ಶಿವಮೊಗ್ಗದಲ್ಲಿ ಬಿಜೆಪಿಗೆ ಮುನ್ನಡೆ, ಕಾರ್ಯಕರ್ತರಿಂದ ಸಂಭ್ರಮಾಚರಣೆ, ಡಿ.ಎಸ್.ಅರುಣ್’ಗೆ ಅಭಿನಂದನೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA LIVE NEWS | 14 ಡಿಸೆಂಬರ್ 2021

ತೀವ್ರ ಕುತೂಹಲ ಕೆರಳಿಸಿರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಡಿ.ಎಸ್.ಅರುಣ್ ಮುನ್ನಡೆ ಸಾಧಿಸಿದ್ದಾರೆ. ವಿಚಾರ ತಿಳಿಯುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರು ಸಾಮಾಜಿಕ ಜಾಲತಾಣದಲ್ಲಿ ಸಂತಸ ವ್ಯಕ್ತಪಡಿಸಿದ್ದಾರೆ.

AVvXsEgs2CAQQwFXPEeKJ0M8TIYSuTjC1YFP87yReiHpVPmRryODfVeCXuFAqftB8kOZ5mPWZitv CEgSxJ 0UftK 3Xtg FQnjiLvzYXdPYIyMcbnCizoegDYgVDMGV3v1L2lUIeE2 3X339z1W9X2I3kEIgBbfYiP ZYP9tZPaJV64qH Ith d6U8fBL4P5A=s926

ಸಹ್ಯಾದ್ರಿ ಕಾಲೇಜಿನಲ್ಲಿ ಮತ ಎಣಿಕೆ ಕಾರ್ಯ ನಡೆಯುತ್ತಿದೆ. ಸಿಂಧು, ಅಸಿಂಧು ಮತಗಳನ್ನು ಬೇರ್ಪಡಿಸುವ ಪ್ರಕ್ರಿಯೆ ಪೂರ್ಣಗೊಂಡಿದೆ. 14 ಟೇಬಲ್’ಗಳಲ್ಲಿ ಮತ ಎಣಿಕೆ ಪ್ರಕ್ರಿಯೆ ನಡೆಯುತ್ತಿದೆ.

ಆರಂಭಿಕ ಹಂತದಲ್ಲಿ ಬಿಜೆಪಿಯ ಡಿ.ಎಸ್.ಅರುಣ್ ಅವರು ಮುನ್ನಡೆ ಸಾಧಿಸಿದ್ದಾರೆ ಎಂದು ತಿಳಿದು ಬಂದಿದೆ. ಆದರೆ ಪಕ್ಷವಾರು ಮತಗಳ ಕುರಿತು ಇನ್ನಷ್ಟೆ ಮಾಹಿತಿ ಲಭ್ಯವಾಗಿದೆ.

ಬಿಜೆಪಿ ಅಭ್ಯರ್ಥಿ ಡಿ.ಎಸ್.ಅರುಣ್ ಅವರು ಕಾಂಗ್ರೆಸ್, ಜೆಡಿಯು ಮತ್ತು ಪಕ್ಷೇತರ ಅಭ್ಯರ್ಥಿಗಳಿಗಿಂತಲೂ ಹೆಚ್ಚು ಮತಗಳನ್ನು ಪಡೆದು, ಗೆಲುವಿನ ಗೆರೆ ದಾಟಿದ್ದಾರೆ ಎಂದು ತಿಳಿದು ಬಂದಿದೆ. ಈಗಾಗಲೇ ಬಿಜೆಪಿ ಶಾಸಕರು ಡಿ.ಎಸ್.ಅರುಣ್ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ

ಇನ್ನು, ಡಿ.ಎಸ್.ಅರುಣ್ ಅವರು ಮುನ್ನಡೆ ಸಾಧಿಸಿರುವ ವಿಚಾರ ತಿಳಿಯುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ಮಾಡುತ್ತಿದ್ದಾರೆ. ಮತ ಎಣಿಕೆ ಕೇಂದ್ರದ ಮುಂದೆ ಬಿಜೆಪಿ, ಪ್ರಧಾನಿ ನರೇಂದ್ರ ಮೋದಿ, ಯಡಿಯೂರಪ್ಪ ಸೇರಿದಂತೆ ಪ್ರಮುಖ ನಾಯಕರ ಪರವಾಗಿ ಘೋಷಣೆ ಕೂಗುತ್ತಿದ್ದಾರೆ.

shivamogga live subscribe New Kannada

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment