ಶಿವಮೊಗ್ಗ: ಶಿಕಾರಿಪುರದ ಬಿಜೆಪಿ ಮುಖಂಡ ಹಾಗೂ ಉದ್ಯಮಿ ಎನ್.ವಿ.ಈರೇಶ್ ತಮ್ಮ ಬೆಂಬಲಿಗರ ಜೊತೆಗೆ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕಾಂಗ್ರೆಸ್ (Congress) ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾದರು.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಎನ್.ವಿ. ಈರೇಶ್ ಜತೆಗೆ ಬಳ್ಳಿಗಾವಿ ಶಿವಕುಮಾರ್, ಹಾಲೇಶಪ್ಪ, ತಾಳಗುಂದ ರಾಜಪ್ಪ ಸೇರಿದಂತೆ ಪ್ರಮುಖರು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಶಿಕಾರಿಪುರದ ಪುಷ್ಪಾ ಶಿವಕುಮಾರ್ ಸಮ್ಮುಖದಲ್ಲಿ ಪಕ್ಷಕ್ಕೆ ಸೇರಿದರು. ಕಾಂಗ್ರೆಸ್ ಜಿಲ್ಲಾಧ್ಯಕ್ಷ ಆರ್. ಪ್ರಸನ್ನಕುಮಾರ್ ಪಕ್ಷದ ಧ್ವಜ ನೀಡುವ ಮೂಲಕ ಸ್ವಾಗತಿಸಿದರು.
ಶಿಕಾರಿಪುರ ಕ್ಷೇತ್ರವನ್ನು ಮತ್ತೆ ಕಾಂಗ್ರೆಸ್ ತೆಕ್ಕೆಗೆ ತೆಗೆದುಕೊಳ್ಳಬೇಕು. ಅದಕ್ಕಾಗಿ ಈಗಿನಿಂದಲೆ ಪಕ್ಷದ ಹಿರಿಯರು ಹಾಗೂ ರಾಜ್ಯ ನಾಯಕರ ಮಾರ್ಗದರ್ಶನದಲ್ಲಿ ಪಕ್ಷವನ್ನು ಮತ್ತಷ್ಟು ಬಲಗೊಳಿಸಲಾಗುವುದು.
– ಪುಷ್ಪಾ ಶಿವಕುಮಾರ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ

ಎಸ್.ಟಿ.ಹಾಲಪ್ಪ, ಗೋಣಿ ಮಾಲತೇಶ್, ಚಂದ್ರಶೇಖರ್, ಭಂಡಾರಿ ಮಾಲತೇಶ್, ನಿಂಗಪ್ಪ, ಶಿವಣ್ಣ, ಶಿವಾನಂದ್, ರವೀಂದ್ರ, ಉಳ್ಳಿ ದರ್ಶನ್, ಸ್ಟೆಲ್ಲಾ ಮಾರ್ಟಿನ್, ಅರ್ಚನಾ ನಿರಂಜನ್ ಮತ್ತಿತರರಿದ್ದರು.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಬಿಗಿ ಬಂದೋಬಸ್ತ್, ಸಾವಿರ ಸಾವಿರ ಪೊಲೀಸರ ನಿಯೋಜನೆ
BJP leaders joins congress party
LATEST NEWS
- ನದಿಗಳಿಗೆ ಕಸಾಯಿಖಾನೆಯ ತ್ಯಾಜ್ಯ, ಅರುಣ್ ಕಳವಳ

- ಶಿವಮೊಗ್ಗದಲ್ಲಿ ಹಾಲಿನ ಪ್ಯಾಕೆಟ್ ಕಳ್ಳರ ಹಾವಳಿ, ಸಿಸಿಟಿವಿಯಲ್ಲಿ ಸೆರೆಯಾಯ್ತು ದೃಶ್ಯ

- KFD ಸೋಂಕಿಗೆ ಮೊದಲ ಬಲಿ, ತೀರ್ಥಹಳ್ಳಿಯ ಯುವಕ ಮಣಿಪಾಲದಲ್ಲಿ ಸಾವು

- ಶಿವಮೊಗ್ಗ ಸಮೀಪ ಧಗಧಗ ಹೊತ್ತಿ ಉರಿದ ಸ್ಲೀಪರ್ ಬಸ್ಸು, ಅದೃಷ್ಟವಶಾತ್ ಪ್ರಯಾಣಿಕರು ಪಾರು, ಆಗಿದ್ದೇನು?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? | 27 ಜನವರಿ 2026 | ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು





