೋಬನಗರದಲ್ಲಿ ಯಡಿಯೂರಪ್ಪ ಮನೆ
ಯಡಿಯೂರಪ್ಪ ಅವರ ವಿನೋಬನಗರದ ನಿವಾಸದಲ್ಲೂ ಅಭಿಮಾನಿಗಳು ಸಂಭ್ರಮಾಚರಣೆ ಮಾಡಿದರು. ಪಟಾಕಿ ಸಿಡಿಸಿ, ಸಿಹಿ ಹಂಚಿದರು.

ಯಡಿಯೂರಪ್ಪ ಪರವಾಗಿ ಘೋಷಣೆ ಕೂಗಿದರು. ಯಡಿಯೂರಪ್ಪ ಪುತ್ರ ಅರುಣಾದೇವಿ, ಅವರ ಪತಿ ಉದಯ್ ಕುಮಾರ್ ಅವರು ಬಿಜೆಪಿ ಕಾರ್ಯಕರ್ತರು, ಯಡಿಯೂರಪ್ಪ ಅವರ ಅಭಿಮಾನಿಗಳಿಗೆ ಸಿಹಿ ಹಂಚಿದರು.

ಮಲ್ಲೇಶ್ವರ ನಗರದ ಈಶ್ವರಪ್ಪ ಮನೆ
ಈಶ್ವರಪ್ಪ ಅವರ ಮನೆಯಲ್ಲೂ ಅಭಿಮಾನಿಗಳು, ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದರು.

ಇಲ್ಲಿಯೂ ಪಟಾಕಿ ಸಿಡಿಸಿ, ಸಿಹಿ ಹಂಚಲಾಯಿತು. ಈಶ್ವರಪ್ಪ ಅವರ ಕುಟುಂಬದವರು, ಮೊಮ್ಮಕ್ಕಳು ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡಿದ್ದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | [email protected]
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200